Kapu ಮನೆಗೆ ಕನ್ನ; ನಗ-ನಗದು ಕಳವು
Team Udayavani, Jan 29, 2024, 11:32 PM IST
ಕಾಪು: ಮನೆಮಂದಿ ಸಂಬಂಧಿಕರ ಮನೆಯ ಮದುವೆಗೆ ಹೋಗಿದ್ದ ವೇಳೆ ಹಾಡಹಗಲೇ ಮನೆಗೆ ಕನ್ನ ಹಾಕಿದ ಕಳ್ಳರು ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳನ್ನು ಕದ್ದು ಪರಾರಿಯಾದ ಘಟನೆ ಜ. 28ರಂದು ಮೂಳೂರಿನಲ್ಲಿ ನಡೆದಿದೆ.
ಮೂಳೂರು ನಿವಾಸಿ ಇಬ್ರಾಹಿಂ ಮಹಮ್ಮದ್ ಅವರು ರವಿವಾರ ತನ್ನ ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಸಂಬಂಧಿಕರ ಮದುವೆ ಕಾರ್ಯಕ್ರಮದ ನಿಮಿತ್ತ ಸುರತ್ಕಲ್ಗೆ ಹೋಗಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ ವಾಪಸು ಮನೆಗೆ ಬಂದು ನೋಡಿದಾಗ ಕಳವು ನಡೆದಿರುವ ವಿಚಾರ ಬೆಳಕಿಗೆ ಬಂದಿತ್ತು.
ಮನೆಯ ಹಿಂಬದಿಯ ಬಾಗಿಲಿನ ಚಿಲಕ ಕಿತ್ತು ಬಾಗಿಲು ತೆರೆದಿದ್ದ ಕಳ್ಳರು ಮನೆಯ 6 ಬೆಡ್ರೂಮ್ಗಳಲ್ಲಿರುವ ಕಪಾಟಿನ ಬಾಗಿಲನ್ನು ತೆರೆದು ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು 72 ಸಾವಿರ ರೂಪಾಯಿ ಮೌಲ್ಯದ ಚಿನ್ನ ಮತ್ತು 25 ಸಾವಿರ ರೂಪಾಯಿ ಮೌಲ್ಯದ ರ್ಯಾಡೋ ವಾಚ್ ಅನ್ನು ಕಳವು ಮಾಡಿಕೊಂಡಿಕೊಂಡು ಹೋಗಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…