Karnataka: ವರ್ಷಕ್ಕೆ ಸರಾಸರಿ 875 ರೈತರ ಆತ್ಮಹತ್ಯೆ

11 ವರ್ಷಗಳಲ್ಲಿ 9,622 ರೈತರು ಆತ್ಮಹತ್ಯೆ: ಭರವಸೆ ಮೂಡಿಸದ ಯೋಜನೆಗಳು

Team Udayavani, Dec 26, 2023, 6:45 AM IST

SUICIDE

ರಾಮನಗರ: ಸಾಲಮನ್ನಾ, ಕೃಷಿಭಾಗ್ಯ, ಕಿಸಾನ್‌ ಸಮ್ಮಾನ್‌ನಂತಹ ಹಲವು ರೈತಪರ ಕಾರ್ಯಕ್ರಮಗಳನ್ನು ಸರಕಾರಗಳು ಜಾರಿಗೆ ತಂದರೂ ರೈತರ ಆತ್ಮಹತ್ಯೆಗೆ ತಡೆ ಬಿದ್ದಿಲ್ಲ. ಸರಕಾರದ ಅಂಕಿಅಂಶಗಳ ಪ್ರಕಾರ ಪ್ರತಿ ವರ್ಷ ರಾಜ್ಯದಲ್ಲಿ ಸರಾಸರಿ 875 ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ಬರ, ಅತಿವೃಷ್ಟಿ ಅನಾವೃಷ್ಟಿ, ಬೆಲೆ ಕುಸಿತ ಹೀಗೆ ಸಾಲು ಸಾಲು ಸಮಸ್ಯೆ ಗಳಿಂದ ಸಾಲದ ಸುಳಿಗೆ ಸಿಲುಕುತ್ತಿರುವ ರೈತರು ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ 11 ವರ್ಷಗಳಲ್ಲಿ ರಾಜ್ಯದಲ್ಲಿ 9,622 ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 1,917 ಪ್ರಕರಣಗಳನ್ನು ಉಪವಿಭಾಗಾಧಿಕಾರಿ ಮಟ್ಟದ ಸಮಿತಿಯಲ್ಲಿ ತಿರಸ್ಕರಿಸಿದ್ದು, 7,805 ಪ್ರಕರಣಗಳನ್ನು ಪರಿಹಾರಕ್ಕೆ ಅರ್ಹವೆಂದು ತೀರ್ಮಾನಿಸಿದೆ.

2015-16ರಿಂದ 2019- 20ರ ವರೆಗೆ ಹೆಚ್ಚು ರೈತ ಆತ್ಮಹತ್ಯೆ ವರದಿಯಾಗಿದ್ದು, ಈ ಅವಧಿ ಯಲ್ಲಿ 4,696 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020- 21ರಿಂದ 2023-24(ನವೆಂಬರ್‌ ಅಂತ್ಯ)ರ ವರೆಗೆ 3,196 ರೈತ ಆತ್ಮಹತ್ಯೆ ವರದಿಯಾಗಿವೆ.

ಭರವಸೆ ಮೂಡಿಸದ ಘೋಷಣೆ
ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ರೈತರಿಗೆ ತಮ್ಮ ಪ್ರಣಾಳಿಕೆಯಲ್ಲಿ ಆಶ್ವಾಸನೆಗಳ ಮಹಾಪೂರವನ್ನೇ ಹರಿಸುತ್ತವೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬರುವ ಸರಕಾರಗಳು ಪ್ರತಿ ಬಜೆಟ್‌ನಲ್ಲಿ ಹತ್ತಾರು ಸಾವಿರ ಕೋಟಿ ರೂ.ಯೋಜನೆಗಳನ್ನು ರೈತರಿಗೆ ನೀಡುತ್ತವೆಯಾದರೂ, ಇವು ರೈತರ ಜೀವನವನ್ನು ಗಟ್ಟಿಗೊಳಿಸುವಲ್ಲಿ ಯಶಸ್ವಿಯಾಗಿಲ್ಲ ಎಂಬುದಕ್ಕೆ ಆತ್ಮಹತ್ಯೆಯ ಅಂಕಿಅಂಶಗಳೇ ಸಾಕ್ಷಿ.

ಪದೇಪದೆ ಸಾಲದ ಸುಳಿಗೆ ಸಿಲುಕುತ್ತಿರುವ ರೈತ ಬೇಸಾಯದ ಬಗ್ಗೆ ಹತಾಶನಾಗುತ್ತಿದ್ದಾನೆ. ಇದಕ್ಕೆಲ್ಲ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿಗಳೇ ಕಾರಣ. ಕೃಷಿ ನೀತಿ ಸರಿ ಇಲ್ಲದಿರುವುದು, ವೈಜ್ಞಾನಿಕ ಬೆಲೆ ಇರಲಿ ಕನಿಷ್ಠ ಬೆಂಬಲ ಬೆಲೆ ಇಲ್ಲದಿರುವುದು ರೈತ ಸಂಕುಲವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನಾದರೂ ಸರಕಾರಗಳು ಗಂಭೀರವಾಗಿ ರೈತರ ಬಗ್ಗೆ ಚಿಂತನೆ ಮಾಡಬೇಕು.
-ಕೆ.ಮಲ್ಲಯ್ಯ, ಉಪಾಧ್ಯಕ್ಷ, ರಾಜ್ಯ ರೈತಸಂಘ

ರಾಜ್ಯ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ರೈತರ ಆತ್ಮಹತ್ಯೆ ತಡೆಯಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ರೈತ ಆತ್ಮಹತ್ಯೆ ಪ್ರಕರಣದಲ್ಲಿ ಬಾಕಿ ಇರುವ ಪರಿಹಾರದ ಹಣವನ್ನು ತತ್‌ಕ್ಷಣ ಬಿಡುಗಡೆ ಮಾಡಲಿದೆ.
– ಕೃಷ್ಣ ಬೈರೇಗೌಡ, ಕಂದಾಯ ಸಚಿವ (ಬೆಳಗಾವಿ ಅಧಿವೇಶನದಲ್ಲಿ)

ಹಾಲಿ-ಮಾಜಿ ಸಿಎಂಗಳ ಜಿಲ್ಲೆಯಲ್ಲೇ ಹೆಚ್ಚು
ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣಗಳು ವರದಿ ಯಾಗಿವೆ. ನಾಲ್ಕು ವರ್ಷಗಳಲ್ಲಿ (2021-22ನೇ ಸಾಲಿನಿಂದ ಇಲ್ಲಿಯವರೆಗೆ) ಸಿದ್ದರಾಮಯ್ಯ ಅವರ ಮೈಸೂರಿನಲ್ಲಿ 221 ಮಂದಿ ಹಾಗೂ ಬಸವರಾಜ ಬೊಮ್ಮಾಯಿಯವರ ಹಾವೇರಿಯಲ್ಲಿ 235 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಶಿವಮೊಗ್ಗದಲ್ಲಿ 142 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 4 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಬೆಳಗಾವಿ, ಧಾರವಾಡ ಹಾಟ್‌ಸ್ಪಾಟ್‌
ರಾಜ್ಯದ ಎರಡನೇ ರಾಜಧಾನಿ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯು ರೈತ ಆತ್ಮಹತ್ಯೆಯ ಹಾಟ್‌ಸ್ಪಾಟ್‌ ಆಗಿದೆ. ಕಳೆದ 2 ವರ್ಷಗಳಲ್ಲಿ ಬೆಳಗಾವಿಯಲ್ಲಿ 256 ಮಂದಿ ಧಾರವಾಡ ಜಿಲ್ಲೆಯಲ್ಲಿ 198 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.