ಸಂಪುಟ ವಿಸ್ತರಣೆ ಜ.17, 18ಕ್ಕೆ?


Team Udayavani, Jan 8, 2020, 5:58 AM IST

14

ಬೆಂಗಳೂರು: ಸ್ವಿಟ್ಜರ್‌ಲ್ಯಾಂಡ್‌ನ‌ ದಾವೋಸ್‌ನಲ್ಲಿ ಜ.20ರಿಂದ 24ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪಾಲ್ಗೊಳ್ಳುವ ಬಗ್ಗೆ ಶನಿವಾರ ಅಂತಿಮವಾಗಲಿದ್ದು, ಅದರ ಮೇಲೆ ಸಂಪುಟ ವಿಸ್ತರಣೆ ಪ್ರಕ್ರಿಯೆ ನಿರ್ಧಾರವಾಗಲಿದೆ.

ಸಂಕ್ರಾಂತಿ ಹಬ್ಬದ ರಾತ್ರಿ ಇಲ್ಲವೇ ಜ.16ಕ್ಕೆ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ಪುನಾರಚನೆ ಇಲ್ಲವೇ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಚಿಂತನೆಯಲ್ಲಿ ಮುಖ್ಯಮಂತ್ರಿಗಳಿದ್ದಾರೆ. ಒಂದೊಮ್ಮೆ ವರಿಷ್ಠರನ್ನು ಭೇಟಿಯಾಗಿ ಒಪ್ಪಿಗೆ ಪಡೆದರೆ ಜ.17 ಇಲ್ಲವೇ 18ರಂದು ನೂತನ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಜ.19ರಂದು ದಾವೋಸ್‌ ಪ್ರವಾಸ
ಕೈಗೊಂಡರೆ ಜ.23ರ ಬಳಿಕ ಖಾತೆ ಹಂಚಿಕೆಯಾಗುವ ಸಂಭವವಿದೆ ಎಂದು ಮೂಲಗಳು ಹೇಳಿವೆ.

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ ನಡೆದರೆ ಸಚಿವ ಸ್ಥಾನದ ಆಕಾಂಕ್ಷಿಗಳು ಅಸಮಾಧಾನ ಹೊರಹಾಕುವ ಸಾಧ್ಯತೆ ಇದೆ. ಹಾಗಾಗಿ, ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ ಮುಗಿಸಿ ವಿದೇಶ ಪ್ರವಾಸ ಕೈಗೊಂಡರೆ ಸ್ಥಾನ ವಂಚಿತರ ಅಸಮಾಧಾನವೂ ತಕ್ಕ ಮಟ್ಟಿಗೆ ಶಮನವಾದಂತಾಗಲಿದೆ. ವಿದೇಶ ಪ್ರವಾಸದಿಂದ ಹಿಂತಿರುಗಿದ ಬಳಿಕ ಎಲ್ಲರನ್ನೂ ಸಮಾಧಾನಪಡಿಸಿ ಖಾತೆ ಹಂಚಿಕೆ ಪ್ರಕ್ರಿಯೆ ಸುಗಮಗೊಳಿಸಬಹುದು ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗಿದೆ. ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ 50ನೇ ವಾರ್ಷಿಕ ಸಭೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಆಹ್ವಾನವಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಖ್ಯಾತಿ ಪಡೆದಿದ್ದು, ರಾಜ್ಯವನ್ನು ವಾರ್ಷಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳು ಪ್ರತಿನಿಧಿಸಬೇಕು ಎಂಬುದು ಕೇಂದ್ರ ಸರ್ಕಾರದ ಆಶಯವಾಗಿದೆ. ಆದರೆ, ವಿದೇಶ ಪ್ರವಾಸಕ್ಕೆ ಯಡಿಯೂರಪ್ಪ ಅವರು ಹೆಚ್ಚಿನ ಆಸಕ್ತಿ ತೋರಿಲ್ಲ. ದಾವೋಸ್‌ ಪ್ರವಾಸ ಕೈಗೊಳ್ಳುವ ಬಗ್ಗೆ ಶನಿವಾರ ನಿರ್ಧಾರ ಅಂತಿಮವಾಗಲಿದೆ. ಮುಖ್ಯಮಂತ್ರಿಗಳ ನಿಲುವಿನ ಮೇಲೆ ಸಂಪುಟ ವಿಸ್ತರಣೆ ನಿರ್ಧಾರವಾಗಲಿದೆ ಎನ್ನಲಾಗಿದೆ.

ಮುಖ್ಯಮಂತ್ರಿಗಳು ದಾವೋಸ್‌ ಪ್ರವಾಸ ಕೈಗೊಳ್ಳುವುದು ಖಚಿತವಾದರೆ ಜ.19ರಿಂದ 23ರವರೆಗೆ ಮಾತ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಇದಕ್ಕೂ ಮೊದಲೇ ವರಿಷ್ಠರ ಭೇಟಿಗೆ ಅವಕಾಶ ಸಿಗುವುದೇ ಎಂಬುದರ ಮೇಲೆ ಸಂಪುಟ ವಿಸ್ತರಣೆ ನಿರ್ಧಾರವಾಗಲಿದೆ. ಜ.18ರಂದು ಕೇಂದ್ರ ಗೃಹ ಸಚಿವರಾದ
ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದಕ್ಕೂ ಮೊದಲೇ ಯಡಿಯೂರಪ್ಪ ಅವರು ವರಿಷ್ಠರನ್ನು ಭೇಟಿಯಾಗಿ ಚರ್ಚಿಸಿ ಒಪ್ಪಿಗೆ ಪಡೆಯಬೇಕಿದೆ. ಫೆ.17ರಿಂದ 21ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಅದಕ್ಕೂ ಮೊದಲು ಸಚಿವರಾಗಬೇಕು ಎಂಬುದು ನೂತನ ಶಾಸಕರ ಆಗ್ರಹ. ಹಾಗಾಗಿ, ವರಿಷ್ಠರ ಒಪ್ಪಿಗೆ, ಯಡಿಯೂರಪ್ಪ ಅವರ ನಿಲುವಿನ ಮೇಲೆ ಸಂಪುಟ ವಿಸ್ತರಣೆ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.