ತೆರಿಗೆ ಹೊರೆ ಇಲ್ಲದೆ ಸಂಪನ್ಮೂಲ ಕ್ರೋಢೀಕರಣದ ಜಾಣ್ಮೆ
Team Udayavani, Feb 18, 2023, 7:35 AM IST
ಬೆಂಗಳೂರು: ಚುನಾವಣೆ ವರ್ಷದ ಬಜೆಟ್ನಲ್ಲಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹಾಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪನ್ಮೂಲ ಕ್ರೋಢೀಕರಣದಲ್ಲಿ ಜಾಣ್ಮೆ ತೋರಿದ್ದಾರೆ.
ವೃತ್ತಿ ತೆರಿಗೆ ವಿನಾಯಿತಿ 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ನಿಗದಿ ಮಾಡುವ ಮೂಲಕ ಕಡಿಮೆ ವರಮಾನದ ವರ್ಗಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.
2023-24 ನೇ ಸಾಲಿನಲ್ಲಿ ರಾಜ್ಯದ ಬಜೆಟ್ ಗಾತ್ರ 3,03,910 ಕೋಟಿ ರೂ. ತಲುಪಿದ್ದು 2022-23 ಸಾಲಿಗೆ ಹೋಲಿಸಿದರೆ 15 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ.
2023-24 ನೇ ಸಾಲಿಗೆ ಜಿಎಸ್ಟಿ ಪರಿಹಾರ ಹೊರತುಪಡಿಸಿ 92 ಸಾವಿರ ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ ಗುರಿ ನಿಗದಿ ಮಾಡಿದ್ದು, ಅಬಕಾರಿ ವಲಯದಿಂದ 35 ಸಾವಿರ ಕೋಟಿ ರೂ.ನಿರೀಕ್ಷಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಬಾಬಿ¤ನಿಂದ 19 ಸಾವಿರ ಕೋಟಿ ರೂ., ಸಾರಿಗೆ ಇಲಾಖೆಯಿಂದ 10,500 ಕೋಟಿ ರೂ., ಗಣಿ ಮತ್ತು ಭೂ ವಿಜ್ಞಾನ ಮೂಲಕ ಖನಿಜ ಬ್ಲಾಕ್ಗಳ ಹರಾಜಿನಿಂದ 7,500 ಕೋಟಿ ರೂ. ಸೇರಿ ಒಟ್ಟು 1.64 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ಹೊಂದಿದ್ದಾರೆ.
ಅಬಕಾರಿ ವಲಯದಿಂದ 2022-23 ನೇ ಸಾಲಿನಲ್ಲಿ 29 ಸಾವಿರ ಕೋಟಿ ರೂ. ನಿರೀಕ್ಷಿಸಿ 32 ಸಾವಿರ ಕೋಟಿ ರೂ. ಸಂಗ್ರಹವಾಗಿದ್ದು, ಈ ವರ್ಷ 35 ಸಾವಿರ ಕೋಟಿ ರೂ. ಟಾರ್ಗೆಟ್ ನೀಡಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಬಾಬಿನಿಂದ 15 ಸಾವಿರ ಕೋಟಿ ರೂ. ಗುರಿ ಪೈಕಿ 17 ಸಾವಿರ ಕೋಟಿ ರೂ. ಸಂಗ್ರಹವಾಗಿರುವ ಹಿನ್ನೆಲೆಯಲ್ಲಿ ಈ ವರ್ಷ 19 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಲಾಗಿದೆ. ಅದೇ ರೀತಿ ಸಾರಿಗೆ ಇಲಾಖೆಯಿಂದ 2022-23 ನೇ ಸಾಲಿನ ಗುರಿ 8,007 ಕೋಟಿ ರೂ.ಗಳಿಗಿಂತ 1 ಸಾವಿರ ಕೋಟಿ ರೂ. ಹೆಚ್ಚು ಸಂಗ್ರಹ ಮೂಲಕ ಗುರಿಗಿಂತ ಶೇ.13 ರಷ್ಟು ಹೆಚ್ಚು ಸಾಧಿಸಿದ್ದರಿಂದ ಈ ವರ್ಷ 10,500 ಕೋಟಿ ರೂ.ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್