ಕಾರಟಗಿ ರೈಲ್ವೆ ನಿಲ್ದಾಣ ಹಸೀರಿಕರಣಗೊಳಿಸಿದ ಪತ್ತಾರ


Team Udayavani, Jun 5, 2022, 1:06 PM IST

5

ಕಾರಟಗಿ: ವೃತ್ತಿಯಲ್ಲಿ ಅಕ್ಕಸಾಲಿಗನಾಗಿದ್ದರೂ ಬಿಡುವಿನ ವೇಳೆ ಸದಾ ಹಸಿರು ಸೇವೆಯಲ್ಲಿ ನಿರತನಾಗಿರುವ ಪರಿಸರ ಪ್ರೇಮಿ. ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿ ವೀರಭದ್ರಪ್ಪ ಪತ್ತಾರ ಹಲವು ದಶಕಗಳಿಂದ ಅಕ್ಕಸಾಲಿಗ ವೃತ್ತಿ ಮಾಡುತ್ತ ಬಂದಿದ್ದು, ಇದರೊಂದಿಗೆ ಗ್ರಾಮದ ಸರಕಾರಿ ಶಾಲಾ-ಕಾಲೇಜ್‌, ಸೇರಿದಂತೆ ರೈಲ್ವೆ ನಿಲ್ದಾಣವನ್ನು ನಿಸ್ವಾರ್ಥವಾಗಿ ಹಸೀರಿಕರಣಗೊಳಿಸುವಲ್ಲಿ ಸತತವಾಗಿ ಶ್ರಮಿಸುತ್ತಿದ್ದಾರೆ.

ವೀರಭದ್ರಪ್ಪ ಪತ್ತಾರ ಬರಿ ಪರಿಸರ ಪ್ರೇಮಿ ಅಷ್ಟೇ ಅಲ್ಲ. ಶಿಕ್ಷಣ ಪ್ರೇಮಿಯೂ ಹೌದು. ಗ್ರಾಮದ ಹೊರವಲಯದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವಾಗಿದ್ದು ಕೆಲ ತಿಂಗಳ ಹಿಂದೆ ರೈಲ್ವೆ ಸಂಚಾರವೂ ಆರಂಭವಾಗಿದೆ. ರೈಲ್ವೆ ನಿಲ್ದಾಣದಲ್ಲಿ ಗಿಡ-ಮರಗಳನ್ನು ಬೆಳೆಸುವ ನಿಟ್ಟಿನಲ್ಲಿ ಇಲಾಖೆ ವಿವಿಧ ಬಗೆಯ ಸಸಿಗಳನ್ನು ತಂದು ಇಟ್ಟಿದ್ದರು. ಆದರೆ ಎರಡ್ಮೂರು ದಿನಗಳಾದರೂ ಸಸಿ ನೆಟ್ಟಿರಲಿಲ್ಲ. ರೈಲ್ವೆ ನಿಲ್ದಾಣದ ಕಡೆ ನಿತ್ಯ ಹೊಗುತ್ತಿದ್ದ ವೀರಭದ್ರಪ್ಪ ಪತ್ತಾರ ಅವರು ಗಿಡಗಳು ಬಾಡುತ್ತಿರುವುದು ಕಂಡು ಸಂಬಂಧಿ ಸಿದವರನ್ನು ಭೇಟಿಯಾಗಿ ಅವುಗಳನ್ನು ನಾಟಿ ಮಾಡಿ ಪೋಷಿಸುತ್ತೇನೆ ಎಂದು ಕೇಳಿಕೊಂಡರು. ಅವರು ಒಪ್ಪಿಗೆ ಪಡೆದು ರೈಲ್ವೆ ನಿಲ್ದಾಣ ಇಕ್ಕೆಲಗಳಲ್ಲಿ ಸಸಿ ನಾಟಿ ಮಾಡಿ ಅವುಗಳನ್ನು ಪೋಷಿಸಿದರು.

ಅವುಗಳು ಈಗ ಬೆಳೆದು ಒಂದು ಹಂತಕ್ಕೆ ಬಂದಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಬರುವ ಪ್ರಯಾಣಿಕರಿಗೆ ಹಸಿರು, ಗಿಡ-ಮರಗಳು ಮನಸ್ಸಿಗೆ ಮದ ನೀಡುತ್ತಿವೆ. ಅಲ್ಲದೇ ವೀರಭದ್ರಪ್ಪ ಪತ್ತಾರ ಮೊದಲಿನಿಂದಲೂ ಮನೆಯ ಅಕ್ಕಪಕ್ಕ, ಶಾಲೆಗಳ ಆವರಣದಲ್ಲಿ ಗಿಡ-ಮರಗಳನ್ನು ನೆಟ್ಟು ಪೋಷಿಸಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪಕ್ಷಿ ಸಂಕುಲವೂ ಹೆಚ್ಚಲಿ ಅವುಗಳು ಎಂಬ ದೃಷ್ಟಿಯಿಂದ ರೈಲ್ವೆ ನಿಲ್ದಾಣದ ಫ್ಲಾಟ್‌ಫಾರ್ಮ್ನಲ್ಲಿ ಪಕ್ಷಿಗಳಿಗೆ ನೀರಿನ ದಾಹ ನೀಗಿಸಿಕೊಳ್ಳಲು ಸಣ್ಣಸಣ್ಣ ಬಟ್ಟಲುಗಳಲ್ಲಿ ನೀರು ಇಡುವ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಜನತೆ ನಿತ್ಯ ಬೆಳಗ್ಗೆ ಮತ್ತು ಸಂಜೆ ವಾಯು ವಿಹಾರಕ್ಕಾಗಿ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದು, ನಿಲ್ದಾಣದ ಹೊರಗೆ ಮತ್ತು ಒಳಗೆ ಕೂಡಲು ಪ್ರಶಾಂತವಾದ ಸ್ಥಳ, ಸೋಂಪಾದ ಗಾಳಿ ಬೀಸುತ್ತಿದ್ದರಿಂದ ಬೆಳಗ್ಗೆ ನಿಲ್ದಾಣದಲ್ಲಿ ಧ್ಯಾನ, ಯೋಗ ಮಾಡುತ್ತಾರೆ. ವಾಯುವಿಹಾರ ನಡೆಸುತ್ತಾರೆ.

ಮೊದಲಿನಿಂದಲೂ ಉತ್ತಮ ಪರಿಸರ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ಹಾಗೆಯೇ ರೈಲ್ವೆ ನಿಲ್ದಾಣದಲ್ಲಿ ಗಿಡಮರಗಳನ್ನು ಬೆಳೆಸಿ ಪ್ರಯಾಣಿಕರಿಗೆ ನೆರಳು, ಶುದ್ಧ ಗಾಳಿ ಸಿಗಲಿ, ಪಕ್ಷಿ ಸಂಕುಲ ಬೆಳೆಯಲಿ ಎಂಬ ಉದ್ದೇಶದಿಂದ ಸ್ವಯಂ ಪ್ರೇರಿತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಇದರಲ್ಲಿ ನನ್ನ ಸ್ವಾರ್ಥ ಇಲ್ಲ. ಯಾರಿದಂಲೂ ನಾನು ಯಾವುದೇ ಸಹಾಯ ಪಡೆದಿಲ್ಲ. ಯಾರು ಸಹಾಯ ಮಾಡಲು ಬಂದಿಲ್ಲ. ಸಿದ್ದಾಪುರ ರೈಲ್ವೆ ನಿಲ್ದಾಣ ಮಾದರಿ ನಿಲ್ದಾಣವನ್ನಾಗಿ ಮಾಡಬೇಕೆಂಬುದು ನನ್ನ ಆಶಯ ವೀರಭದ್ರಪ್ಪ ಪತ್ತಾರ, ಪರಿಸರ ಪ್ರೇಮಿ            

„ದಿಗಂಬರ ಎನ್‌. ಕುರ್ಡೆಕರ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.