ಪಿಎಸ್ಐ ಕೇಸ್: ಸಿಐಡಿ ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ
Team Udayavani, Feb 3, 2023, 9:51 PM IST
ಬೆಂಗಳೂರು: ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದಾಖಲಾಗಿದ್ದ ಪ್ರಕರಣದಲ್ಲಿ ಸಿಐಡಿ ಪೊಲೀಸರು 8 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿ ಕುಶಾಲ್ ಕುಮಾರ್, ಮಧ್ಯವರ್ತಿ ದರ್ಶನ್ ಗೌಡ, ಮೈಸೂರಿನ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ (ಆರ್ಪಿಐ) ಮಧು, ನೇಮಕಾತಿ ವಿಭಾಗದ ಸಿಬಂದಿ ಹರ್ಷ, ಶ್ರೀಧರ್, ಶ್ರೀನಿವಾಸ್, ಡಿವೈಎಸ್ಪಿ ಶಾಂತಕುಮಾರ್ ಹಾಗೂ 8ನೇ ಆರೋಪಿಯಾಗಿ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ವಿರುದ್ಧ ಒಟ್ಟು 1,300ಕ್ಕೂ ಅಧಿಕ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಮಾಗಡಿ ಮೂಲದ ಆರೋಪಿ ಕುಶಾಲ್ ಕುಮಾರ್ಗೆ ಮಧ್ಯವರ್ತಿ ದರ್ಶನ್ ಗೌಡ ಹಾಗೂ ಆರ್ಪಿಐ ಮಧು ಸಂಪರ್ಕಕ್ಕೆ ಸಿಕ್ಕಿ ಪಿಎಸ್ಐ ಆಗಬೇಕಾದರೆ 40 ಲಕ್ಷ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಪರೀಕ್ಷೆ ಮುನ್ನವೇ 20 ಲಕ್ಷ ರೂ. ಅನ್ನು ಕೆಂಗೇರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕುಶಾಲ್ ಮಧ್ಯವರ್ತಿಗಳಿಗೆ ಕೊಟ್ಟಿದ್ದ. ಬಳಿಕ ಹಲಸೂರಿನ ಸೈಂಟ್ ಜಾನ್ಸ್ ಗಲ್ಸ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ. ಉತ್ತರಪತ್ರಿಕೆಯಲ್ಲಿ ಕೇವಲ 11 ಪ್ರಶ್ನೆಗಳಿಗೆ ಮಾತ್ರ ಕುಶಾಲ್ ಕುಮಾರ್ ಉತ್ತರ ಬರೆದಿದ್ದರೂ, 99 ಅಂಕ ಗಳಿಸಿದ್ದ. ಪರೀಕ್ಷೆಯಲ್ಲಿ ಬರೆದಿದ್ದ ಡಾಟ್ ಪೆನ್, ಒಎಂಆರ್ ಶೀಟ್ ನಕಲು ಪ್ರತಿ ಹಾಗೂ ಕಾರ್ಬನ್ ಕಾಪಿಯನ್ನು ಪೊಲೀಸ್ ನೇಮಕಾತಿ ವಿಭಾಗದ ಶ್ರೀನಿವಾಸ್ಗೆ ಕೊಟ್ಟಿದ್ದ. ಶ್ರೀಧರ್, ಶ್ರೀನಿವಾಸ್ ಉತ್ತರಪತ್ರಿಕೆ ಇಡಲಾಗಿದ್ದ ಸ್ಟ್ರಾಂಗ್ ರೂಮ್ಗೆ ಪ್ರವೇಶಿಸಿ, ಕುಶಾಲ್ ಬಳಸಿದ್ದ ಡಾಟ್ ಪೆನ್ ಹಾಗೂ ಒಎಂಆರ್ ಶೀಟ್, ಕಾರ್ಬನ್ ಮೂಲಕ ಉತ್ತರ ಬರೆದಿದ್ದರು ಎಂಬ ಅಂಶವನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?