Karnataka: ದೇವಾಲಯ ಜೀರ್ಣೋದ್ಧಾರ ಅನುದಾನಕ್ಕೆ ಕತ್ತರಿ ಆದೇಶ ವಾಪಸ್
Team Udayavani, Aug 18, 2023, 11:22 PM IST
ಬೆಂಗಳೂರು: ರಾಜ್ಯದ ವಿವಿಧ ದೇವಾಲ ಯಗಳ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕಾಗಿ 2022-23ನೇ ಸಾಲಿನಲ್ಲಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಜೂರಾಗಿದ್ದ ಅನುದಾನಕ್ಕೆ ಕತ್ತರಿ ಹಾಕಿದ್ದ ಸರಕಾರವು, ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಅನುದಾನಕ್ಕೆ ಆದೇಶವನ್ನು ಹಿಂಪಡೆದಿದೆ.
ಸರಕಾರದಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅಭಿವೃದ್ಧಿ/ ಜೀರ್ಣೋದ್ಧಾರಕ್ಕಾಗಿ ಮಂಜೂರಾದ ಅನುದಾನವನ್ನು ಬಿಡುಗಡೆ ಮಾಡಬಾರದು ಹಾಗೂ ಕಾಮಗಾರಿ ಪ್ರಾರಂಭಿಸದೆ ಇದ್ದಲ್ಲಿ, ಅದನ್ನು ಪ್ರಾರಂಭಿಸತಕ್ಕದ್ದಲ್ಲ ಎಂದು ಆ.14ರಂದು ಆದೇಶ ಹೊರಡಿಸಿತ್ತು. ಇದಕ್ಕೆ ವ್ಯಾಪಕ ಟೀಕೆ ಗಳು ವ್ಯಕ್ತ ವಾ ಗು ತ್ತಿ ದ್ದಂತೆ, ಶುಕ್ರವಾರ ಆದೇಶ ಹಿಂಪಡೆದಿದೆ.
ಅಲ್ಲದೆ, ನನ್ನ ಗಮನಕ್ಕೆ ಬಾರದೆ ದೇಗುಲಗಳ ಅನುದಾನಕ್ಕೆ ತಡೆ ನೀಡಲಾಗಿತ್ತು. ಆ ಆದೇಶ ವಾಪಸ್ ಪಡೆಯುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ದೇವಸ್ಥಾನಗಳ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನದ ಅಗತ್ಯ ಇದ್ದರೆ, ಬಿಡುಗಡೆ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಟ್ವೀಟ್ ಮೂಲಕ ಸಮಜಾಯಿಷಿ ನೀಡಿದ್ದಾರೆ.
ಹಿಂದಿನ ಆದೇಶದಲ್ಲಿ ಹೇಳಿದ್ದಿಷ್ಟು
ಸರಕಾರದಿಂದ ದೇವಾಲಯಗಳ ಅಭಿವೃದ್ಧಿ/ ಜೀರ್ಣೋದ್ಧಾರಕ್ಕಾಗಿ ಅನುದಾನ ಮಂಜೂರಾಗಿದ್ದು (ಮೂಲಗಳ ಪ್ರಕಾರ 70 ಕೋಟಿ ರೂ.ಗೂ ಅಧಿಕ), ಕಾಮಗಾರಿಗಳನ್ನು ಪ್ರಾರಂಭಿಸದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದವರೆಗೆ ಹಣ ಬಿಡುಗಡೆ ಮಾಡಬಾರದು. 2022-23ನೇ ಸಾಲಿನಲ್ಲಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ ಶೇ.50ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಹಣ ಬಿಡುಗಡೆ ಮಾಡದಿದ್ದಲ್ಲಿ ಆ ಕಾಮಗಾರಿಗೆ ಹಣ ಬಿಡುಗಡೆ ಮಾಡಬಾರದು ಹಾಗೂ ಕಾಮಗಾರಿ ಪ್ರಾರಂಭಿಸಬಾರದು. ಅಲ್ಲದೆ, ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕಾರ ಆಗಿದ್ದಲ್ಲಿ, ಅವುಗಳಿಗೂ ಮಂಜೂರಾತಿ ತಡೆಹಿಡಿಯಬೇಕು ಎಂದು ಸೂಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ