Kapu ಮರಳು ಅಕ್ರಮ ಸಾಗಾಟ: ಟಿಪ್ಪರ್ ಪೊಲೀಸ್ ವಶಕ್ಕೆ
Team Udayavani, Mar 13, 2024, 1:16 AM IST
ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಕಾಪು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ.
ಕಾಪುವಿನಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರಿಗೆ ಸಂಚರಿಸುತ್ತಿದ್ದ ಟಿಪ್ಪರ್ನಿಂದ ನೀರು ಇಳಿಯುತ್ತಿರುವುದು ಕಂಡುಬಂದ ಕಾರಣ ಮರಳು ಸಾಗಿಸುತ್ತಿರುವ ಬಗ್ಗೆ ಅನುಮಾನಗೊಂಡು ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 3 ಯೂನಿಟ್ ಮರಳನ್ನು ತುಂಬಿಸಿರುವುದು ಕಂಡುಬಂದಿತು.
ಚಾಲಕ, ಶಿರ್ವ ನಿವಾಸಿ ಪ್ರದೀಪ್ನಲ್ಲಿ ವಿಚಾರಿಸಿದಾಗ ಶಿರ್ವ ನಿವಾಸಿ ಲತೀಫ್ಗೆ ಸೇರಿದ ಟಿಪ್ಪರ್ ಆಗಿದ್ದು ಕಳೆದ ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಬಳಿಯ ಹೊಳೆಯಿಂದ ಮರಳನ್ನು ತೆಗೆಸಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದರು.
ಲತೀಫ್ ಹಾಗೂ ಪ್ರದೀಪ್ ಜತೆ ಸೇರಿ ಲಾಭ ಮಾಡುವ ಉದ್ದೇಶದಿಂದ ಸರಕಾರಿ ಸ್ವತ್ತಾದ ಖನಿಜವನ್ನು ಕಳವು ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ ಹಾಗೂ ಮರಳನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ