“ದುಡಿಯೋಣ ಬಾ’ ಅಭಿಯಾನದ ಉದ್ದೇಶ ಈಡೇರಲಿ


Team Udayavani, Mar 15, 2021, 6:35 AM IST

“ದುಡಿಯೋಣ ಬಾ’ ಅಭಿಯಾನದ ಉದ್ದೇಶ ಈಡೇರಲಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತೀ ಬೇಸಗೆಯಲ್ಲಿ ಜನರು ನಗರ ಪ್ರದೇಶ ಅಥವಾ ಇತರ ರಾಜ್ಯಗಳಿಗೆ ವಲಸೆ ಹೋಗುವುದು ಸಾಮಾನ್ಯ. ಬೇಸಗೆ ಅವಧಿಯಲ್ಲಿ ಈ ಜಿಲ್ಲೆಗಳಲ್ಲಿ ನೀರಿನ ತೀವ್ರ ಅಭಾವ ವಿರುವುದರಿಂದ ಕೃಷಿ ಚಟುವಟಿಕೆ ಸಹಿತ ಯಾವುದೇ ಕೆಲಸಕಾರ್ಯಗಳು ಇಲ್ಲದೇ ಇರುವುದರಿಂದ ಜನರು ಜೀವನೋಪಾಯ­ಕ್ಕಾಗಿ ಕೆಲಸ ಅರಸುತ್ತಾ ನಗರ ಪ್ರದೇಶಗಳತ್ತ ಮುಖ ಮಾಡುತ್ತಾರೆ. ಈ ಬಾರಿ ಜನರ ವಲಸೆ ತಡೆಗಟ್ಟುವ ಪ್ರಯತ್ನವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ “ದುಡಿಯೋಣ ಬಾ” ಅಭಿಯಾನವನ್ನು ಹಮ್ಮಿಕೊಂಡಿದೆ.
ಸೋಮವಾರ ಆರಂಭಗೊಳ್ಳಲಿರುವ ಅಭಿಯಾನದಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ನರೇಗಾದಡಿಯಲ್ಲಿ ನಿರಂತರವಾಗಿ ಗ್ರಾಮೀಣ ಭಾಗದವರಿಗೆ ಕೆಲಸವನ್ನು ಒದಗಿಸಿಕೊಡುವ ಕಾರ್ಯ ಆಗಲಿದೆ. ಕೆಲಸರಹಿತರಿಗೆ ವರ್ಷದಲ್ಲಿ ಕನಿಷ್ಠ 100 ದಿನಗಳ ಕೆಲಸ ದೊರಕಿಸಿಕೊಡುವ ಉದ್ದೇಶದಿಂದ ಆರಂಭಗೊಂಡ ನರೇಗಾ ಯೋಜನೆಯಿಂದಲೂ ಹೊರಗುಳಿದಿರುವ ಗ್ರಾಮಸ್ಥರನ್ನು ಈ ಅಭಿಯಾನದಡಿ ತಂದು ಅವರನ್ನು ಕ್ರಿಯಾಶೀಲರನ್ನಾಗಿಸುವ ಮತ್ತು ಆ ಮೂಲಕ ಬಡ ಕುಟುಂಬಗಳಿಗೆ ಆಸರೆಯಾಗುವ ಇರಾದೆ ಸರಕಾರದ್ದಾಗಿದೆ.

ಮೊದಲ ಹಂತದಲ್ಲಿ ಅಭಿಯಾನದ ಕುರಿತಾಗಿ ಗ್ರಾಮಗಳಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದ್ದು ಆ ಬಳಿಕ ಉದ್ಯೋಗ ಚೀಟಿ ವಿತರಣೆ, ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದವರ ಹೆಸರು ನೋಂದಣಿ ಮತ್ತು ಇದಾದ ಎರಡೇ ದಿನಗಳಲ್ಲಿ ಅವರಿಗೆ ಕೆಲಸ ನೀಡಲು ನಿರ್ಧರಿಸಲಾಗಿದೆ. ಇವೆಲ್ಲದರ ಜತೆಯಲ್ಲಿ ಕೆಲಸದಾಳುಗಳ ಹಿತರಕ್ಷಣೆಯ ನಿಟ್ಟಿನಲ್ಲಿಯೂ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಕಳೆದ ಬಾರಿ ಕೊರೊನಾದಿಂದಾಗಿ ಭಾರೀ ಸಂಖ್ಯೆಯಲ್ಲಿ ಜನರು ನಗರಗಳಿಂದ ತಮ್ಮ ಹುಟ್ಟೂರಿನತ್ತ ವಾಪಸಾಗಿದ್ದರು. ಕೆಲಸದ ನಿಮಿತ್ತ ಪರ ರಾಜ್ಯ, ನಗರ ಪ್ರದೇಶಗಳಲ್ಲಿ ಬೀಡುಬಿಟ್ಟಿದ್ದವರು ತಾಯ್ನಾಡಿಗೆ ಹರಸಾಹಸಪಟ್ಟು ಮರಳಿದ್ದರು. ಇವರೆಲ್ಲರಿಗೂ ಕೆಲಸ ಕಲ್ಪಿಸಿಕೊಡುವುದು ಸರಕಾರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಬಲುದೊಡ್ಡ ಸವಾಲಿನ ಕಾರ್ಯವಾಗಿತ್ತು. ಆದರೆ ಸೋಂಕು ವ್ಯಾಪಿಸಲಾರಂಭಿಸುತ್ತಿದ್ದಂತೆಯೇ ಮಳೆಗಾಲ ಆರಂಭಗೊಂಡಿದ್ದರಿಂದ ಗ್ರಾಮೀಣ ಪ್ರದೇಶಗಳ ಜನರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಸರಕಾರದ ಮೇಲಿನ ಹೊರೆಯನ್ನು ಕಡಿಮೆ ಮಾಡಿದ್ದರು. ಇದೀಗ ಮತ್ತೆ ಬೇಸಗೆ ಬಂದಿದೆ. ಉತ್ತರ ಕರ್ನಾಟಕದ ಹಲವಾರು ಹಳ್ಳಿಗಳಲ್ಲಿ ಈಗಾಗಲೇ ನೀರಿನ ಅಭಾವ ಕಾಣಿಸಿಕೊಳ್ಳಲಾರಂಭಿಸಿದೆ. ಜನರು ಕೆಲಸವಿಲ್ಲದೆ ಜೀವನ ಸಾಗಿಸಲು ಅಲೆದಾಡುವ ಪರಿಸ್ಥಿತಿ ನಿರ್ಮಾ ಣಗೊಂಡಿದೆ. ಇದರಿಂದ ಬಚಾವಾಗಲು ಅವರು ನಗರಗಳತ್ತ ಗುಳೆ ಹೊರಡಲು ಅನುವಾಗಿದ್ದಾರೆ. ಮತ್ತೂಂದೆಡೆಯಿಂದ ಕೊರೊನಾ ಸಾಂಕ್ರಾ ಮಿಕದ ಭೀತಿ ಇನ್ನೂ ದೂರವಾಗಿಲ್ಲ. ಇಂತಹ ಕಾಲಘಟ್ಟದಲ್ಲಿ ಹಳ್ಳಿಗರು ನಗರಗಳಿಗೆ ವಲಸೆ ಹೋಗಿ ಮತ್ತೆ ಪರಿಸ್ಥಿತಿ ಬಿಗಡಾಯಿಸುವ ಆತಂಕವೂ ಇದೆ. ಈ ಎಲ್ಲ ಕಾರಣಗಳಿಂದಾಗಿ ಈ ಯೋಜನೆ ಸಮುಚಿತವಾದುದೇ.

ಸರಕಾರದ ಇತರ ಯೋಜನೆ, ಕಾರ್ಯಕ್ರಮಗಳಂತೆ ಈ ಅಭಿಯಾನವೂ ಅನುಷ್ಠಾನದ ಹಂತದಲ್ಲಿ ಎಡವದಂತೆ ಎಚ್ಚರಿಕೆ ವಹಿಸಬೇಕಾದ ಜವಾಬ್ದಾರಿ ಆಯಾಯ ಜಿಲ್ಲಾಡಳಿತ ಮತ್ತು ಸ್ಥಳೀಯ ಜನಪ್ರತಿನಿಧಿಗಳದ್ದಾಗಿದೆ. ಅಲ್ಲದೆ ಅಭಿಯಾನದ ಉದ್ದೇಶ ಈಡೇರಲು ಜನರ ಸಹಕಾರ ಅತ್ಯಗತ್ಯವೂ ಕೂಡ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.