ಭಾರಿ ಮಳೆಯಿಂದ ಕಪಿಲತೀರ್ಥಕ್ಕೆ ಜೀವ ಕಳೆ
Team Udayavani, Sep 28, 2020, 11:09 AM IST
ಹನುಮಸಾಗರ: ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಳೆಯಿಂದ ಸಮೀಪದ ಕಬ್ಬರಗಿ ಗ್ರಾಮದ ಕಪಿಲತೀರ್ಥವು ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.
ಕಲ್ಯಾಣ-ಕರ್ನಾಟಕದ ಜೋಗ ಜಲಪಾತಮಿನಿ ಎಂದೇ ಖ್ಯಾತಿ ಪಡೆದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿ ಗ್ರಾಮದ ಕಪಿಲತೀರ್ಥ ಈ ವರ್ಷವೂ ಮೈದುಂಬಿದೆ. ಸತತ ಬರಗಾಲದಿಂದ ಮಳೆಯನ್ನೆ ಕಾಣದೇ ಕುಡಿಯುವ ನೀರಿಗೆ ಪರಿತಪಿಸುತ್ತಿರುವ ಈ ಭಾಗದಲ್ಲಿ ಕಪೀಲ ತೀರ್ಥ ಎರಡನೇ ವರ್ಷವೂ ಧುಮುಕುತ್ತಿದ್ದು, ಜಲಪಾತಕ್ಕೆ ಜೀವ ಕಳೆ ಬಂದಿದೆ.ಇಲ್ಲಿ ನೀರು ಬಂದರೆ ಸುತ್ತಮುತ್ತಲಿನ ಕೊಪ್ಪಳ, ಬಾಗಲಕೋಟ, ಗದಗ ಜಿಲ್ಲೆಯ ಪ್ರವಾಸಿಗರು ಆಗಮಿಸುತ್ತಾರೆ. ಹನುಮಸಾಗರ ಸಮೀಪವಿರುವ ಈ ಕಬ್ಬರಗಿ ಕಪಲೆಪ್ಪನ ಜಲಪಾತ ಗುಡ್ಡಬೆಟ್ಟಗಳ ಮಧ್ಯೆ ಇದೆ. ಹಚ್ಚು ಹಸಿರಿನ ನಡುವೆ ಧುಮುಕುವ ಜಲಪಾತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಬಾರಿ ಸ್ವಲ್ಪ ತಡವಾಗಿ ಜಲಪಾತಕ್ಕೆ ಜೀವಕಳೆ ಬಂದಿದೆ.
ನೀರಿನ ಮೂಲ: ಕಪಿಲತೀರ್ಥ ಗುಡ್ಡವು ಐತಿಹಾಸಿಕ ಸ್ಥಳಗಳಾದ ಐಹೊಳೆ, ಪಟ್ಟದಕಲ್ಲು, ಬಾದಾಮಿಯಿಂದ ಬೆಳಗಾವಿಯವರೆಗೂ ಇದೆ. ಈ ಗುಡ್ಡಗಳ ಮೇಲೆ ವೆಂಕಟಾಪೂರ, ಗಾಣದಾಳ ಎಂಬ ಗ್ರಾಮಗಳು ಹಾಗೂ ನಡುವೆ ಬರುವ ಸಣ್ಣ ಕೆರೆಗಳು ಇವೆ. ಮಳೆಗಾಲದಲ್ಲಿ ಗುಡ್ಡದ ಮೇಲಿಂದ ಹರಿದು ಬರುವ ನೀರು ಕಪಿಲ ತೀರ್ಥದ ಬಳಿ ಸುಮಾರು 15-20 ಅಡಿ ಎತ್ತರದಿಂದ ಧರೆಗೆ ಧುಮುಕುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು
Inheritance Tax: ಸ್ಯಾಮ್ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!
Yugadi: ವರುಷದ ಆದಿ ಯುಗಾದಿ
U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ