ಫೆ.18; ಕರ್ಣಾಟಕ ಬ್ಯಾಂಕ್ 99ನೇ ಸಂಸ್ಥಾಪಕರ ದಿನಾಚರಣೆ-ಉಪನ್ಯಾಸ, ಶಾಸ್ತ್ರೀಯ ಸಂಗೀತ ಕಛೇರಿ
Team Udayavani, Feb 17, 2023, 6:37 PM IST
ಮಂಗಳೂರು: ಕರ್ಣಾಟಕ ಬ್ಯಾಂಕ್ ನ 99ನೇ ಸಂಸ್ಥಾಪಕರ ದಿನಾಚರಣೆ ಮತ್ತು ಶತಮಾನೋತ್ಸವ ವರ್ಷದ ಕಾರ್ಯಕ್ರಮದ ಶುಭಾರಂಭದ ಹಿನ್ನೆಲೆಯಲ್ಲಿ ಶನಿವಾರ (ಫೆ.18) ಬೆಂಗಳೂರು ಐಐಐಟಿ ಮಾಜಿ ನಿರ್ದೇಶಕ ಪ್ರೊ.ಎಸ್.ಸಡಗೋಪನ್ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಶನಿವಾರ ಸಂಜೆ 4ಗಂಟೆಗೆ ಮಂಗಳೂರು ಕಂಕನಾಡಿ ಮಹಾವೀರ ವೃತ್ತ ಸಮೀಪದ ಪ್ರಧಾನ ಕಚೇರಿ ಕಟ್ಟಡದ ಕರ್ಣಾಟಕ ಬ್ಯಾಂಕ್ ಅಡಿಟೋರಿಯಂನ 4ನೇ ಮಹಡಿಯಲ್ಲಿ ಉಪನ್ಯಾಸ ಕಾರ್ಯಕ್ರಮ ನೆರವೇರಲಿದೆ.
ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಪಿ.ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸ ಕಾರ್ಯಕ್ರಮದ ನಂತರ ಕರ್ಣಾಟಕ ಶಾಸ್ತ್ರೀಯ ಸಂಗೀತ ಕಛೇರಿ-ಸ್ಟ್ರಿಂಗ್ಸ್ ಅಟ್ಯಾಚ್ಡ್ ಕಾರ್ಯಕ್ರಮ ನಡೆಯಲಿದೆ.
ಸಂಗೀತ ಕಛೇರಿಯಲ್ಲಿ ಕಲಾವಿದರಾದ ವಯೋಲಿನ್ ವಿದ್ವಾನ್ ಆರ್ ಕುಮರೇಶ್, ವೀಣಾ-ವಿದುಷಿ ಡಾ.ಜಯಂತಿ ಕುಮರೇಶ್, ಮೃದಂಗ-ವಿದ್ವಾನ್ ಕೆ.ಯು.ಜಯಚಂದ್ರ ರಾವ್ ಹಾಗೂ ತಬಲ-ಮೋರ್ಚಿಂಗ್ ವಿದ್ವಾನ್ ಪ್ರಮಥ್ ಕಿರಣ್ ಪಾಲ್ಗೊಳ್ಳಲಿದ್ದಾರೆ ಎಂದು ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ