ಕಸಾಪ ಸದಸ್ಯತ್ವಕ್ಕೆ ಕನಿಷ್ಠ 7ನೇ ತರಗತಿ ಕಡ್ಡಾಯ?


Team Udayavani, Feb 16, 2022, 5:40 AM IST

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆಯಲು ಕನಿಷ್ಠ 7ನೇ ತರಗತಿ ಪಾಸ್‌ ಆಗಿರಬೇಕು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಲು ಕನಿಷ್ಠ 7ನೇತರಗತಿ ವರೆಗೆ ಉತ್ತೀರ್ಣರಾಗಲೇಬೇಕು. ಇಲ್ಲವೆ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವಂತಹ ಸರಳ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಲೇಬೇಕು.

ಇಂತಹ ಒಂದು ತಿದ್ದುಪಡಿ ಕಸಾಪ ಬೈಲಾದಲ್ಲಿ ಅಳವಡಿಸುವಂತೆ ಪರಿಷತ್ತಿನ ನಿಬಂಧನೆ ತಿದ್ದುಪಡಿ ಸಲಹಾ ಸಮಿತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಶಿಫಾರಸು ಮಾಡಿದೆ.

ಈಗಾಗಲೇ ಸದಸ್ಯತ್ವ ಪಡೆದು ಗುರುತಿನ ಚೀಟಿ ಹೊಂದಿರುವ ಹಾಗೂ ಹೊಸದಾಗಿ ಸದಸ್ಯತ್ವ ಪಡೆಯುವವರಿಂದ 150ರೂ.ಪಡೆದು ಆಧುನಿಕ ಗುರುತಿನ ಚೀಟಿ ಸ್ಮಾರ್ಟ್‌ ಕಾರ್ಡ್‌ ನೀಡುವಂತೆ ಆ ಸ್ಮಾರ್ಟ್‌ ಕಾರ್ಡ್‌ಗೆ ಆಧಾರ್‌ ಕಾರ್ಡ್‌ ಜೋಡಣೆ ಕೂಡ ಮಾಡುವಂತೆ ಕೂಡ ತಜ್ಞರ ಸಲಹಾ ಸಮಿತಿ ಸಲಹೆ ನೀಡಿದೆ.

ರಾಜ್ಯದ ಪ್ರತಿ ಕಂದಾಯ ಜಿಲ್ಲೆಗೆ ಒಂದರಂತೆ ಜಿಲ್ಲಾ ಘಟಕಗಳನ್ನು ರಚಿಸುವುದು ತಾಲೂಕ ಘಟಕ ಅಧ್ಯಕ್ಷರನ್ನು ಆ್ಯಪ್‌ ಮೂಲಕ ಆಯ್ಕೆ ಮಾಡುವುದು ಸೇರಿದಂತೆ ಹಲವು ಹೊಸ ಅಂಶಗಳನ್ನು ಬೈಲಾದಲ್ಲಿ ಸೇರ್ಪಡೆ ಮಾಡುವಂತೆ ತಿದ್ದುಪಡಿ ಸಲಹಾ ಸಮಿತಿ ಸಲಹೆ ಕೊಟ್ಟಿದೆ.

ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ,ನ್ಯಾ.ಅರಳಿ ನಾಗರಾಜ ಅವರ ಅಧ್ಯಕ್ಷತೆಯ ನಿಬಂಧನೆ ತಿದ್ದುಪಡಿ ಸಲಹಾ ಸಮಿತಿ ನೀಡಿರು ಹೊಸ ಪ್ರಸ್ತಾಪಿತ ತಿದ್ದುಪಡಿ ಬಗ್ಗೆ ಮಾಹಿತಿ ನೀಡಿದರು.

ಪರಿಷತ್ತಿನ ಅಂಗರಚನೆಯಲ್ಲಿ ಈ ಹಿಂದೆ 18 ವರ್ಷ ಮೇಲ್ಪಟ್ಟ ಕನ್ನಡ ಓದು ಬರಹ ಬಲ್ಲ ವ್ಯಕ್ತಿಗಳು ಕನ್ನಡ ಸದಸ್ಯತ್ವ ಪಡೆಯಲು ಅರ್ಹರು ಎಂದಿತ್ತು. ಆದರೆ ಈಗಾಗಲೇ ಕನ್ನಡ ಓದುಬರಹ ಬಾರದವರೂ ಕೂಡ ಪರಿಷತ್ತಿನ ಸದಸ್ಯ ಹೊಂದಿದ್ದಾರೆ.ಆ ಹಿನ್ನೆಲೆಯಲ್ಲಿ ಪರಿಷತ್ತಿನ ನಿಬಂಧನೆ ತಿದ್ದುಪಡಿ ಸಲಹಾ ಸಮಿತಿ ಈಗ ಕನಿಷ್ಠ 7ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅಥವಾ ಸದಸ್ಯತ್ವ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಪರಿಷತ್ತು ನಡೆಸುವ ಸರಳ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರಿಗೆ ಸದಸ್ಯತ್ವ ನೀಡಿ ಎಂದು ಸಲಹೆ ನೀಡಿದೆ ಎಂದು ತಿಳಿಸಿದ್ದಾರೆ.

ಜತೆಗೆ ಸದಸ್ಯತ್ವ ಬಯಸುವ ವ್ಯಕ್ತಿ, ತನ್ನ ವಿರುದ್ಧ ಯಾವುದೇ ನ್ಯಾಯಾಲಯದಲ್ಲಿ ಯಾವುದೇ ಅಪರಾಧಿಕ ಪ್ರಕರಣ ವಿಚಾರಣೆಗೆ ಬಾಕಿಯಿರುವುದಿಲ್ಲ ಎಂಬುವುದಾಗಿ ಸ್ವ-ಘೋಷಿತ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು, ಒಂದು ವೇಳೆ ಕನ್ನಡ ನೆಲ,ಜಲ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ ಎನ್ನುವುದಾರರೆ ಈ ನಿಯಮ ಅನ್ವಯಿಸುವುದಿಲ್ಲ.ಇದಕ್ಕೆ ಸೂಕ್ತ ದಾಖಲಾತಿ ಕೂಡ ನೀಡಬೇಕಾಗುತ್ತದೆ ಎಂದು ಹೇಳಿದರು.

ಇದು ಸಲಹೆ ಅಷ್ಟೇ ಅಂತಿಮವಲ್ಲ:
ತಿದ್ದುಪಡಿ ಸಲಹಾ ಸಮಿತಿ ಪರಿಷತ್ತಿನ ಸುಧಾರಣೆ ಬಗ್ಗೆ ಹಲವು ಕಾನೂನು ಸಲಹೆಗಳನ್ನು ನೀಡಿದೆ.ಆದರೆ ಕಾನೂನು ತಜ್ಞರ ಸಲಹೆ ಅಂತಿಮವಲ್ಲ. ಈ ಬಗ್ಗೆ ಸಮಾಲೋಚನೆ ಸಭೆ ನಡೆಯಲಿದೆ. ಬಳಿಕ ಪರಿಷತ್ತಿನ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ. ಇದಾದ ನಂತರ ಕಾಗಿಲೆಯಲ್ಲಿ ವಿಶೇಷ ಸರ್ವ ಸದಸ್ಯರ ಸಭೆಯಲ್ಲಿ ಅಂತಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹೇಶ್‌ ಜೋಶಿ ಸ್ಪಷ್ಟಪಡಿಸಿದರು.

ಶೀಘ್ರದಲ್ಲೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಅಲ್ಲಿ ಸಂಬಂಧ ಪಟ್ಟ ಕೇಂದ್ರ ಸಚವರನ್ನು ಭೇಟಿ ಮಾಡಿ ಕನ್ನಡ ಶಾಸ್ತ್ರೀಯ ಸ್ಥಾನಮಾನದ ಅನುದಾನದ ವಿಚಾರ, ಕೇರಳ ಕನ್ನಡ ವಿವಿಯ ಉಳಿಕೆ ಸೇರಿದಂತೆ ಕನ್ನಡ ಭಾಷೆ ಕುರಿತ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಸಾಪ ಗೌರವ ಕೋಶಾಧ್ಯಕ್ಷ ಪಟೇಲ್‌ ಪಾಂಡು, ಗೌವರ ಸಂಚಾಲಕ (ಸಂಶೋಧನೆ,ಪ್ರಕಟಣೆ ವಿಭಾಗ) ಕೆ.ರಾಜಕುಮಾರ್‌, ನೇ.ಭ.ರಾಮಲಿಂಗಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬರಗೂರು ಹೆಸರು ಕೈಬಿಟ್ಟ ಕಸಾಪ
ಪರಿಷತ್ತಿನ ಬೈಲಾ ತಿದ್ದುಪಡಿಗೆ ಸಂಬಂಧಿಸಿದಂತೆ ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಮಠಾಧೀಶರಿಗೆ,ಕನ್ನಡಪರ ಚಿಂತಕರಿಗೆ ಹಾಗೂ ಹೋರಾಟಗಾರರಿಗೆ ಫೆ.17ರಂದು ನಡೆಯಲಿರುವ ಸಮಾಲೋಚನಾ ಸಭೆಗೆ ಆಹ್ವಾನ ನೀಡಿತ್ತು.ಆದರೆ ಕಸಾಪ ಮಾಧ್ಯಗಳಿಗೆ ನೀಡಿರುವ ಆಹ್ವಾನಿತ ಗಣ್ಯರ ಹೆಸರಿನ ಪಟ್ಟಿಯಲ್ಲಿ ಬರಗೂರು ರಾಮಚಂದ್ರಪ್ಪ ಅವರ ಹೆಸರು ಇಲ್ಲ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹೇಶ್‌ ಜೋಶಿ, ಬರಗೂರು ರಾಮಚಂದ್ರಪ್ಪ ಅವರು ಸಮಾಲೋಚನೆ ಸಭೆಗೆ ನಾನು ಬರುವುದಿಲ್ಲ ಎಂದು ಹೇಳಿದ್ದಾರೆ.ಆ ಹಿನ್ನೆಲೆಯಲ್ಲಿ ಗಣ್ಯರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.