Karkala Constituency; ಕಾರ್ಕಳ- ವಿ. ಸುನಿಲ್‌ ಕುಮಾರ್‌ 5.63 ಕೋಟಿ ರೂ. ಮೌಲ್ಯದ ಆಸ್ತಿ

ಪತ್ನಿ ಕಡ್ತಲ ಗ್ರಾಮದಲ್ಲಿ ಒಟ್ಟು 4.18 ಎಕರೆ ಕೃಷಿಭೂಮಿ ಹೊಂದಿದ್ದಾರೆ

Team Udayavani, Apr 20, 2023, 10:37 AM IST

Karkala Constituency; ಕಾರ್ಕಳ- ವಿ. ಸುನಿಲ್‌ ಕುಮಾರ್‌ 5.63 ಕೋಟಿ ರೂ. ಮೌಲ್ಯದ ಆಸ್ತಿ

ಕಾರ್ಕಳ ;ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು ರೂ. 5.63 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ.

ಸುನಿಲ್‌ ಅವರ ಕುಟುಂಬದ ಬಳಿ ಒಟ್ಟು 7.98 ಕೋಟಿ ರೂ. ಆಸ್ತಿ ಇದೆ. ಪತ್ನಿ ಪ್ರಿಯಾಂಕಾ 1.80 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ ತಂದೆ ವಾಸುದೇವ ಎಂ.ಕೆ. ಅವರ 54.14 ಲಕ್ಷ ರೂ. ಮೌಲ್ಯದ ಆಸ್ತಿಯೂ ಸೇರಿದೆ. ಸುನಿಲ್‌ 45.16 ಲಕ್ಷ ರೂ. ಸಾಲ ಹೊಂದಿದ್ದಾರೆ.

24.60 ಲಕ್ಷ ರೂ. ಬೆಲೆಯ ಇನ್ನೋವಾ ಕಾರನ್ನು ಹೊಂದಿದ್ದು ವಿವಿಧ ಬ್ಯಾಂಕ್‌ಗಳಲ್ಲಿ ಇರುವ ಠೇವಣಿ ಸಹಿತ ಒಟ್ಟು 12.25 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಅವರ ಪತ್ನಿ 4.06 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಸುನಿಲ್‌ ಒಟ್ಟು 1. 60 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಅವರ ಪತ್ನಿ 1.43 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಸುನಿಲ್‌ ವಿವಿಧೆಡೆ ಒಟ್ಟು 10.27 ಎಕರೆ ಕೃಷಿ ಭೂಮಿಯನ್ನು ಹೊಂದಿದ್ದು, ಇದರ ಮೌಲ್ಯ ರೂ.1.04 ಕೋಟಿ ರೂ. ಹಾಗೂ 148.97 ಸೆಂಟ್ಸ್‌ ಕೃಷಿಯೇತರ ಭೂಮಿಯನ್ನು ಹೊಂದಿದ್ದು ಅದರ ಮೌಲ್ಯ 24.96 ಲಕ್ಷ ರೂ. ಆಗಿದೆ. ಪತ್ನಿ ಕಡ್ತಲ ಗ್ರಾಮದಲ್ಲಿ ಒಟ್ಟು 4.18 ಎಕರೆ ಕೃಷಿಭೂಮಿ ಹೊಂದಿದ್ದು, ಇದರ ಮೌಲ್ಯ 37.62 ಲಕ್ಷ ರೂ. ಆಗಿದೆ.

ನಿಟ್ಟೆ ಗ್ರಾಮದಲ್ಲಿ 5014 ಚ.ಅಡಿ ವಿಸ್ತೀರ್ಣದ ವಸತಿ ಕಟ್ಟಡವನ್ನು ಹೊಂದಿದ್ದಾರೆ. ಸಂಬಳ, ಗುತ್ತಿಗೆ ಬಾಡಿಗೆ ಕೃಷಿ ಹಾಗೂ ಬ್ಯಾಂಕ್‌ ಠೇವಣಿಯ ಬಡ್ಡಿಯಿಂದ ವರ್ಷಕ್ಕೆ 77.02 ಲಕ್ಷ ರೂ. ವರಮಾನ ಹಾಗೂ ಪತ್ನಿಗೆ ಬ್ಯಾಂಕ್‌ ಬಡ್ಡಿ ಹಾಗೂ ಕೃಷಿಯಿಂದ ವಾರ್ಷಿಕ 15.26 ಲಕ್ಷ ರೂ. ವರಮಾನ ಬರುತ್ತಿದೆ. ತಂದೆಗೆ ಪಿಂಚಣಿ ಹಾಗೂ ಬ್ಯಾಂಕ್‌ ಬಡ್ಡಿಯಿಂದ ವಾರ್ಷಿಕ 6.73 ಲಕ್ಷ ರೂ. ವರಮಾನ ಬರುತ್ತಿದೆ.

ಸುನಿಲ್‌ ಬಳಿ 272.70 ಗ್ರಾಂ ಚಿನ್ನಾಭರಣವಿದ್ದು, ಅದರ ಮೌಲ್ಯ 14.31 ಲಕ್ಷ ರೂ. ಹಾಗೂ ಪತ್ನಿ ಬಳಿ 2,230 ಗ್ರಾಂ ಚಿನ್ನಾಭರಣವಿದ್ದು ಇದರ ಮೌಲ್ಯ ರೂ. 1.17 ಕೋಟಿ ರೂ. ಪತ್ನಿ 10.60 ಕೆ.ಜಿ ಬೆಳ್ಳಿಯನ್ನು ಹೊಂದಿದ್ದು ಅದರ ಮೌಲ್ಯ 7.42 ಲಕ್ಷ ರೂ. ಆಗಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.