ಅಕಾಲಿಕ ಮಳೆಗೆ ಅಪಾರ ಹಾನಿ : ಮನೆಗೆ ನುಗ್ಗಿದ ಗಟಾರ ನೀರು


Team Udayavani, Jan 9, 2021, 4:21 PM IST

ಅಕಾಲಿಕ ಮಳೆಗೆ ಅಪಾರ ಹಾನಿ : ಮನೆಗೆ ನುಗ್ಗಿದ ಗಟಾರ ನೀರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅಪಾರ ಹಾನಿ ತಂದಿದೆ. ರೈತರ ಮೊಗದಲ್ಲಿದ್ದ ನಗುವನ್ನು ಕಸಿದು
ಹಾಕಿದೆ. ಕರಾವಳಿಯಲ್ಲಿ ಹಾಗೂ ಘಟ್ಟದ ಮೇಲೆ ಮಳೆ ಸಣ್ಣಕೆ ಹಾಗೂ ಘಟ್ಟದ ಮೇಲೆ ಗುಡುಗು ಸಿಡಿಲು ಮಿಂಚು ಸಹಿತ
ಮಳೆಯಾಗಿದೆ.

ಜನೆವರಿ ಮೊದಲ ವಾರದಲ್ಲಿ ಬೀಳುತ್ತಿರುವ ಮಳೆಯಿಂದ ಅಡಕೆ, ಭತ್ತ ಹಾಗೂ ಮಾವಿನ ಬೆಳೆಗೆ ಅಪಾರ ಹಾನಿಯಾಗಿದೆ.
ಕೊಯ್ಲಿಗೆ ಬಂದ ಭತ್ತ ಉಳಿಸಿಕೊಳ್ಳುವುದಕ್ಕೆ ರೈತರು ಹೋರಾಡುವಂತಾಗಿದೆ. ಬನವಾಸಿ, ಶಿವಳ್ಳಿ, ಹೊಸಳ್ಳಿಯಲ್ಲಿ ಕೊಯ್ದಿಟ್ಟ ಭತ್ತದ ಪೈರು ಮಳೆ ನೀರಿಗೆ ಸಂಪೂರ್ಣ ಹಾನಿಯಾಗಿದೆ. ಕೈಗೆ ಬಂದ ಭತ್ತ ರೈತರ ಮನೆ ತುಂಬುವ ಮುನ್ನವೇ ನಷ್ಟ ಅನುಭವಿಸಿದೆ.

ಮುಂಡಗೋಡ ಪಾಳ ಭಾಗದ ರೈತುರು ಮಾವಿನ ಬೆಳೆ ಬರುವ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ನವೆಂಬರ್‌, ಡಿಸೆಂಬರ್‌ನಲ್ಲಿ ಹೂ ಕಟ್ಟಿದ್ದ ಮಾವಿನ ಮರದ ಹೂ ಉದುರುತ್ತಿದೆ. ಇದರಿಂದ ಮಾವು ಬೆಳೆ ನಂಬಿದ್ದ ರೈತರು ಕಣ್ಣೀರು ಸುರಿಸುವಂತಾಗಿದೆ. 1062 ಹೆಕ್ಟೇರ್‌ ಪ್ರದೇಶ ಮಾವು ಈಗ ಆತಂಕ ಎದುರಿಸುತ್ತಿದೆ.

ಇದನ್ನೂ ಓದಿ:ಲಡಾಖ್ ನ ಚುಶುಲ್ ಸೆಕ್ಟರ್ ಗಡಿಯಲ್ಲಿ ಚೀನಾ ಸೈನಿಕ ಭಾರತೀಯ ಸೇನೆಯ ವಶಕ್ಕೆ, ವಿಚಾರಣೆ

ಇಲ್ಲಿ ಮಾವಿನ ಮರಗಳನ್ನು ಬೆಳೆಸಿ, ಅವುಗಳನ್ನು ಶಿಗ್ಗಾವಿ, ಹಾನಗಲ್ಲ, ಶಿರಸಿ, ಸವಣೂರು ಭಾಗದ ವ್ಯಾಪಾರಿಗಳಿಗೆ ಗುತ್ತಿಗೆ ಕೊಡಲಾಗಿತ್ತು. ಆದರೆ ಮಾವು ಬೆಳೆ ಬರುವುದೇ ಎಂಬ ಅನುಮಾನ ಹುಟ್ಟಿದೆ. ಶಿರಸಿಯಲ್ಲಿ ರಸ್ತೆಯ ಮೇಲೆ ನೀರು ಹರಿಯುವಷ್ಟು ರಭಸದ ಮಳೆ ಬಿದ್ದಿದೆ. ಮನೆ ಹಾಗೂ ಅಂಗಡಿಯ ಮೇಲ್ಛಾವಣಿ ಸಹ ಕುಸಿದಿದೆ. ಹಳಿಯಾಳದಲ್ಲಿ ಶುಕ್ರವಾರ ಸಂಜೆ ಜಿಟಿಜಿಟಿ ಮಳೆ ಆರಂಭವಾಗಿದೆ. ಈ ತಾಲೂಕಿನ ರೈತರಲ್ಲಿ ಸಹ ಆತಂಕ ಮನೆ ಮಾಡಿದೆ.

ಸಿದ್ದಾಪುರ ತಾಲೂಕಿನಲ್ಲಿ ಗುಡುಗು, ಮಿಂಚು ಪ್ರಾರಂಭವಾಗಿದ್ದು, ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗುತ್ತಿದೆ. ಭಟ್ಕಳ ತಾಲೂಕಿನಲ್ಲಿ ಅಕಾಲಿಕವಾಗಿ ಬಿದ್ದ ಮಳೆಯಿಂದ ತೆಂಗಿನಗುಂಡಿ ಭಾಗದಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಶಿರಾಲಿ, ಬೇಂಗ್ರೆ ಭಾಗದಲ್ಲಿ ಬೆಳೆದ ಶೇಂಗಾ ಬೆಳೆಗೆ ಹಾನಿಯಾಗಿದೆ. ಅಡಕೆ, ಮಾವು, ಗೇರು ಬೆಳೆಗೂ ಹಾನಿಯಾಗಿದೆ. ಮಲ್ಲಿಗೆ ಬೆಳೆಗಾರರು ಸಹ ಅತಂಕದ ಜೊತೆ ನಷ್ಟ ಅನುಭವಿಸುವಂತಾಗಿದೆ.

ಕಿರವತ್ತಿಯಲ್ಲಿ ಹತ್ತು ಸೆಂಟಿ ಮೀಟರ್‌ ಮಳೆ ಸುರಿದಿದೆ. ಕಾರವಾರದಲ್ಲಿ ಸಹ ಗುರುವಾರ ರಾತ್ರಿ, ಶುಕ್ರವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಇದು ಇಲ್ಲಿನ ಕಲ್ಲಂಗಡಿ ಬೆಳೆಗೆ, ಭತ್ತದ ಬೆಳೆಗೆ ಸ್ವಲ್ಪ ಹಾನಿ ತಂದಿದೆ. ಅಂಕೋಲಾ ತಾಲೂಕಿನ ಮಾವು
ಬೆಳೆಗಾರರನ್ನು ಆತಂಕಕ್ಕೆ ತಳ್ಳಿದೆ.

ಪರಿಹಾರಕ್ಕೆ ಆಗ್ರಹ: ಜಿಲ್ಲಾಡಳಿತ ಅಕಾಲಿಕ ಮಳೆಗೆ ವಿವಿಧ ತಾಲೂಕುಗಳಲ್ಲಿ ರೈತರ ವಿವಿಧ ಬೆಳೆಗಳಿಗೆ ಆದ ಹಾನಿಯ ಸಮೀಕ್ಷೆ ಮಾಡಿಸಿ, ಪರಿಹಾರ ನೀಡಲು ಮುಂದಾಗಬೇಕೆಂದು ರೈತರು, ರೈತ ಮುಖಂಡರು ಆಗ್ರಹಿಸಿದ್ದಾರೆ. ಕೃಷಿ ಇಲಾಖೆ ಹಾಗೂ ಸರ್ಕಾರ ತಕ್ಷಣ ರೈತರ ಬೆಳೆಗೆ ಹಾದ ಹಾನಿಯ ಸಮೀಕ್ಷೆ ಮಾಡಿಸಿ ಪರಿಹಾರಕ್ಕೆ ಮುಂದಾಗಬೇಕೆಂಬುದು ರೈತರ ಆಶಯವಾಗಿದೆ.

ಮನೆಗೆ ನುಗ್ಗಿದ ಗಟಾರ ನೀರು
ದಾಂಡೇಲಿ: ನಗರದಲ್ಲಿ ಹಠತ್ತನೇ ಸುರಿದ ಭೀಕರ ಮಳೆಗೆ ನಗರದ ಲೆನಿನ್‌ ರಸ್ತೆಯ ಬಹುತೇಕ ಮಳಿಗೆಗಳೊಳಗೆ ಮಳೆ ನೀರು ನುಗ್ಗಿ ನಷ್ಟ ಉಂಟಾಗಿದ್ದರೆ, ಹಳಿಯಾಳ ರಸ್ತೆಯ ಅಲೈಡ್‌ ಪ್ರದೇಶದಲ್ಲಿ ಮನೆಯೊಳಗಡೆ ಗಟಾರ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ಹಳೆದಾಂಡೇಲಿಯಲ್ಲಿಯೂ ಮುಖ್ಯ ರಸ್ತೆಯಲ್ಲಿರುವ ಬಹುತೇಕ ಮನೆಗಳಿಗೆ ನೀರು ನುಗಿದೆ. ಹಳಿಯಾಳ ರಸ್ತೆ ಹಾಗೂ ಅಲೈಡ್‌ ಪ್ರದೇಶದಲ್ಲಿ ಮತ್ತು ಹಳೆದಾಂಡೇಲಿಯಲ್ಲಿ ಗಟಾರ ಸರಿಯಾಗಿ ಸ್ವತ್ಛವಾಗದ ಹಿನ್ನೆಲೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲಾಗದೇ ಹತ್ತಿರದ ಮನೆಯೊಳಗಡೆ ನುಗ್ಗಿದ್ದು, ನಗರಸಭೆ ನಿರ್ಲಕ್ಷéವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಲಿಂಕ್‌ ರಸ್ತೆಯಲ್ಲಿಯೂ ಮಳೆ ನೀರಿನಿಂದ ಗಟಾರ ತುಂಬಿ ಹೋಗಿ ನೀರೆಲ್ಲ ಹತ್ತಿರದ ಅಂಗಡಿಗಳಿಗೆ ನುಗ್ಗಿದೆ. ಕಾಲಕಾಲಕ್ಕೆ ಗಟಾರಗಳ ಸ್ವತ್ಛತೆಗೆ ವಿಶೇಷ ಮುತುವರ್ಜಿ ವಹಿಸಿ ನಗರಸಭೆ ಕಾರ್ಯನಿರ್ವಹಿಸಬೇಕಾಗಿದೆ. ತುಕಾರಾಮ ನಾರ್ವೇಕರ ಅವರ ಮನೆಗೆ ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಉಪಾಧ್ಯಕ್ಷ ಸಂಜು ನಂದ್ಯಾಳ್ಕರ, ಸ್ಥಳೀಯ ನಗರಸಭಾ ಸದಸ್ಯೆ ಪ್ರೀತಿ ನಾಯರ್‌, ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.