“ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವವನಲ್ಲ, ರಾಜೀನಾಮೆಗೆ ಸಿದ್ಧ’: ಬಿ.ಎಸ್.ಯಡಿಯೂರಪ್ಪ
Team Udayavani, Jan 14, 2020, 9:25 PM IST
ದಾವಣಗೆರೆ: “ರಾಜ್ಯ ಸರ್ಕಾರ ಇನ್ನೂ ಮೂರು ವರ್ಷ ಯಾವ ರೀತಿ ನಡೆಯಬೇಕು ಎಂದು ಸ್ವಾಮೀಜಿಗಳು ಸಲಹೆ ನೀಡಿದರೆ ತಲೆಬಾಗುತ್ತೇನೆ. ಬೇಡ ಎಂದರೆ ನಾಳೆಯೇ ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಸಿದ್ಧ. ನಾನೇನು ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವವನಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಡುಗಿದರು.
ಮಂಗಳವಾರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಹರ ಜಾತ್ರಾ ಮಹೋತ್ಸವದ ಬೆಳ್ಳಿ ಬೆಡಗು ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಮಾತನಾಡುವುದಕ್ಕೂ ಮುನ್ನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಶೀರ್ವಚನದಲ್ಲಿ, ಸಮಾಜದ ಮೂವರಿಗೆ ಸಚಿವ ಸ್ಥಾನ ಕೊಡಲೇಬೇಕು. ಪ್ರಥಮಾದ್ಯತೆಯಾಗಿ ಮುರುಗೇಶ ನಿರಾಣಿಯವರಿಗೆ ನೀಡಲೇಬೇಕು. ನೀವೇನಾದರೂ ಕೈ ಕೊಟ್ಟಲ್ಲಿ ಇಡೀ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ನಿಮಗೆ ಕೈ ಕೊಡುತ್ತದೆ ಎಂದಾಗ, ಯಡಿಯೂರಪ್ಪ ಸಭೆಯಿಂದ ಹೊರ ನಡೆಯುವುದಾಗಿಯೂ ಹೇಳಿದ್ದರು.
ನಂತರ ಮಾತನಾಡಿದ ಯಡಿಯೂರಪ್ಪ, ಸ್ವಾಮೀಜಿಯವರು ಬಹಳ ಒಳ್ಳೆಯ ಮಾತನ್ನಾಡಿದ್ದಾರೆ. ನನ್ನ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಬೇಕು. 17 ಜನ ಶಾಸಕರು, ಮಂತ್ರಿಗಳಾಗಿದ್ದವರು ರಾಜೀನಾಮೆ ಕೊಟ್ಟು 4 ತಿಂಗಳು ವನವಾಸ ಅನುಭವಿಸದೇ ಹೋಗಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಆಗುತ್ತಿರಲಿಲ್ಲ ಎಂದರು.
ಅವರ ತ್ಯಾಗ ಮತ್ತು ಪಂಚಮಸಾಲಿ ಸಮಾಜದ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದೇನೆಂಬ ಅರಿವು ನನಗಿದೆ. 17 ಜನರು ಶಾಸಕರು ರಾಜೀನಾಮೆ ನೀಡಿದ ಕಾರಣಕ್ಕೆ ಮುಖ್ಯಮಂತ್ರಿ ಆಗಿರುವ ಋಣ ತೀರಿಸುವ ಕಳಕಳಿಯೂ ಇದೆ. ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಬೇಕಾದರೆ ಎಲ್ಲಾ ಸ್ವಾಮೀಜಿಗಳನ್ನು ಸೇರಿಸಿ ಸಭೆ ನಡೆಸಿ, ನನ್ನ ಪರಿಸ್ಥಿತಿಯನ್ನು ತಿಳಿಸುತ್ತೇನೆ. ನೀವು ಏನು ಸಲಹೆ ನೀಡುತೀ¤ರೋ ಅದಕ್ಕೆ ತಲೆ ಬಾಗಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ