Karnataka: ಬಜೆಟ್‌ ಭಾಷಣದಲ್ಲಿ ಕೇಂದ್ರ ವಿರುದ್ಧ ಚಾರ್ಜ್‌ಶೀಟ್‌


Team Udayavani, Feb 17, 2024, 12:05 AM IST

bud

ಬೆಂಗಳೂರು: ರಾಜ್ಯಪಾಲರ ಭಾಷಣದ ಮುಂದುವರಿದ ಭಾಗವಾಗಿ ರಾಜ್ಯ ಬಜೆಟ್‌ನಲ್ಲೂ ತೆರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ಮುಂದುವರಿಸಿದ್ದು, ಅವಕಾಶ ಸಿಕ್ಕಲೆಲ್ಲ ಕೇಂದ್ರ ಸರಕಾರಕ್ಕೆ “ಬೈಗುಳ ಭಾಗ್ಯ” ಕರುಣಿಸಿದ್ದಾರೆ.

2022-23ಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇ.18ರಷ್ಟು ಹೆಚ್ಚಳ ಕಂಡಿರುವುದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ ಈ ವಾದಕ್ಕೆ ಪೂರಕವಾದ ಅಥವಾ ಸಮರ್ಥನೆಗೆ ಬಲ ನೀಡುವ ಯಾವುದೇ ಅಂಶವನ್ನು ಬಜೆಟ್‌ನಲ್ಲಿ ಪ್ರಸ್ತುತ ಪಡಿಸಿಲ್ಲ. ಗ್ಯಾರಂಟಿಯಿಂದ ಜನರ ಆದಾಯ ಪ್ರಮಾಣ ಹೆಚ್ಚಾಗಿ, ಆರ್ಥಿಕತೆಯನ್ನು ಉತ್ತೇಜಿಸು ವಲ್ಲಿ ಸಹಕಾರಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

2017ರಿಂದ 2023-24ರ ವರೆಗೆ ರಾಜ್ಯದಲ್ಲಿ ಒಟ್ಟು 4,92,296 ಕೋಟಿ ರೂ.ಗಳ ಜಿ.ಎಸ್‌.ಟಿ ತೆರಿಗೆ ಸಂಗ್ರಹಣೆಯಾಗುತ್ತದೆ ಎಂದು ಅಂದಾಜಿಸ ಲಾಗಿತ್ತು. ಆದರೆ ವಾಸ್ತವಿಕವಾಗಿ ರಾಜ್ಯದಲ್ಲಿ 3,26,764 ಕೋಟಿ ರೂ.ಗಳ ಜಿ.ಎಸ್‌.ಟಿ ತೆರಿಗೆ ಸ್ವೀಕೃತವಾಗಿದೆ. ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿನ ಕೊರತೆ 1,65,532 ಕೋಟಿ ರೂ.ಗಳಿಗೆ ಎದುರಾಗಿ, ಕೇಂದ್ರ ಸರಕಾರವು ರಾಜ್ಯಕ್ಕೆ ಕೇವಲ 1,06,258 ಕೋಟಿ ರೂ. ಪರಿಹಾರವನ್ನು ಮಾತ್ರ ಬಿಡುಗಡೆ ಮಾಡಿದೆ. ಜಿಎಸ್‌ಟಿ. ತೆರಿಗೆಯ ಅವೈಜ್ಞಾನಿಕ ಅನುಷ್ಠಾನದಿಂದ ರಾಜ್ಯಕ್ಕೆ ಕಳೆದ ಏಳು ವರ್ಷಗಳ ಅವಧಿಯಲ್ಲಿ ಒಟ್ಟು 59,274 ಕೋಟಿ ರೂ.ಗಳ ನಷ್ಟವಾಗಿರುತ್ತದೆ ಎಂದು ಆಪಾದಿಸಿದ್ದಾರೆ.

15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ನೀಡಿದ್ದ ಮಧ್ಯಾಂತರ ವರದಿಯ ಶಿಫಾರಸ್ಸಿನಿಂದ ರಾಜ್ಯಕ್ಕಾದ ಅನ್ಯಾಯ ವನ್ನು ಸರಿಪಡಿಸುವಲ್ಲಿ ಹಿಂದಿನ ಸರಕಾರವು ವಿಫ‌ಲವಾಯಿತು. ರಾಜ್ಯದ ಜಿಎಸ್‌ಡಿ.ಪಿ ಲೆಕ್ಕಾಚಾರ ಮಾಡುವ ವಿಧಾನದಲ್ಲಿ ಬದಲಾವಣೆ ಹಾಗೂ 1971ರ ಬದಲು 2011ರ ಜನಗಣತಿ ವರದಿಯ ಬಳಕೆಯಿಂದಾಗಿ ಅಭಿವೃದ್ಧಿಶೀಲ ರಾಜ್ಯಗಳಿಗೆ ಭಾರೀ ನಷ್ಟವುಂಟಾಗಿದೆ. 15ನೇ ಹಣಕಾಸು ಆಯೋಗದ 6 ವರ್ಷ ಅವಧಿಯಲ್ಲಿ ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ಒಟ್ಟು ತೆರಿಗೆ ಹಂಚಿಕೆಯಲ್ಲಿ, ರಾಜ್ಯಕ್ಕೆ 62,098 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2020-21ನೇ ವರ್ಷಕ್ಕೆ 5,495 ಕೋ. ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಅಂತಿಮ ವರದಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6,000 ಕೋ. ರೂ. ರಾಜ್ಯ ಕೇಂದ್ರಿತ ಅನುದಾನವನ್ನು ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸ್ಸುಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿದೆ. ರಾಜ್ಯದಲ್ಲಿ ಡಬಲ್‌ ಎಂಜಿನ್‌ ಎಂದು ಹೇಳಿಕೊಳ್ಳುವ ಸರಕಾರ ಇದ್ದರೂ ಸಹ ಕೇಂದ್ರದಿಂದ ಒಟ್ಟು 11,495 ಕೋ. ರೂ.ಗಳ ವಿಶೇಷ ಅನುದಾನ ಪಡೆಯುವಲ್ಲಿ ಹಿಂದಿನ ಸರಕಾರ ಅಸಮರ್ಥವಾಗಿತ್ತು ಎಂದು ಟೀಕಿ ಸಿದ್ದಾರೆ. ಈ ಅನ್ಯಾಯ ಮರುಕಳಿಸದಂತೆ ನೋಡಿ ಕೊಳ್ಳಲು ಸಚಿವ ಸಂಪುಟದ ಮಾರ್ಗದರ್ಶ ನದೊಂದಿಗೆ ವಿಷಯ ತಜ್ಞರನ್ನು ಒಳಗೊಂಡ ತಾಂತ್ರಿಕಕೋಶವನ್ನು ರಚಿಸಿ ರಾಜ್ಯಕ್ಕೆ ಹೆಚ್ಚು ತೆರಿಗೆ ಪಾಲು ಪಡೆಯಲು ಒಂದು ಜ್ಞಾಪನಾ ಪತ್ರವನ್ನು 16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ.

ಅನ್ನಭಾಗ್ಯದಡಿ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯ ನೀಡುವ ರಾಜ್ಯ ಸರಕಾರದ ಪ್ರಯತ್ನಕ್ಕೆ ಕೇಂದ್ರ ಅಸಹಕಾರ ತೋರಿದೆ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.