ಸೆಪ್ಟೆಂಬರ್ನಲ್ಲಿ ಕರ್ತಾಪುರ ಸಾಹೀಬ್ ಗುರುದ್ವಾರ ಓಪನ್
Team Udayavani, Aug 22, 2021, 11:15 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಕರ್ತಾಪುರದಲ್ಲಿರುವ ದರ್ಬಾರ್ ಸಾಹಿಬ್ ಗುರುದ್ವಾರವನ್ನು ಸೆಪ್ಟೆಂಬರ್ನಲ್ಲಿ ತೆರೆಯಲಿದ್ದು, ಸಂಪೂರ್ಣ ಲಸಿಕೆ ಪಡೆದಿರುವ ಭಾರತೀಯ ಸಿಖ್ ಜನಾಂಗದವರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಪುಣ್ಯ ಸ್ಮರಣೆ ಸೆ.22ರಂದು ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೆ. 20ರಿಂದ 3 ದಿನಗಳ ಕಾಲ ಗುರುದ್ವಾರದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ.
ಇದನ್ನೂ ಓದಿ:ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಏಷ್ಯಾ ಪ್ರವಾಸ ಆರಂಭ
ಸದ್ಯ ಕೊರೊನಾ ಹಿನ್ನೆಲೆ ಭಾರತೀಯರು ವಿಶೇಷ ಅನುಮತಿ ಇದ್ದರೆ ಮಾತ್ರ ಪಾಕ್ಗೆ ಬರಬಹುದೆಂಬ ನಿಯಮವಿದೆ. ಆದರೆ ಇದು ಸಿಖ್ ಧಾರ್ಮಿಕ ಕಾರ್ಯಕ್ರಮವಾದ ಹಿನ್ನೆಲೆಯಲ್ಲಿ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಪಾಕ್ಗೆ ಬರಲು ಅವಕಾಶ ನೀಡಲಾಗುವುದು.
ಭಕ್ತಾದಿಗಗಳು ಆರ್ಟಿಪಿಸಿಆರ್ ವರದಿ ತೋರಿಸುವುದು ಕಡ್ಡಾಯ ಎಂದು ರಾಷ್ಟ್ರೀಯ ಕಮಾಂಡ್ ಮತ್ತು ಕಾರ್ಯಾಚರಣೆ ಕೇಂದ್ರ (ಎನ್ಸಿಒ ಸಿ) ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ