ಸಂತ್ರಸ್ತ ಮಕ್ಕಳ ರಕ್ಷಣೆಗೆ ಹೈಕೋರ್ಟ್‌ ಹಲವು ನಿರ್ದೇಶನ


Team Udayavani, Mar 6, 2022, 1:18 PM IST

ಸಂತ್ರಸ್ತ ಮಕ್ಕಳ ರಕ್ಷಣೆಗೆ ಹೈಕೋರ್ಟ್‌ ಹಲವು ನಿರ್ದೇಶನ

ಬೆಂಗಳೂರು: ಅತ್ಯಾಚಾರ, ಲೈಂಗಿಕ ಶೋಷಣೆಗೆ ತುತ್ತಾಗುವ ಸಂತ್ರಸ್ತ ಮಕ್ಕಳ ರಕ್ಷಣೆ ದೃಷ್ಟಿಯಿಂದ ಹಲವು ನಿರ್ದೇಶನಗಳನ್ನು ನೀಡಿರುವ ಹೈಕೋರ್ಟ್‌, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2012 (ಪೋಕ್ಸೋ) ಪ್ರಕರಣಗಳಲ್ಲಿ ಆರೋಪಿಗಳು ಸಲ್ಲಿಸುವ ಜಾಮೀನು ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಮೊದಲು ಕಡ್ಡಾಯವಾಗಿ ಸಂತ್ರಸ್ತರ ಕುಟುಂಬಕ್ಕೆ ನೋಟಿಸ್‌ ಜಾರಿಗೊಳಿಸಬೇಕು ಎಂದು ಆದೇಶ ನೀಡಿದೆ.

ಲೈಗಿಂಕ ದೌರ್ಜನ್ಯದಿಂದ ಸಂತ್ರಸ್ತ ಪೋಷಕರಾದ ಬೆಂಗಳೂರಿನ ಬಿಬಿ ಆಯೇಷಾ ಖಾನಂ, ದಿವ್ಯಾ ಕ್ರಿಸ್ಟೈನ್‌ ಹಾಗೂ ಪೆಂಚಿಲಮ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃ ತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೋ) ಅತ್ಯಂತ ಹೀನ ಮತ್ತು ಗಂಭೀರ ಸ್ವರೂಪದ ಅಪರಾಧವಾಗಿದೆ. ಕ್ಷುಲ್ಲಕ ವ್ಯಕ್ತಿಗಳು ಮಾತ್ರ ಇಂತಹ ಅಪರಾಧ ಮಾಡುತ್ತಾರೆ.

ಸಂವಿಧಾನದ ಕಲಂ 21ರ ಪ್ರಕಾರ ಆರೋಪಿಗೆ ಮಾತ್ರವಲ್ಲ ಸಂತ್ರಸ್ತರು ಮತ್ತು ಅವರ ಕುಟುಂಬಕ್ಕೂ ಜೀವಿಸುವ ಹಕ್ಕಿದೆ. ಸಮಾಜದಲ್ಲಿ ಘಟಿಸುವ ಇಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳಲ್ಲಿ ಸಂತ್ರಸ್ತರು ಮತ್ತು ಅವರ ಕುಟಂಬದವರ ಮಾತಿಗೆ ಮಾನ್ಯತೆ ನೀಡಬೇಕಾಗಿದೆ”ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ, ಇಂತಹ ಪ್ರಕರಣಗಳಲ್ಲಿ ಆರೋಪ ಸಾಬೀತುಪಡಿಸುವುದು ಸರ್ಕಾರದ ಹೊಣೆಗಾರಿಕೆ ಯಾಗಿದೆ. ಆದರೆ, ಅಭಿಯೋಜನಾ ವ್ಯವಸ್ಥೆ ಕಾರ್ಯದೊತ್ತಡಕ್ಕೆ ಸಿಲುಕಿದೆ. ಹೀಗಾಗಿ, ಹಲವು ಬಾರಿ ಅಭಿಯೋಜಕರ ನೇಮಕ ವಿಳಂಬವಾಗಲಿದೆ.

ಇದನ್ನೂ ಓದಿ :ಪಾಕ್ ವಿರುದ್ಧ ಭರ್ಜರಿ ಜಯ; ಮಿಥಾಲಿ ರಾಜ್‌ ಪಡೆಯ ವಿಶ್ವಕಪ್ ವಿಜಯಯಾತ್ರೆ ಆರಂಭ

ಸಂತ್ರಸ್ತೆ ಅಥವಾ ದೂರುದಾರರು ಅಭಿಯೋಜಕರಿಗೆ ಪರಿಣಾಮಕಾರಿಯಾಗಿ ಸಹಾಯ ನೀಡಬೇಕಾಗುತ್ತದೆ. ಸಂತ್ರಸ್ತರಿಗೆ ಆರೋಪಿಗಳ ಜಾಮೀನು ಅರ್ಜಿಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಹಾಗಾಗಿ ವಿಶೇಷ ನ್ಯಾಯಾಲಯಗಳು ಇಂತಹ ಪ್ರಕರಣಗಳಲ್ಲಿ ಸಂತ್ರಸ್ತರು ಕುಟುಂಬದವರು ಅಥವಾ ಪೋಷಕರು ಅಥವಾ ವಕೀಲರಿಗೆ ಮಾಹಿತಿಯನ್ನು ನೀಡುವುದು ಕಡ್ಡಾಯ ಎಂದು ನ್ಯಾಯಪೀಠ ಹೇಳಿದೆ.

ಈ ಆದೇಶದ ಪ್ರತಿಯನ್ನು ಎಲ್ಲ ನ್ಯಾಯಾಲಯಗಳಿಗೆ ತಲುಪಿಸುವಂತೆ ಮತ್ತು ನ್ಯಾಯಾಂಗ ಅಕಾಡೆಮಿಗೆ ಕಳುಹಿಸಿ ಅಲ್ಲಿ ತರಬೇತಿಯಲ್ಲಿ ಸೇರಿಸಿಕೊಳ್ಳುವಂತೆ ನ್ಯಾಯಾಲಯ ಆದೇಶ
ನೀಡಿದೆ. ಜೊತೆಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಈ ಆದೇಶದ ಪ್ರತಿಯನ್ನು ಕಳುಹಿಸಬೇಕು, ಅವರು ಎಲ್ಲ ಪೊಲೀಸ್‌ ಠಾಣೆಗಳಿಗೂ ಆ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.