Karnataka: ಕೊನೆಗೂ ಬಂತು ನಿಗಮ, ಮಂಡಳಿ ನೇಮಕ ಪಟ್ಟಿ: ಹಂಚಿಕೆ ಸರ್ಕಸ್ ಬಾಕಿ!
Team Udayavani, Jan 16, 2024, 10:20 PM IST
ಬೆಂಗಳೂರು: ನಿರೀಕ್ಷೆಯಂತೆ ಮಕರ ಸಂಕ್ರಾಂತಿ ಮರುದಿನವೇ ನಿಗಮ- ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿದೆ. ಈಗ ಅವುಗಳ ಹಂಚಿಕೆ ಸರ್ಕಸ್ ಶುರುವಾಗಿದೆ.
ಸುಮಾರು 40 ಜನರ ಪಟ್ಟಿಯನ್ನು ಪಕ್ಷದ ಹೈಕಮಾಂಡ್ ಕಳುಹಿಸಿಕೊಟ್ಟಿದೆ. ಅದರಲ್ಲಿ ಯಾರಿಗೆ ಯಾವ ನಿಗಮ ಅಥವಾ ಮಂಡಳಿ ನೀಡಬೇಕು ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಒಂದೆರಡು ದಿನಗಳಲ್ಲಿ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.
ಕೆಲವು ನಿಗಮ- ಮಂಡಳಿಗಳಿಗೆ ಭಾರೀ ಬೇಡಿಕೆ ಇದ್ದು, ಇಬ್ಬರೂ ನಾಯಕರ ಬೆಂಬಲಿಗರ ನಡುವೆ ಪೈಪೋಟಿ ಏರ್ಪಟ್ಟಿದೆ. ಕೆಲವು ಪ್ರತಿಷ್ಠಿತ ನಿಗಮಗಳನ್ನು ತಮ್ಮ ಬೆಂಬಲಿಗರಿಗೇ ನೀಡಬೇಕು ಎಂಬ ಪಟ್ಟು ಕೂಡ ಇದೆ. ಇನ್ನು ಮೂರು-ನಾಲ್ಕು ಬಾರಿ ಆಯ್ಕೆಯಾದ ಶಾಸಕರು, ಅತ್ತ ತಮಗೆ ಸಚಿವ ಸ್ಥಾನವೂ ಇಲ್ಲ. ಇತ್ತ ಕೇಳಿದ ನಿಗಮ ಅಥವಾ ಮಂಡಳಿಯೂ ಕೊಡುವುದಿಲ್ಲ ಎಂದರೆ ಹೇಗೆ? ಎಂಬ ಮುನಿಸೂ ಕೇಳಿಬರುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಈಗಾಗಲೇ ಪಟ್ಟಿಯಲ್ಲಿದ್ದ ಕೆಲವರಿಗೆ ಯಾವ ನಿಗಮ-ಮಂಡಳಿ ಅಧ್ಯಕ್ಷಗಿರಿ ತಮಗೆ ಒಲಿಯಲಿದೆ ಎಂಬ ಸುಳಿವನ್ನೂ ನಾಯಕರು ನೀಡಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಇದರಲ್ಲಿ ಎರಡು ಬಾರಿ ಶಾಸಕರಾದವರಿಗೂ ಈ ಅಧಿಕಾರ ಭಾಗ್ಯ ಒಲಿದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ