ಜಾಲತಾಣದಲ್ಲಿ ಸಾಹಿತ್ಯಾಸಕ್ತರ ಸೃಷ್ಟಿಸಿದ ಅಕಾಡೆಮಿ

ಕೋವಿಡ್‌ ನಂತರ ಓದುಗರ ಮನೆ ಬಾಗಿಲಿಗೆ ತಲುಪುವತ್ತ ಕರ್ನಾಟಕ ಸಾಹಿತ್ಯ ಅಕಾಡೆಮಿ ಹೆಜ್ಜೆ

Team Udayavani, Aug 21, 2021, 3:08 PM IST

ಜಾಲತಾಣದಲ್ಲಿ ಸಾಹಿತ್ಯಾಸಕ್ತರ ಸೃಷ್ಟಿಸಿದ ಅಕಾಡೆಮಿ

ಬೆಂಗಳೂರು: ಕೋವಿಡ್‌ ಸಂಕಷ್ಟವನ್ನು ಸವಾಲಾಗಿ ಸ್ವೀಕರಿಸಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಇದೀಗ ಫೇಸ್‌ಬುಕ್‌, ಯೂಟ್ಯೂಬ್‌ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಾಹಿತ್ಯಾಸಕ್ತ ರನ್ನು ಹೆಚ್ಚಿನ ಸಂಖ್ಯೆಯಲ್ಲಿ ತಲುಪುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ಕರ್ನಾಟಕ ಸಾಹಿತ್ಯ ಅಕಾಡೆಮಿ ಓದುಗರ ಮನೆ ಬಾಗಿಲಿಗೆ ತಲುಪುವತ್ತ ಹೆಜ್ಜೆಯಿರಿಸಿದೆ.

ಕೋವಿಡ್‌ ಮೊದಲನೆ ಅಲೆ ಬಂದಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಹಲವು ಅಕಾಡೆಮಿಗಳು ದಿಕ್ಕುತೋಚದಂತೆ ಸುಮ್ಮನಾ ಗಿದ್ದವು.ಆದರೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಭಿನ್ನವಾದ ಆಲೋಚನೆಯೊಂದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಕೋವಿಡ್‌ ಸಂಕಷ್ಟದ ನಡುವೆ ಸಾಹಿತ್ಯವಲಯದ ಭಿನ್ನ ಓದುಗರನ್ನು ಸೂಜಿಗಲ್ಲಿನ ರೀತಿಯಲ್ಲಿ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಫೇಸ್‌ಬುಕ್‌ ಪೇಜ್‌ ಮತ್ತು ಯುಟ್ಯೂಬ್‌ಗಳಲ್ಲಿ ಕಾರ್ಯ ಕ್ರಮಗಳನ್ನುಬಿತ್ತರಿಸುವ ಮೂಲಕ ಕೇವಲ ಕರ್ನಾಟಕದಲ್ಲಷ್ಟೇ ಅಲ್ಲ ದೇಶ ಮತ್ತು ವಿದೇಶದಲ್ಲೂ ಕೂಡ ಓದುಗರ ಸಂಖ್ಯೆಯನ್ನು ಮತ್ತಷ್ಟು ವಿಸ್ತರಿಸಿಕೊಂಡಿದೆ. ಹೀಗಾಗಿಯೇ ಈ ಹಿಂದೆ ಬೆರಳೆಣಿಕೆಯಷ್ಟಿದ್ದ ಅಕಾಡೆಮಿಯ ಜಾಲತಾಣ ಸಾಹಿತ್ಯ ವೀಕ್ಷಕರ ಸಂಖ್ಯೆ ಈಗ 2,37,231ಕ್ಕೆ ತಲುಪಿ ಹೊಸ ದಾಖಲೆ ಬರೆದಿದೆ.

ಸಾಹಿತಾಸ್ತಕರನ್ನು ಸೆಳೆಯುವ ಸಲುವಾಗಿಯೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಭಿನ್ನ ಶೈಲಿಯ ಕಾರ್ಯಕ್ರಮಗಳನ್ನು ರೂಪಿಸಿತು. “ಸಂಕಷ್ಟ ಗಳನ್ನುಮೀರೋಣ ಮಾಲಿಕೆ’ಯಡಿಕನಕದಾಸರ”ನಳಚರಿತ್ರೆ, ರಾಘವಾಂಕನ “ಹರಿಶ್ಚಂದ್ರ ಮಹಾಕಾವ್ಯ, ಷಡಕ್ಷರ ದೇವನ “ರಾಜಶೇಖರ ವಿಳಾಸ, ಮುದ್ದಣ ಕವಿಯ “ಶ್ರೀರಾಮಾಶ್ವಮೇಧಂ’ ಸೇರಿದಂತೆ ಮತ್ತಿತರ ಕಾವ್ಯಗಳನ್ನು ತೆಗೆದುಕೊಂಡು ಆ ಕಾವ್ಯಗಳಲ್ಲಿ ಸಂಕಷ್ಟ ಗಳನ್ನು ಯಾವ ರೀತಿಯಲ್ಲಿ ಮೀರಲಾಯಿತು ಎಂಬ ಕುರಿತು ಚರ್ಚಿಸಿ, ಆ ಮೂಲಕ ಓದುಗರನ್ನು ತಲುಪಲಾಯಿತು ಎಂದು ಅಕಾಡೆಮಿ ಅಧಿಕಾರಿಗಳು ಹೇಳುತ್ತಾರೆ. ಇಂತಹ ಭಿನ್ನ ಕಾರ್ಯಕ್ರಮದಿಂದಾಗಿ ಓದುಗರ ಸೆಳೆಯಲು ಕಾರಣವಾಯಿತು ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ:ಕೃಷ್ಣಾ ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ನೂರು ಕೋಟಿ ಬಿಡುಗಡೆ: ಬೊಮ್ಮಾಯಿ

ಅನಿವಾಸಿ ಕನ್ನಡಿಗರಿಂದಲೂ ವೀಕ್ಷಣೆ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯಕ್ರಮಗಳನ್ನು ದಕ್ಷಿಣ ಆಫ್ರಿಕಾ, ವಿಯೆಟ್ನಾಂ, ಲಂಡನ್‌, ಮಲೇಷಿಯಾ, ಸಿಂಗಾಪುರ, ಅಮೆರಿಕಾ ಸೇರಿದಂತೆ ಹಲವು ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕೂಡ ಶೇ.4ರಷ್ಟು ಸಂಖ್ಯೆಯಲ್ಲಿ ವೀಕ್ಷಣೆ ಮಾಡಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್‌ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಹಿಂದೆ ಬೆರಳೆಣಿಕೆಯಲ್ಲಿದ್ದ ಅಕಾಡೆಮಿ ಯುಟ್ಯೂಬ್‌ನ ಹೊಸ ಚಂದಾರರ ಸಂಖ್ಯೆ ಈಗ 6252ಕ್ಕೆ ಏರಿಕೆ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ದ್ವಿಗುಣವಾಗುವ ಸಾಧ್ಯತೆ ಇದೆ. ಜತೆಗೆ ಯೂಟ್ಯೂಬ್‌ ಚಂದಾರರು ಅಲ್ಲದವರು ಕೂಡ 5 ಸಾವಿರಕಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಾದಂಬರಿಗಳ ಬಗ್ಗೆ ಚರ್ಚೆ
ಕೋವಿಡ್‌ ಹಿನ್ನೆಲೆಯಲ್ಲಿ ಭಿನ್ನಕಾರ್ಯಕ್ರಮ ರೂಪಿಸಲಾಯಿತು.ಕುವೆಂಪು ಅವರ “ಮಲೆಗಳಲ್ಲಿ ಮದುಮಗಳು, ತ.ರಾ.ಸು ಅವರ “ದುರ್ಗಾಸ್ತಮಾನ, ಸಾರಾ ಅಬೂಬಕ್ಕರ್‌ ಅವರ “ಚಂದ್ರಗಿರಿಯ ತೀರದಲ್ಲಿ ‘, ಎಸ್‌.ಎಲ್‌.ಬೈರಪ್ಪ ಅವರ “ತಬ್ಬಲಿಯು ನೀನಾನೆ ಮಗನೆ’ ಸೇರಿದಂತೆ ನಾಡಿನ ಹೆಸರಾಂತ ಕಾದಂಬರಿಕಾರರ ಕಾದಂಬರಿಗಳನ್ನು “ಕಾದಂಬರಿ ಮಾಲಿಕೆ’ಯಲ್ಲಿ ಚರ್ಚಿಸಲಾಗಿದೆ. ರಾಜ್ಯದ ಎಲ್ಲಾ ಭಾಗಗಳಿಂದಲೂ ಉಪನ್ಯಾಸಕರು ಇದರಲ್ಲಿ ಭಾಗವಹಿಸಿದ್ದಾರೆ. ಇದುಕೂಡ ಸಾಹಿತ್ಯಾಸಕ್ತರಿಗೆ ಇಷ್ಟವಾಗಿದೆ. ಇದೀಗ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಕಾಡೆಮಿ “ಸ್ವಾತಂತ್ರ್ಯಹೋರಾಟದಲ್ಲಿ ಕರ್ನಾಟಕ’ ಮಾಲಿಕೆಯಡಿ “ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲಾವಾರುಕೊಡುಗೆ’ ಬಗ್ಗೆ ಉಪನ್ಯಾಸ ಕಾರ್ಯಕ್ರಮ ರೂಪಿಸಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್‌ ಎಸ್‌.ಕರಿಯಪ್ಪ ಹೇಳಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಾಹಿತ್ಯಾಸಕ್ತರನ್ನು ಸೆಳೆಯುವ ನಿಟ್ಟಿನಲ್ಲಿ ಅಕಾಡೆಮಿ ನಿರತವಾಗಿದೆ. ಶೇ.10ರಷ್ಟು
18 ರಿಂದ 24 ವರ್ಷದವರು, ಶೇ.25ರಷ್ಟು 25ರಿಂದ 43 ವರ್ಷದವರು, ಶೇ.20ರಷ್ಟು 35 ರಿಂದ 44 ವರ್ಷದವರು ಹಾಗೆಯೇ ಶೇ.30ರಷ್ಟು ಮಂದಿ 55 ವರ್ಷ ಮೇಲ್ಪಟ್ಟವರು ಜಾಲತಾಣದ ಮೂಲಕ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳನ್ನು ವೀಕ್ಷಿಸಿದ್ದಾರೆ.
-ಡಾ.ಬಿ.ವಿ.ವಸಂತಕುಮಾರ್‌, ಅಧ್ಯಕ್ಷರು,
ಕರ್ನಾಟಕ ಸಾಹಿತ್ಯ ಅಕಾಡೆಮಿ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.