Beach: ಕಾರವಾರದಿಂದ ಕಾಸರಗೋಡು ಬೀಚ್‌ ಅಭಿವೃದ್ಧಿಗೆ ಯೋಜನೆ: ಎಚ್‌.ಕೆ.ಪಾಟೀಲ್‌


Team Udayavani, Jan 15, 2024, 12:31 AM IST

h k patil

ಕುಂದಾಪುರ: ಸರಕಾರವು ಖಾಸಗಿ ಸಹಭಾಗಿತ್ವದಲ್ಲಿ ಕಾರವಾರದಿಂದ ಕಾಸರಗೋಡಿನವರೆಗಿನ 320 ಕಿ.ಮೀ. ಸಮುದ್ರ ತೀರ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಪರಿಣತರ ಜತೆ ಸಭೆ ನಡೆಸಿ ಏಪ್ರಿಲ್‌ ವೇಳೆಗೆ ಮೊದಲ ಹಂತದ ಯೋಜನೆ ಅನುಷ್ಠಾನ ಮಾಡಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು.

ಭಾನುವಾರ ಮಾಧ್ಯಮದ ಜತೆ ಮಾತನಾಡಿ, ಈ ಭಾಗದ ಸಮುದ್ರತೀರ, ಸೀವಾಕ್‌, ಬೀಚ್‌ ಪ್ರವಾಸೋದ್ಯಮ, ಸರ್ಫಿಂಗ್‌ ಮೊದಲಾದ ಸಮುದ್ರ ಸಾಹಸ ಕ್ರೀಡೆಗಳು, ಕಯಾಕಿಂಗ್‌ ಮೊದಲಾದ ಹಿನ್ನೀರಿನ ಕ್ರೀಡೆಗಳನ್ನು ಉತ್ತೇಜಿಸಬೇಕಿದೆ ಎಂದರು.

ಕರಾವಳಿಯ ಬೀಚ್‌ಗಳು ರಾಜ್ಯದ ಪ್ರವಾಸೋದ್ಯಮದ ಆಸ್ತಿಗಳು. ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿರುವ ಶ್ರದ್ಧಾ ಕೇಂದ್ರಗಳು, ಧಾರ್ಮಿಕ ಕೇಂದ್ರಗಳು ಬಯಲುಸೀಮೆಯ ಜನ ಈ ಭಾಗಕ್ಕೆ ಬರುವಂತೆ ಮಾಡಿ ಧಾರ್ಮಿಕ ಶ್ರದ್ಧೆ ಹೆಚ್ಚಿಸುವ ಜತೆಗೆ ಪ್ರವಾಸೋದ್ಯಮವನ್ನು ಬೆಳೆಸಿವೆ. ಇಲ್ಲಿನ ಸಮುದ್ರತೀರಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಅದಕ್ಕಾಗಿ ಖಾಸಗಿ ಸಹಭಾಗಿತ್ವದ ಯೋಜನೆ ರೂಪಿಸಲಾಗುವುದು. 4 ಹಂತಗಳಲ್ಲಿ ಅನುಷ್ಠಾನ ಮಾಡಲಾಗುವುದು ಎಂದರು.

ಬೀಚ್‌ ಸುದರೀಕರಣಕ್ಕೆ ಸಹಕಾರ
ಕರಾವಳಿಯ ಸಮುದ್ರ ಸೌಂದರ್ಯ ಬೇರೆಲ್ಲೂ ಇಲ್ಲ. ಅಷ್ಟು ದೊಡ್ಡ ಸೌಕರ್ಯ ಇಲ್ಲಿದೆ. ರಾಜ್ಯ ಸರಕಾರ ಇಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು, ಬೀಚ್‌ ಸುಂದರೀಕರಣಕ್ಕೆ ಸಹಕಾರ ನೀಡಲಿದೆ ಎಂದರು.

ಕುಂದಾಪುರ, ಬೀಜಾಡಿಯಲ್ಲಿ ಸಿಲ್ವರ್‌ ಸ್ಯಾಂಡ್‌ ವಿಶಿಷ್ಟವಾಗಿದೆ. ಇದರ ಬಗ್ಗೆ ವಿಶೇಷ ಆಸಕ್ತಿಯ ಕ್ರಮಗಳಿವೆಯೇ ಎಂದು ಕೇಳಿದಾಗ, ಈಗಷ್ಟೇ ನಾವು ಯೋಜನೆ ರೂಪಿಸಲು ಹೊರಟಿದ್ದೇವೆ. ನಮ್ಮ ಸಲಹಾ ತಂಡ ನೀಡುವ ಸಲಹೆಗಳ ಆಧಾರದಲ್ಲಿ ಯೋಜನೆಗಳನ್ನು ಮಾಡುತ್ತೇವೆ ಎಂದರು.

ಸ್ವಚ್ಛ ಕಡಲತೀರದಲ್ಲಿ ಕಡಲಾಮೆಗಳು ಮೊಟ್ಟೆ ಇಡುತ್ತಿದ್ದು ಒಡಿಶಾದ ಬಳಿಕ ಕರ್ನಾಟಕದಲ್ಲೇ ಕಾಣಿಸಿಕೊಳ್ಳುತ್ತಿವೆ. ಗಾಯಗೊಂಡ ಕಡಲಾಮೆಗಳ ಚಿಕಿತ್ಸೆಗೆ ಕೇಂದ್ರ ಬೇಕೆಂದು ಗಮನ ಸೆಳೆದಾಗ, ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಅಗತ್ಯವಿದ್ದರೆ ಪಸುಸಂಗೋಪನ ಇಲಾಖೆ ಜತೆ ಮಾತನಾಡುತ್ತೇನೆ ಎಂದರು.
ಬೀಚ್‌ ಸ್ವತ್ಛತಾ ಅಭಿಯಾನ

ಹಾಜಿ ಕೆ. ಮೊಹಿದೀನ್‌ ಬ್ಯಾರಿ ಎಜುಕೇಶನ್‌ ಟ್ರಸ್ಟ್‌ ಮೆನೆಜಿಂಗ್‌ ಟ್ರಸ್ಟಿ ಸಯ್ಯದ್‌ ಮೊಹಮದ್‌ ಬ್ಯಾರಿ ಮಾತನಾಡಿ, ಬ್ಯಾರೀಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಳೆದ 28 ತಿಂಗಳಿನಿಂದ ಸ್ವತ್ಛ ಕೋಡಿ ಹಸುರು ಕೋಡಿ ಎಂಬ ಬೀಚ್‌ ಸ್ವತ್ಛತಾ ಅಭಿಯಾನ ನಡೆಸಲಾಗುತ್ತಿದೆ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳು ಇರುವ ಬ್ಲೂ ಬೀಚ್‌ ಇಲ್ಲಿದೆ. ಪ್ರವಾಸೋದ್ಯಮ ಮಾತ್ರವಲ್ಲ, ಶೈಕ್ಷಣಿಕ, ವಾಣಿಜ್ಯ, ಆರೋಗ್ಯ ಕ್ಲಸ್ಟರ್‌ಗಳಾಗಿಸಿ ಅಭಿವೃದ್ಧಿ ಮಾಡಿದರೆ ಈಗಿನ ಜನಾಂಗಕ್ಕಷ್ಟೇ ಅಲ್ಲ ಒಂದು ಪೀಳಿಗೆಗೆ ಕೊಡುಗೆ ನೀಡಿದಂತಾಗುತ್ತದೆ ಎಂದರು.
ವಿಧಾನಪರಿಷತ್‌ ಸಭಾಪತಿ ಯು.ಟಿ. ಖಾದರ್‌, ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.