ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಸೈಬರ್ ತಜ್ಞ ಡಾ.ಉದಯ್ ಪುರಾಣಿಕ- ಸಮ್ಮೇಳನದ ನುಡಿಸಿರಿಗೆ ಸರ್ವಾಧ್ಯಕ್ಷತೆ ಗೌರವ

Team Udayavani, Feb 2, 2023, 3:30 PM IST

5-kushtagi1

ಕುಷ್ಟಗಿ: ಕೋವಿಡ್-19 ಎರಡನೇ ಅಲೆ ಹಿನ್ನೆಲೆ ಹನುಮಸಾಗರದಲ್ಲಿ ಮುಂದೂಡಿಕೆಯಾಗಿದ್ದ 2ನೇ ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ 4 ಮತ್ತು‌5 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಜಿಲ್ಲಾ ಕಸಾಪ ಹಿಂದಿನ ಅಧ್ಯಕ್ಷ ರಾಜಶೇಖರ ಅಂಗಡಿ ನೇತೃತ್ವದಲ್ಲಿ 2021, ಏಪ್ರಿಲ್ 1 ಹಾಗೂ 2ರಂದು ನಡೆಸಲು ನಿರ್ಧರಿಸಲಾಗಿತ್ತು. ಅಂತೆಯೇ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಮಾಹಿತಿ ತಂತ್ರಜ್ಞಾನದ ‌ಸಲಹೆಗಾರ ಡಾ‌. ಉದಯ ಪುರಾಣಿಕ ಅವರನ್ನು ನೇಮಿಸಿತ್ತು.  ಆದರೆ ಆ ಸಂದರ್ಭದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಗಂಭೀರವಾಗಿ ಪರಿಗಣಿಸಿದ್ದರಿಂದ ಜಿಲ್ಲಾಡಳಿತ ಈ ಸಮ್ಮೇಳನವನ್ನು ಮುಂದೂಡಿತು.

ನಂತರ 2021ರ ನವೆಂಬರ್ ಕಸಾಪ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ಹೊಸ ಅಧ್ಯಕ್ಷ ಶರಣಗೌಡ ಪಾಟೀಲ ಹೇರೂರು ಅಧ್ಯಕ್ಷರಾದ ಮೇಲೆ ಅರ್ಧಕ್ಕೆ ನಿಂತ ಸಮ್ಮೇಳನ ನಡೆಸಲು ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಅವರಿಂದ ಅನುಮತಿ ಸಿಗಲಿಲ್ಲ.

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳಿಕ ಹನುಮಸಾಗರ 9ನೇ ಜಿಲ್ಲಾ ಸಮ್ಮೇಳನ ಆಯೋಜಿಸಲು ಇದೀಗ ಸಮ್ಮತಿ ಸಿಕ್ಕಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುವಾರ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರನ್ನು ಭೇಟಿ ಮಾಡಿದ್ದು, ಅದರಂತೆ ಅವರು ಮಾರ್ಚ್ 4‌,5 ರಂದು ದಿನಾಂಕ ಸೂಚಿಸಿದ್ದು, ಅದೇ ದಿನಾಂಕ ಆಯೋಜಿಸುವ ಸಾದ್ಯತೆಗಳಿವೆ.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ, ಜಿಲ್ಲಾ ತಾಲೂಕು ಅಧ್ಯಕ್ಷ ಹನುಮಸಾಗರ ಹೋಬಳಿ ಘಟಕ ಅಧ್ಯಕ್ಷರು ಹಾಜರಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹನುಮಸಾಗರ ಹೋಬಳಿ‌ ಕಸಾಪ ಘಟಕದವರು ಫೆ.3ರಂದು ಹನುಮಸಾಗರದಲ್ಲಿ ಸ್ಥಳೀಯ ಗ್ರಾ.ಪಂ. ಸ್ಥಳೀಯರು ಹಾಗೂ ಜಿಲ್ಲಾ ಕಾರ್ಯಕಾರಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಮ್ಮೇಳನವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಯೋಜಿಸಲು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಹನುಮಸಾಗರ: ಮಾರ್ಚ 4, 5 ಎರಡು ದಿನಗಳ ಕನ್ನಡ ನುಡಿ ಹಬ್ಬ

ಹನುಮಸಾಗರಕ್ಕೆ 2ನೇ ಜಿಲ್ಲಾ ಸಮ್ಮೇಳನ ಭಾಗ್ಯ

ಹನುಮಸಾಗರದಲ್ಲಿ ಇದು ಎರಡನೇ ಜಿಲ್ಲಾ ಕಸಾಪ ಸಮ್ಮೇಳನ ಇದಾಗಿದೆ. ಕುಷ್ಟಗಿ ತಾಲೂಕಿನಲ್ಲಿ, ಜಿಲ್ಲಾ ಸಮ್ಮೇಳನ ಆಯೋಜನೆ 3 ನೇ ಬಾರಿ ಎನಿಸಿದೆ.

ಕಳೆದ 2007 ರಲ್ಲಿ ಡಿ.29 ಹಾಗೂ 29 ರಂದು ಡಾ. ‌ಮಹಾಂತೇಶ ಮಲ್ಲನಗೌಡ್ರು ಆಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆದಿತ್ತು. 16 ವರ್ಷಗಳ‌ ಬಳಿಕ ಇದೀಗ 9ನೇ ಸಮ್ಮೇಳನದ ಇದೇ ಗ್ರಾಮದಲ್ಲಿ ಆಯೋಜನೆ ಆಗುತ್ತಿದೆ.

ಈ‌ ನಡುವೆಯೂ ಒಂದೇ ಗ್ರಾಮಕ್ಕೆ ಎರಡು ಜಿಲ್ಲಾ ಸಮ್ಮೇಳನ ಆಯೋಜನೆ ಭಾಗ್ಯ ಎನ್ನುವ ವಿಶೇಷತೆ ಇದೆ. ಕೆಲ ಸಾಹಿತಿಗಳು ಒಂದೇ ಊರಲ್ಲಿ ಎರಡು ಬಾರಿ ಸಮ್ಮೇಳನ ಬೇಡ ಬೇರೆ ಊರಲ್ಲಿ ನಡೆಸಿ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.