ಸಂಸತ್ನ ರಾಷ್ಟ್ರೀಯ ಯುವ ಸಂಸತ್ ಉತ್ಸವದಲ್ಲಿ ಕಾರವಾರದ ಚೇತನಾ ಭಾಷಣ
ಯುವಜನತೆಗೆ ಸ್ಫೂರ್ತಿ ತುಂಬುವ ಕಾರ್ಯ ಮಾಡಿದ್ದಾಳೆ.
Team Udayavani, Mar 2, 2023, 6:32 PM IST
ಕಾರವಾರ: ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವ ಸಂಸತ್ ಉತ್ಸವದಲ್ಲಿ ಕರ್ನಾಟಕದ ಪ್ರತಿನಿಧಿ ಯಾಗಿ ಕಾರವಾರದ ಹುಡುಗಿ ಚೇತನಾ ಕೊಲ್ವೇಕರ್ ಅರ್ಥಪೂರ್ಣ ಭಾಷಣ ಮಾಡಿದ್ದಾಳೆ.
ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಆಯೋಜನೆಯ ನಾಲ್ಕನೇ ಆವೃತ್ತಿಯ ರಾಷ್ಟ್ರೀಯ ಯುವ ಸಂಸತ್ ಉತ್ಸವ ನವದೆಹಲಿಯ ಸಂಸತ್ ಭವನದಲ್ಲಿ ನಡೆಯುತ್ತಿದ್ದು, ಪ್ರತಿ ರಾಜ್ಯಗಳಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಮೂರು ಸ್ಥಾನ ಪಡೆದ ಸ್ಪರ್ಧಿಗಳು ಭಾಗವಹಿಸಿದ್ದಾರೆ. ಕರ್ನಾಟಕದಿಂದಲೂ ಮೂವರು ಭಾಗವಹಿಸಿದ್ದು, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕಾರವಾರದ ಚೇತನಾ ಕೊಲ್ವೇಕರ್ ಸಂಸತ್ನಲ್ಲಿ ಭಾಷಣ ಮಾಡಿ ಮಿಂಚಿದ್ದಾರೆ.
ಚೇತನಾ ಕಾರವಾರದ ಕಲಾ ಮತ್ತು ವಿಜ್ಞಾನ ಕಾಲೇಜಿನ ಕಲಾ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾಳೆ. ಈ ಹಿಂದೆ ಕೂಡ ಯುವ ಸಂಸತ್ ಉತ್ಸವದಲ್ಲಿ ಸಭಿಕಳಾಗಿ ಸಂಸತ್ ಭವನದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದ ಈಕೆ, ಈ ಬಾರಿ ತಾನೇ ಭಾಷಣ ನೀಡಲು ಅವಕಾಶ ಪಡೆಯುವ ಮೂಲಕ ಯುವಜನತೆಗೆ ಸ್ಫೂರ್ತಿ ತುಂಬುವ ಕಾರ್ಯ ಮಾಡಿದ್ದಾಳೆ.
ಈ ಯುವ ಸಂಸತ್ ಉತ್ಸವದಲ್ಲಿ ಹಿಂದಿ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಮಾತ್ರ ಮಾತನಾಡಲು ಅವಕಾಶವಿದೆ. ಆದರೆ ಚೇತನಾ ಮಾತೃಭಾಷೆ ಕೊಂಕಣಿಯಲ್ಲೇ ಭಾಷಣ ಪ್ರಾರಂಭಿಸಿ ಮೆಚ್ಚುಗೆಗಳಿಸಿದ್ದಾಳೆ. “ಕರ್ನಾಟಕದ ಕಾಶ್ಮೀರ ಕಾರವಾರದ ಹುಡುಗಿಯಿಂದ ಎಲ್ಲರಿಗೂ ಬೆಳಗಿನ ವಂದನೆಗಳು’ ಎಂದು ಕೊಂಕಣಿಯಲ್ಲಿ ಪ್ರಜಾಪ್ರಭುತ್ವ ಮತ್ತು ಸರ್ಕಾರದಲ್ಲಿ ಯುವಜನತೆಯ ಪಾತ್ರದ ಕುರಿತು ಭಾಷಣ ಪ್ರಾರಂಭಿಸಿದ್ದಾರೆ. ಯುವಜನತೆಯೇ ದೇಶದ ಭವಿಷ್ಯ. ಮುಂದಿನ ಪೀಳಿಗೆಯ ಅಂತಿಮ ಭರವಸೆ.ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎಂಬಂತೆ ಯುವಕರಿಲ್ಲದೆ ದೇಶವಿಲ್ಲ ಎನ್ನುವುದನ್ನ ಚೇತನಾ ಹೇಳಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ