ಆರ್ಲಪದವು – ಕೇರಳ ಅಂತರ್‌ ರಾಜ್ಯ ರಸ್ತೆ ತೆರವು ಕಾರ್ಯಕ್ಕೆ ಇನ್ನೂ ಕೂಡಿ ಬಂದಿಲ್ಲ ಮುಹೂರ್ತ?

ಗಡಿಭಾಗದ ಜನರಿಗೆ ಆಗುವ ಅನ್ಯಾಯಕ್ಕೆ ಯಾರು ಹೊಣೆ

Team Udayavani, Sep 23, 2020, 6:17 PM IST

ಆರ್ಲಪದವು – ಕೇರಳ ಅಂತರ್‌ ರಾಜ್ಯ ರಸ್ತೆ ತೆರವು ಕಾರ್ಯಕ್ಕೆ ಇನ್ನೂ ಕೂಡಿ ಬಂದಿಲ್ಲ ಮುಹೂರ್ತ?

ಪಾಣಾಜೆ: ಕೋವಿಡ್‌ 19 ಬಂದ ಮೇಲೆ ಸರಕಾರ ಅಂತರ್‌ ರಾಜ್ಯ ರಸ್ತೆಗಳನ್ನು ಬಂದ್‌ ಮಾಡುವಂತೆ ಆದೇಶಿಸಿತ್ತು.ಆದೇಶದಂತೆ ಅಂತರ್‌ ರಾಜ್ಯವನ್ನು ಸಂಪರ್ಕಿಸುವ ರಸ್ತೆಗಳನ್ನು ಸ್ಥಳೀಯ ಪಂಚಾಯತ್‌ ಪೊಲೀಸ್‌,ಅರಣ್ಯ ಇಲಾಖೆಗಳ ಜಂಟಿ ನೇತೃತ್ವದಲ್ಲಿ ಬಂದ್‌ ಮಾಡಲಾಗಿತ್ತು.ಇದೀಗ ಅಂತರ್‌ ರಾಜ್ಯಗಳ ಸಂಚಾರಕ್ಕೆ ಮುಕ್ತ ಅವಕಾಶಗಳು ಸರಕಾರ ನೀಡಿದೆ.ಆದರೆ ಪಾಣಾಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಆರ್ಲಪದವು-ಕಡಂದೇಲು-ಗಿಳಿಯಾಲು-ಜಾಂಬ್ರಿ ಮೂಲಕ ಕೇರಳ ಸಂಪರ್ಕಿಸುವ ರಸ್ತೆಯ ತೆರವು ಕಾರ್ಯಕ್ಕೆ ಮುಹೂರ್ತ ಫಿಕ್ಸ್‌ ಆಗಿಲ್ಲ.

ಕೋವಿಡ್‌ 19 ನ ಆರಂಭದಲ್ಲಿ ಜಿಲ್ಲಾಡಳಿತ ಮತ್ತು ಸರಕಾರದ ಆದೇಶದಂತೆ ಸ್ಥಳೀಯ ಪಂಚಾಯತ್‌ ಅಧ್ಯಕ್ಷ ನಾರಾಯಣ ಪೂಜಾರಿ ನೇತೃತ್ವದಲ್ಲಿ ಪೋಲೀಸರ ಮತ್ತು ಅರಣ್ಯ ಇಲಾಖೆಯ ಸಹಕಾರದಿಂದ ರಸ್ತೆಯನ್ನು ಬಂದ್‌ ಮಾಡಲಾಗಿತ್ತು.ಇದೀಗ ಅಧ್ಯಕ್ಷರ ಕಾರ್ಯವಧಿ ಮುಗಿದಿರುವುದರಿಂದ ರಸ್ತೆಯನ್ನು ತೆರವುಗೊಳಿಸುವುವವರಾರು? ಎಂಬ ಪ್ರಶ್ನೆ ಉದ್ಬವಿಸಿದೆ.

ಈ ರಸ್ತೆ ಶೋಚನೀಯ ಸ್ಥಿತಿಯಲ್ಲಿದ್ದರೂ ಗಡಿನಾಡ ಜನರು ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗಾಗಿ ಬಂದು ಹೋಗುವ ರಸ್ತೆಯಾಗಿದೆ.ಆರ್ಲಪದವುವಿನಿಂದ ಕಡಂದೇಲು,ಗಿಳಿಯಾಲು ಮೂಲಕ ಐತಿಹಾಸಿಕ ಜಾಂಬ್ರಿ ಗುಹೆಯನ್ನು ಸಂಪರ್ಕಿಸುವ ರಸ್ತೆಯಾಗಿದೆ.ಇಲ್ಲಿಂದ ಮುಂದೆ ಕೇರಳ ರಾಜ್ಯದ ಕಿನ್ನಿಂಗಾರು ಮೂಲಕ ಮುಳ್ಳೇರಿಯವನ್ನು ಸಂಪರ್ಕಿಸುವ ಹತ್ತಿರದ ಅಂತರ್‌ ರಾಜ್ಯ ರಸ್ತೆಯಾಗಿದೆ.

ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಜವಾಬ್ದಾರಿ ಮರೆತ ಸ್ಥಳೀಯಾಡಳಿತ ?
ಈ ರಸ್ತೆಯ ಎರಡು ಕಡೆ ರಸ್ತೆ ಅಡ್ಡವಾಗಿ ಸುಮಾರು 6ಅಡಿ ಆಳದ ಕಂದಕವನ್ನು ತೆಗೆದು ಅಂತರ್‌ ರಾಜ್ಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.ಎರಡು ಕಡೆ ತೆಗೆದ ಕಂದಕಗಳು ಹಾಗೆಯೇ ಇದೆ.ಈ ರಸ್ತೆಯನ್ನು ಅವಲಂಬಿತವಾಗಿರುವ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ಹಲವು ಜನರು ವಾಹನಗಳಲ್ಲಿ ಪ್ರಯಾಣಿಸಲಾಗದೆ ಪರದಾಡುತ್ತಿದ್ದಾರೆ.ಜಾಂಬ್ರಿ ಪ್ರದೇಶಕ್ಕೆ ಬರುವ ಪ್ರವಾಸಿಗರು ಕಂದಕದ ವರೆಗೆ ಬಂದು ಮುಂದೆ ಚಲಿಸಲಾಗದೇ , ಪ್ರೇಕ್ಷಣೀಯ ಸ್ಥಳವನ್ನು ವೀಕ್ಷಿಸಲಾಗದೇ ಹಿಂದಿರುತ್ತಿದ್ದಾರೆ.ಕಂದಕ ತೆಗೆಯುವಾಗ ಇದ್ದ ಕರ್ತವ್ಯ ಪ್ರಜೆÒ,ಮುತುವರ್ಜಿ ಸ್ಥಳೀಯಾಡಳಿತ ಮತ್ತು ಇಲಾಖೆಗೆ ಯಾಕಿಲ್ಲ ? ಎಂದು ಜನರಾಡಿಕೊಳ್ಳುತ್ತಿದ್ದಾರೆ. ತೆರವು ಕಾರ್ಯ ನಡೆಯದೇ ಗಡಿಭಾಗದ ಜನರಿಗೆ ಅನ್ಯಾಯವಾಗಿದೆ.

ಪಾಣಾಜೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್‌ ಮೂಲಕ ಸಂಪರ್ಕಿಸಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ.ಆಡಳಿತಾಧಿಕಾರಿ ಯಶಸ್‌ ಮಂಜುನಾಥ ರವರು ರಸ್ತೆಯ ಬಗ್ಗೆ ಮಾಹಿತಿ ಪಡೆದುಕೊಂಡು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಎರಡು ದಿನದಲ್ಲಿ ಮುಚ್ಚಿಸುವ ಭರವಸೆ ನೀಡಿದ್ದಾರೆ.

ಆರ್ಲಪದವು-ಕಡಂದೇಲು-ಗಿಳಿಯಾಲು-ಕೇರಳ ಸಂಪರ್ಕಿಸುವ ರಸ್ತೆಯ ಬಗ್ಗೆ ಲೋಕೋಪಯೋಗಿ ಇಲಾಖೆಯವರ ಜೊತೆ ಮಾತನಾಡಿ ತೆರವು ಕಾರ್ಯಕ್ಕೆ ಕ್ರಮಕೈಗೊಳ್ಳಲಾಗುವುದು.
– ನವೀನ್‌ ಭಂಡಾರಿ,ತಾಲೂಕು ಕಾರ್ಯನಿರ್ವಹಣಾಧಿಕಾರಿ,ಪುತ್ತೂರು

ಕಳೆದ ಸುಮಾರು 6 ತಿಂಗಳಿನಿಂದ ರಸ್ತೆಯನ್ನು ಬಂದ್‌ ಮಾಡಲಾಗಿದೆ.ಅಂತರ್‌ ರಾಜ್ಯ ರಸ್ತೆ ಮುಕ್ತ ಅವಕಾಶ ನೀಡಿದರೂ ನಮಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿಲ್ಲ.ಸ್ಥಳೀಯಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಕೂಡಲೇ ಇತ್ತ ಗಮನಹರಿಸಿ ತೆಗೆದ ಕಂದಕಗಳಿಗೆ ಮಣ್ಣು ಮುಚ್ಚಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ.
– ಜಿ.ಮಹಾಬಲೇಶ್ವರ ಭಟ್‌ ಗಿಳಿಯಾಲು,ಪಾಣಾಜೆ

ದಿನನಿತ್ಯದ ವಸ್ತುಗಳಿಗೆ ಆರ್ಲಪದವು ಪೇಟೆಯನ್ನು ಅವಲಂಬಿಸಿದ್ದಾನೆ.ಕರ್ನಾಟಕ ಪ್ರದೇಶದಲ್ಲಿ ಎರಡು ಕಡೆ ರಸ್ತೆಯನ್ನು ಬಂದ್‌ ಮಾಡಿರುವುದರಿಂದ ಆರ್ಲಪದವಿಗೆ ಬರಬೇಕಾದರೆ ಸುತ್ತಿ ಬಳಸಿ ಸಂಚಾರಿಸುತ್ತಿದ್ದಾನೆ.ಇದರಿಂದ ಸಮಯ ಮತ್ತು ಇಂಧನದ ಅಪ ವ್ಯಯವಾಗುತ್ತಿದೆ.ಕೂಡಲೇ ಮಣ್ಣು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು
– ಸಂತೋಷ್‌,ಕಿನ್ನಿಂಗಾರು,ನೆಟ್ಟಣಿಗೆ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.