Karnataka: ತ್ರಿವಳಿ ಪರಿಹಾರಕ್ಕಾಗಿ ಸಿದ್ದು , ಡಿಕೆಶಿ ಹೊಸದಿಲ್ಲಿಗೆ
ಇಂದು ನಿಗಮ, ಮಂಡಳಿ ಪಟ್ಟಿ ಅಂತಿಮಕ್ಕೆ ಕಸರತ್ತು- ಲೋಕ ಚುನಾವಣೆ, ಕಾರ್ಯಾಧ್ಯಕ್ಷರ ನೇಮಕ ಚರ್ಚೆ
Team Udayavani, Dec 18, 2023, 12:56 AM IST
ಬೆಂಗಳೂರು: ಲೋಕಸಭೆ ಚುನಾವಣೆ, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ, ನಿಗಮ-ಮಂಡಳಿ ಪಟ್ಟಿಗೆ ಅಂಕಿತ -ಈ ಮೂರು ಕಾರ್ಯ ಸೂ ಚಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸದಿಲ್ಲಿಗೆ ತೆರಳಲಿದ್ದಾರೆ.
ಎರಡು ದಿನಗಳ ದಿಲ್ಲಿ ಪ್ರವಾಸ ಸಂದರ್ಭದಲ್ಲಿ ಈ ಇಬ್ಬರು ನಾಯಕರು ಕಾಂಗ್ರೆಸ್ ವರಿಷ್ಠರ ಜತೆಗೆ ಬಿರುಸಿನ ಸಮಾಲೋಚನೆ ನಡೆಸಲಿದ್ದಾರೆ. ಇನ್ನೂ ಆಗದ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಅಂಕಿತ ಹಾಕಿಸಿಕೊಳ್ಳುವುದು, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಪುನಾರಚನೆ- ಪ್ರಮುಖವಾಗಿ ಈ ಮೂರು ಅಜೆಂಡಾ ಇರಿಸಿಕೊಂಡಿದ್ದಾರೆ. ಅಂದುಕೊಂಡಂತೆ ಎಲ್ಲವೂ ನಡೆ ದರೆ ಪ್ರವಾಸದಿಂದ ಹಿಂದಿರುಗುವಾಗ ಆಕಾಂಕ್ಷಿಗಳು ಮತ್ತು ಕಾರ್ಯಕರ್ತರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.
ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಈ ಹಿಂದೆಯೇ ಸಿದ್ಧಗೊಂಡಿತ್ತು. ಆದರೆ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ. ಪಟ್ಟಿ ಅಂತಿಮಗೊಂಡಿದ್ದರೂ ಯಾರಿಗೆ ಯಾವ ನಿಗಮ ಅಥವಾ ಮಂಡಳಿ ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಅದು ಈ ಪ್ರವಾಸದಲ್ಲಿ ಸ್ಪಷ್ಟವಾಗಲಿದೆ. ಕೆಲವೇ ಕೆಲವು ನಿಗಮ/ ಮಂಡಳಿಗಳಿಗೆ ಇಬ್ಬರೂ ನಾಯಕರ ಬೆಂಬಲಿಗರ ನಡುವೆ ಪೈಪೋಟಿ ಇದೆ. ಕೆಲವರು ಮುನಿಸಿಕೊಂಡಿದ್ದಾರೆ. ಈ ಮುನಿಸು ಬರುವ ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕಿದೆ. ಈ ಅಂಶವನ್ನು ಮನಗಂಡು ಮತ್ತೂಂದು ಸುತ್ತು ಅಳೆದು-ತೂಗುವ ಕಸರತ್ತು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕಸರತ್ತು ಆರಂಭ
ಅಲ್ಲದೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಶತಾಯಗತಾಯ ಈ ಬಾರಿ 20 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಅದಕ್ಕೆ ತಂತ್ರ ರೂಪಿಸು ತ್ತಿದೆ. ಜಾತಿ ಲೆಕ್ಕಾಚಾರ, ಪ್ರದೇಶವಾರು ಪ್ರಭಾವ, ಕೆಲವು ಸಚಿವರು ಕ್ಷೇತ್ರಗಳ ಬಗ್ಗೆ ನೀಡಿರುವ ವರದಿ, ಹಲವರು ಇದುವರೆಗೆ ವರದಿ ಸಲ್ಲಿಸದೆ ಇರುವುದಕ್ಕೆ ಕಾರಣಗಳು ಇತ್ಯಾದಿ ಹಲವು ವಿಚಾರಗಳು ದಿಲ್ಲಿ ಪ್ರವಾಸದ ವೇಳೆ ಚರ್ಚೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಪುನಾರಚನೆ ಕೂಡ ಆಗಬೇಕಿದೆ. ಈಗಿರುವ ಐವರು ಕಾರ್ಯಾಧ್ಯಕ್ಷರಲ್ಲಿ ನಾಲ್ವರಿಗೆ ಎರಡೆರಡು ಹುದ್ದೆಗಳಿದ್ದು, ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಮತ್ತೂಬ್ಬರು ಮೇಲ್ಮನೆಯಲ್ಲಿ ಮುಖ್ಯ ಸಚೇತಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬದಲಾವಣೆ ಮಾಡಬೇಕಿದ್ದು, ಈ ಬಾರಿ ಆರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಪಕ್ಷ ಉದ್ದೇಶಿಸಿದೆ. ಜತೆಗೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೂಡ ಆಗಬೇಕಿದೆ. ಇದು ಹೈಕಮಾಂಡ್ ಜತೆಗಿನ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪಟ್ಟಿಗೆ ಅಂಕಿತ ಪಡೆಯಬೇಕಿದೆ. ಹಾಗಾಗಿ ದಿಲ್ಲಿಗೆ ತೆರಳು ತ್ತಿದ್ದೇವೆ. ನಾಯಕರು ನಮ್ಮನ್ನು ಕರೆದಿಲ್ಲ. ನಾವೇ ಅಲ್ಲಿಗೆ ಹೋಗುತ್ತಿದ್ದೇವೆ.
-ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ