ಮಂಗಳೂರು ದಕ್ಷಿಣ: ಅಪಾರ ಬೆಂಬಲಿಗರ ಸಾಥ್- ಕಾಂಗ್ರೆಸ್ ಅಭ್ಯರ್ಥಿ ಲೋಬೋ ನಾಮಪತ್ರ ಸಲ್ಲಿಕೆ
ಕಾರ್ಯಕರ್ತರು, ಅಭಿಮಾನಿಗಳ ಸಂಖ್ಯೆ ನೋಡಿ ತುಂಬಾ ಖುಷಿಯಾಗಿದೆ.
Team Udayavani, Apr 20, 2023, 5:50 PM IST
ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ (ಎ.20) ತಮ್ಮ ಅಪಾರ ಬೆಂಬಲಿಗರ ಜತೆಗೂಡಿ ಬಂದು ನಾಮಪತ್ರ ಸಲ್ಲಿಸಿದರು.
ನಾವು ಯಾವುದೇ ವೈಮನಸ್ಸಿಲ್ಲದೆ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಜನರ ಒಲವು ಈ ಬಾರಿ ಕಾಂಗ್ರೆಸ್ ಪರ ಇದೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಕಾರ್ಯಕರ್ತರು, ಅಭಿಮಾನಿಗಳ ಸಂಖ್ಯೆ ನೋಡಿ ತುಂಬಾ ಖುಷಿಯಾಗಿದೆ. ಮಾಜಿ ಶಾಸಕನಾಗಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು ಇನ್ನೂ ಜನಮಾನಸದಲ್ಲಿದ್ದು ಆ ಕಾರಣದಿಂದ ನನ್ನ ಕ್ಷೇತ್ರದ ನನ್ನನ್ನು ಗೆಲ್ಲಿಸುತ್ತಾರೆಂಬ ನಂಬಿಕೆ ಜನರು ಹಾಗೂ ಭಗವಂತನ ಮೇಲಿದೆ ಎಂದರು.
ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ, ಮುಖಂಡರಾದ ಬಿ.ಪಿ. ಹರೀಶ್ ಕುಮಾರ್, ಶಶಿಧರ್ ಹೆಗ್ಡೆ, ಮುಹಮ್ಮದ್ ನವಾಝ್ ಹಾಜರಿದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಮಂಗಳಾದೇವಿಯ ಶ್ರೀ ಮಹತೋಭಾರ ಕ್ಷೇತ್ರ, ಕದ್ರಿಯ ಶ್ರೀ ಮಂಜುನಾಥ ಕ್ಷೇತ್ರ, ಬಿಕರ್ನಕಟ್ಟೆಯ ಇನ್-ಂಟ್ ಜೀಸಸ್ ದೇವಾಲಯ, ಮಂಗಳೂರಿನ ಬಿಷಪ್ ಹೌಸ್, ರಥಬೀದಿಯ ವೆಂಕಟರಮಣ ದೇವಸ್ಥಾನ, ಬಂದರಿನ ಝೀನತ್ ಭಕ್ಷ್ ಜುಮ್ಮಾ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಜತೆ ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ