ಕೀರ್ತಿ ಆಜಾದ್ ಮೆಲುಕು:ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

1983ರ ವಿಶ್ವಕಪ್‌ ಗೆಲುವು ಆಧಾರಿತ ಚಿತ್ರ "83' ಕುರಿತು ಕೀರ್ತಿ ಆಜಾದ್‌ ಮೆಲುಕು

Team Udayavani, Dec 8, 2021, 10:10 AM IST

ಭಾರತದ ವಿಕೆಟ್‌ ಬೀಳುತ್ತಿದ್ದಾಗ ಕಪಿಲ್‌ ಸ್ನಾನ ಮಾಡುತ್ತಿದ್ದರು!

ಮುಂಬಯಿ: ಭಾರತದ 1983ರ ಏಕದಿನ ವಿಶ್ವಕಪ್‌ ಜಯಭೇರಿಯನ್ನು ಆಧರಿಸಿದ ಹಿಂದಿ ಚಿತ್ರ “83’ರ ಟ್ರೇಲರ್‌ ಬಿಡುಗಡೆಯಾಗಿದೆ. ಇದರ ಸನ್ನಿವೇಶವೊಂದರಂತೆ, ಜಿಂಬಾಬ್ವೆ ಎದುರಿನ ಲೀಗ್‌ ಪಂದ್ಯದ ವೇಳೆ ಭಾರತದ ವಿಕೆಟ್‌ಗಳು ತರಗೆಲೆಯಂತೆ ಉದುರುತ್ತಿದ್ದಾಗ ನಾಯಕ ಕಪಿಲ್‌ದೇವ್‌ ಸ್ನಾನ ಮಾಡುತ್ತಿದ್ದರು; ಆಟಗಾರರೆಲ್ಲ ಕಪ್ತಾನನಿಗಾಗಿ ಹೊರಗೆ ಕಾಯುತ್ತಿದ್ದರು!

ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವಕಪ್‌ ವಿಜೇತ ತಂಡದ ಸದಸ್ಯ ಕೀರ್ತಿ ಆಜಾದ್‌, “ಇದರಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ, ಇದು ನಿಜ’ ಎಂದಿದ್ದಾರೆ.

ನಮ್ಮ ನಡೆ ಬಾತ್‌ರೂಮ್‌ ಕಡೆ!
“ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡೊಡನೆ ಕಪಿಲ್‌ದೇವ್‌ ಬಾತ್‌ರೂಮ್‌ಗೆ ತೆರಳಿದರು. ಫ್ರೆಶ್‌ ಆಗಿ ಬ್ಯಾಟಿಂಗಿಗೆ ಇಳಿಯುವುದು ಅವರ ಉದ್ದೇಶವಾಗಿತ್ತು. ಆದರೆ ಜಿಂಬಾಬ್ವೆ ನಮ್ಮ ಮೇಲೆ ಘಾತಕವಾಗಿ ಎರಗಿತ್ತು. 9 ರನ್‌ ಆಗುವಷ್ಟರಲ್ಲಿ ಗಾವಸ್ಕರ್‌, ಶ್ರೀಕಾಂತ್‌, ಮೊಹಿಂದರ್‌ ಮತ್ತು ಸಂದೀಪ್‌ ಪಾಟೀಲ್‌ ವಿಕೆಟ್‌ ಉರುಳಿತ್ತು. ಇದೇನು ಗ್ರಹಚಾರವಪ್ಪ ಎಂದು ಒತ್ತಡಕ್ಕೊಳಗಾದ ನಾವೆಲ್ಲ ಸೀದಾ ಬಾತ್‌ರೂಮ್‌ ಕಡೆ ಹೆಜ್ಜೆ ಹಾಕಿದೆವು. ಹೊರಗಿನಿಂದಲೇ
ಕಪಿಲ್‌ಗೆ ವಿಷಯ ತಿಳಿಸಿದೆವು. ಅವರು ಅರ್ಧಕ್ಕೆ ಸ್ನಾನ ಮುಗಿಸಿ ಪ್ಯಾಡ್‌ ಕಟ್ಟಿ ಅಂಗಳಕ್ಕಿಳಿದರು. ಮುಂದಿನದು ನಿಮಗೇ ತಿಳಿದೇ ಇದೆ’ ಎಂದು ಅಂದಿನ ಘಟನೆಯನ್ನು ನೆನಪಿಸಿಕೊಂಡರು ಕೀರ್ತಿ ಆಜಾದ್‌.

ಇದನ್ನೂ ಓದಿ:ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

“ಭಾರತದ ವಿಕೆಟ್‌ಗಳು ಉದುರಿದ ರೀತಿ ಕಂಡು ಕಪಿಲ್‌ ಆಕ್ರೋಶಕ್ಕೊಳಗಾದಂತಿತ್ತು. ಹೀಗಾಗಿಯೇ ಅವರಿಂದ ಅಂಥದೊಂದು ಅಸಾಮಾನ್ಯ ಆಟ ಹೊರಹೊಮ್ಮಿತು’ ಎಂದರು.

ಕಪಿಲ್‌ ಸುಂಟರಗಾಳಿ
ಆ ಪಂದ್ಯದಲ್ಲಿ ಭಾರತದ 5 ವಿಕೆಟ್‌ 17 ರನ್ನಿಗೆ ಬಿದ್ದಾಗ ಕಪಿಲ್‌ ಸುಂಟರಗಾಳಿಯಂಥ ಬೀಸುಗೆಯಲ್ಲಿ ಅಜೇಯ 175 ರನ್‌ ಬಾರಿಸಿದ್ದರು. ಇದು ಭಾರತೀಯ ಏಕದಿನ ಚರಿತ್ರೆಯ ಮೊದಲ ಶತಕವಾದರೆ, ಆ ಕಾಲಕ್ಕೆ ವಿಶ್ವದಾಖಲೆಯೂ ಆಗಿತ್ತು. ಕಬೀರ್‌ ಖಾನ್‌ ನಿರ್ದೇಶನದ, ರಣವೀರ್‌ ಸಿಂಗ್‌-ದೀಪಿಕಾ ಪಡುಕೋಣೆ ಅಭಿನಯದ “83′ ಚಿತ್ರ ಡಿಸೆಂಬರ್‌ 24ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.