ಕಾರ್ಕಳ ಉತ್ಸವ ನಿರೀಕ್ಷೆ ಮೀರಿದ ಯಶಸ್ಸು: ಸುನಿಲ್‌

ಬುಲೆಟ್‌ ರ್‍ಯಾಲಿ, ಮನೆ ಮನೆಯಲ್ಲಿ ಮೆಹಂದಿ ಉತ್ಸವ ಉದ್ಘಾಟನೆ

Team Udayavani, Mar 17, 2022, 6:05 AM IST

ಕಾರ್ಕಳ ಉತ್ಸವ ನಿರೀಕ್ಷೆ ಮೀರಿದ ಯಶಸ್ಸು: ಸುನಿಲ್‌

ಕಾರ್ಕಳ: ಸ್ವಚ್ಛತೆ, ಸಂಭ್ರಮ, ವೈಭವಕ್ಕೆ ಕೊರತೆಯಾಗದಂತೆ ಸರ್ವರೂ ಸೇರಿ ಆಚರಿಸುತ್ತಿರುವ ಕಾರ್ಕಳ ಉತ್ಸವ ನಿರೀಕ್ಷೆಗೂ ಮೀರಿ ಯಶಸ್ಸಿನ ಕಡೆಗೆ ಸಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳ ಉತ್ಸವದ ಪ್ರಯುಕ್ತ ಬುಧವಾರ ಬುಲೆಟ್‌ ಬೈಕ್‌ ರ್‍ಯಾಲಿ, ಮನೆ ಮನೆಯಲ್ಲಿ ಮೆಹಂದಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ಸವದಲ್ಲಿ ತಾಲೂಕಿನ ಎಲ್ಲ ಮನೆಯವರು ಭಾಗವಹಿಸಬೇಕು ಎನ್ನುವ ಆಶಯವಿತ್ತು. ಜನರ ಉತ್ಸಾಹ ಕಂಡಾಗ ಅದು ಈಡೇರಿದೆ ಎಂಬುದು ಅರಿವಾಗುತ್ತದೆ. ರಾಜ್ಯಪಾಲರ ಆಗಮನದಿಂದ ಕಾರ್ಕಳ ಉತ್ಸವದ ಮಹತ್ವ ಹೆಚ್ಚಿದೆ.

ರಾಜಧಾನಿಯಲ್ಲೂ ಶಾಸಕರು, ಸಚಿವರು ಉತ್ಸವದ ಬಗ್ಗೆ ಕುತೂಹಲದಿಂದ ವಿಚಾರಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯ, ಸಹಬಾಳ್ವೆಯ ಸಂಕೇತವಾಗಿ ಎಲ್ಲರೊಂದುಗೂಡಿ ಕಾರ್ಕಳ ಉತ್ಸವದಲ್ಲಿ ಸಂಭ್ರಮಿಸುತ್ತಿದ್ದು, ಮಾ. 18ರ ಮೆರವಣಿಗೆ ವೀಕ್ಷಿಸಲು ನಾಡಿನೆಲ್ಲೆಡೆಯಿಂದ ಅಪಾರ ಸಂಖ್ಯೆಯ ಜನ ಆಗಮಿಸುವ ನಿರೀಕ್ಷೆಯಿದೆ. ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೊದಲಾದವರು ಭಾಗವಹಿಸುವರು ಎಂದು ಸುನಿಲ್‌ ತಿಳಿಸಿದರು.

ಸಚಿವರಿಂದ ಬುಲೆಟ್‌ ಸವಾರಿ!
ಸಚಿವರು ಸ್ವತಃ ಬುಲೆಟ್‌ ಬೈಕ್‌ ಚಲಾಯಿಸುವ ಮೂಲಕ ಮೆರವಣಿಗೆ ಪ್ರಚಾರದ ಬುಲೆಟ್‌ ಬೈಕ್‌ ರ್‍ಯಾಲಿ ಗೆ ಚಾಲನೆ ನೀಡಿದರು. ಮಹಿಳೆಯರು ಬುಲೆಟ್‌ ಬೈಕ್‌ ಚಲಾಯಿಸಿ ನಗರ ಸುತ್ತುವ ಮೂಲಕ ಗಮನ ಸೆಳೆದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.