ಕನ್ನಡದಲ್ಲಿ ತಾಂತ್ರಿಕ ಕೋರ್ಸ್‌ಗೆ ನಿರಾಸಕ್ತಿ; ಅವಲೋಕನ ಅಗತ್ಯ


Team Udayavani, Dec 28, 2021, 7:30 AM IST

ಕನ್ನಡದಲ್ಲಿ ತಾಂತ್ರಿಕ ಕೋರ್ಸ್‌ಗೆ ನಿರಾಸಕ್ತಿ; ಅವಲೋಕನ ಅಗತ್ಯ

ಭಾರೀ ಮಹತ್ವಾಕಾಂಕ್ಷೆಯೊಂದಿಗೆ ಮಾತೃಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ನೀಡಬೇಕು ಎಂಬ ಮಹದಾಸೆಯಿಂದ ಆರಂಭಿಸಲಾಗಿದ್ದ ಕನ್ನಡದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗೆ ರಾಜ್ಯದಲ್ಲಿ ಸ್ಪಂದನೆ ಸಿಕ್ಕಿಲ್ಲ. ಮೆಕ್ಯಾನಿಕಲ್‌ ಮತ್ತು ಸಿವಿಲ್‌ ಕೋರ್ಸ್‌ಗಳಲ್ಲಿ ಒಟ್ಟು 90 ಸೀಟುಗಳನ್ನು ಮೀಸಲಾಗಿರಿಸಿದ್ದು, ಒಬ್ಬ ವಿದ್ಯಾರ್ಥಿ ಕೂಡ ಕನ್ನಡದಲ್ಲಿ ಎಂಜಿನಿಯರಿಂಗ್‌ ಮಾಡಲು ಮುಂದಾಗಿಲ್ಲ. ವೃತ್ತಿ ಶಿಕ್ಷಣ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಯುತ್ತಿದ್ದು, ಇಂಥ ಅವಧಿಯಲ್ಲೇ ಈ ನಿರಾಸೆಯ ಸುದ್ದಿ ಹೊರಬಿದ್ದಿದೆ.

ಕನ್ನಡದಲ್ಲಿಯೇ ಎಂಜಿನಿಯರಿಂಗ್‌ ಕಲಿಯಲು ಅವಕಾಶ ಮಾಡಿಕೊಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಅದರಲ್ಲೂ ಕನ್ನಡ ಮಾಧ್ಯಮದಲ್ಲೇ ಓದಿಕೊಂಡು ಬಂದವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರಾಜ್ಯ ಸರಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ವಿದ್ಯಾರ್ಥಿಗಳು ಇದರ ಮೇಲೆ ನಿರಾಸಕ್ತಿ ತೋರಿರುವುದು ಒಂದು ರೀತಿಯಲ್ಲಿ ಅಚ್ಚರಿಯೇ ಆಗಿದೆ.

ವಿದ್ಯಾರ್ಥಿಗಳ ಈ ನಿರುತ್ಸಾಹ ಎಲ್ಲೋ ಒಂದು ಕಡೆಗೆ ರಾಜ್ಯ ಸರಕಾರದ ಮಾತೃಭಾಷೆಯಲ್ಲೇ ತಾಂತ್ರಿಕ ಶಿಕ್ಷಣ ನೀಡುವ ಉದ್ದೇಶಕ್ಕೆ ಪೆಟ್ಟು ಬಿದ್ದಿರಬಹುದು. ಆದರೆ ಇಲ್ಲಿ ಮಾಡಬೇಕಾದ ಕೆಲಸಗಳು ಬೇರೆಯವೇ ಇವೆ ಎಂಬುದನ್ನು ರಾಜ್ಯ ಸರಕಾರ ಮರೆಯಬಾರದು.

ಅಂದರೆ ಕನ್ನಡದಲ್ಲಿ ಎಂಜಿನಿಯರಿಂಗ್‌ ಕಲಿಯಲು ವಿದ್ಯಾರ್ಥಿಗಳು ಬರುತ್ತಾರೆ ಎಂದೇ ಅಂದುಕೊಳ್ಳೋಣ. ಆದರೆ ಎಂಜಿನಿಯರಿಂಗ್‌ ಕಲಿತ ಮೇಲೆ ಇವರೇನು ಮಾಡಬೇಕು? ಇಂಥ ವಿದ್ಯಾರ್ಥಿಗಳಿಗೆ ಕೆಲಸ ಎಲ್ಲಿ ಸಿಗುತ್ತದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ವಿದ್ಯಾರ್ಥಿಗಳ ನಿರುತ್ಸಾಹಕ್ಕೆ ಇದೂ ಒಂದು ಕಾರಣವಿದ್ದಿರಲೂಬಹುದು.

ವಿದ್ಯಾರ್ಥಿಗಳ ಈ ನಿರಾಸಕ್ತಿಗೆ ಕಾರಣಗಳನ್ನು ಪಟ್ಟಿ ಮಾಡಬಹುದು. ಅಂದರೆ ಕನ್ನಡದಲ್ಲೇ ಎಂಜಿನಿಯರಿಂಗ್‌ ಮಾಡಿದ ಮೇಲೆ ಹೊರ ರಾಜ್ಯದಲ್ಲಿ ಅಥವಾ ಹೊರದೇಶಗಳಿಗೆ ಕೆಲಸ ಹುಡುಕಿಕೊಂಡು ಹೋಗಲು ಸಾಧ್ಯವಾಗದೇ ಇರಬಹುದು. ಅಲ್ಲದೇ ಇಲ್ಲೂ ಕನ್ನಡದಲ್ಲೇ ವ್ಯಾಸಂಗ ಮಾಡಿದ್ದಾರೆ ಎಂಬ ಕಾರಣದಿಂದಾಗಿ ಉದ್ಯೋಗಕ್ಕೆ ತೆಗೆದುಕೊಳ್ಳದಿದ್ದರೆ ಏನು ಮಾಡುವುದು ಎಂಬ ವಿದ್ಯಾರ್ಥಿಗಳ ಆಲೋಚನೆಯೂ ಒಂದು ಕಾರಣವಿರಬಹುದು.

ಹೆತ್ತವರು ಮತ್ತು ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಸೇರುವುದೇ ಮುಂದೆ ಉತ್ತಮ ವೃತ್ತಿ ಸಿಗಲಿ ಎಂಬ ಆಸೆಯಿಂದ. ಒಂದು ವೇಳೆ ಕನ್ನಡದಲ್ಲಿ ಕಲಿತು, ಉದ್ಯೋಗ ಸಿಗದೇ ಹೋದರೆ ಮುಂದಿನ ದಾರಿ ಯಾವುದು ಎಂಬ ಪ್ರಶ್ನೆ ಕಾಡುತ್ತದೆ. ಇಂಥ ಹೊತ್ತಲ್ಲಿ ಸರಕಾರದ ಜವಾಬ್ದಾರಿಗಳೂ ಹೆಚ್ಚೇ ಇವೆ.

ಅಂದರೆ ಈ ವರ್ಷ ರಾಜ್ಯ ಸರಕಾರ ಸಿವಿಲ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಬ್ರಾಂಚ್‌ನ 90 ಸೀಟುಗಳನ್ನು ಮಾತ್ರ ಕನ್ನಡ ಮಾಧ್ಯಮಕ್ಕೆ ಮೀಸಲಾಗಿ ಇಟ್ಟಿದೆ. ಈ ವರ್ಷವೇನೋ ವಿದ್ಯಾರ್ಥಿಗಳು ಬಂದಿಲ್ಲ. ಹಾಗಂತ ಕನ್ನಡ ಮಾಧ್ಯಮದ ಎಂಜಿನಿಯರಿಂಗ್‌ನ ಮೇಲಿನ ಆಸಕ್ತಿಯನ್ನು ಸರಕಾರ ಕೈಬಿಡಬಾರದು. ಇದಕ್ಕಿಂತ ಬೇರೆಯಾಗಿ ಕನ್ನಡದಲ್ಲಿ ಕಲಿತವರಿಗೆ ಸರಕಾರಿ ಮತ್ತು ಸಾಧ್ಯವಾದರೆ ಖಾಸಗಿರಂಗದಲ್ಲೂ ಉದ್ಯೋಗದಲ್ಲಿ ಮೀಸಲು ಇಡುವ ವ್ಯವಸ್ಥೆ ಮಾಡಬೇಕು. ಆಗಷ್ಟೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದು ಕನ್ನಡದಲ್ಲಿಯೇ ಎಂಜಿನಿಯರಿಂಗ್‌ ಕಲಿಯುತ್ತಾರೆ. ಈ ನಿಟ್ಟಿನಲ್ಲಿ ಅವಲೋಕನ ಮಾಡಿಕೊಳ್ಳುವುದು ಅಗತ್ಯವಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.