ಕಾಸರಗೋಡು ಅಪರಾಧ ಸುದ್ದಿಗಳು


Team Udayavani, May 17, 2022, 5:02 PM IST

ಕಾಸರಗೋಡು ಅಪರಾಧ ಸುದ್ದಿಗಳು

ನಿಲ್ಲಿಸಿದ್ದ ಬಸ್‌ನಿಂದ ಕಂಡೆಕ್ಟರ್‌ ನಾಪತ್ತೆ
ಕಾಸರಗೋಡು: ಪ್ರಯಾಣಿಕರನ್ನು ಹತ್ತಿಸಲೆಂದು ನಿಲ್ಲಿಸಿದ್ದ ಖಾಸಗಿ ಬಸ್‌ವೊಂದರ ಕಂಡೆಕ್ಟರ್‌ ನಾಪತ್ತೆಯಾದ ಘಟನೆ ನಡೆದಿದೆ.

ಬಂದಡ್ಕ-ಕಾಂಞಂಗಾಡ್‌ ರೂಟ್‌ನಲ್ಲಿ ಸಂಚರಿಸುತ್ತಿದ್ದ ಶ್ರೀಯ ಬಸ್‌ನ ಕಂಡೆಕ್ಟರ್‌ ಕುತ್ತಿಕೋಲ್‌ ಕರಿವೇಡಗಂ ನಿವಾಸಿ ಗಣೇಶನ್‌(37) ನಾಪತ್ತೆಯಾಗಿದ್ದಾರೆ.

ಮೇ 16 ರಂದು ಮಧ್ಯಾಹ್ನ ಕಾಂಞಂಗಾಡ್‌ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಲಾಗಿತ್ತು. ಈ ವೇಳೆ ಚಾಲಕನೊಂದಿಗೆ ಈಗ ಬರುವುದಾಗಿ ಹೇಳಿ ಹೋದ ಗಣೇಶನ್‌ ವಾಪಸಾಗಿಲ್ಲ. ಬಸ್‌ ಹೊರಡಲು ಸಿದ್ಧವಾದಾಗ ಕಂಡೆಕ್ಟರ್‌ ಇಲ್ಲವೆಂಬ ವಿಷಯ ತಿಳಿಯಿತು. ಕೂಡಲೇ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗಲಿಲ್ಲ.

ಮೊಬೈಲ್‌ ಫೋನ್‌ಗೆ ಕರೆ ಮಾಡಿದಾಗ ಅದು ಸ್ವಿಚ್‌ ಆಫ್‌ ಆಗಿತ್ತು. ಇದೇ ಸಂದರ್ಭದಲ್ಲಿ ಕಂಟೆಕ್ಟರ್‌ನ ಬ್ಯಾಗ್‌ ಮತ್ತು ಟಿಕೆಟ್‌ ಮೆಶಿನ್‌ ಬಸ್‌ನೊಳಗೆ ಪತ್ತೆಯಾಗಿದೆ. ಬೇರೊಬ್ಬ ಕಂಡೆಕ್ಟರ್‌ನ ನೆರವಿನಿಂದ ಬಸ್‌ ಪ್ರಯಾಣ ಮುಂದುವರಿಸಲಾಯಿತು. ಆದರೆ ಕಂಡೆಕ್ಟರ್‌ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಬಸ್‌ ಚಾಲಕ ಗೋಪಾಲಕೃಷ್ಣನ್‌ ಹೊಸದುರ್ಗ ಪೊಲೀಸರಿಗೆ ದೂರು ನೀಡಿದ್ದಾರೆ.

ಮದ್ಯ ಸಹಿತ ಬಂಧನ
ಬದಿಯಡ್ಕ: ವ್ಯಾನ್‌ನಲ್ಲಿ ಸಾಗಿಸುತ್ತಿದ್ದ 17.28 ಲೀಟರ್‌ ವಿದೇಶಿ ಮದ್ಯವನ್ನು ಪಯರ್‌ಪಳ್ಳದಿಂದ ವಶಪಡಿಸಿಕೊಂಡ ಬದಿಯಡ್ಕ ರೇಂಜ್‌ ಅಬಕಾರಿ ದಳ ಈ ಸಂಬಂಧ ಪಯೋಲಂ ನಿವಾಸಿ ಸುರೇಂದ್ರನ್‌ ಟಿ. (40) ಅನ್ನು ಬಂಧಿಸಿದೆ. ಮದ್ಯ ಸಾಗಾಟದ ಕುರಿತಾಗಿ ರಹಸ್ಯ ಮಾಹಿತಿಯಂತೆ ಅಬಕಾರಿ ದಳ ಕಾರ್ಯಾಚರಣೆ ನಡೆಸಿತ್ತು.

ತೋಡಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು
ಕಾಸರಗೋಡು: ಸ್ನೇಹಿತರೊಂದಿಗೆ ತೋಡಿನಲ್ಲಿ ಸ್ನಾನ ಮಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಸಾವಿಗೀಡಾದ ಘಟನೆ ನಡೆದಿದೆ.

ಮಾವಿಲ ಕಡಪ್ಪುರ ವೆಳುತ್ತ ಪೊಯ್ಯೆಲ್‌ ನಿವಾಸಿ ಕೆ.ಸಿ.ಶುಕೂರ್‌ ಅವರ ಪುತ್ರ ವಿ.ಬಿಲಾಲ್‌(17) ಸಾವಿಗೀಡಾದ ವಿದ್ಯಾರ್ಥಿ. ಕಯ್ಯೂರು ಚೀಮೇನಿ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಪೋತ್ತಕಂಡಂ ಅರುಕರ ತೋಡಿನಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆಯಿತು.

2.50 ಕೋಟಿ ರೂ. ಮೌಲ್ಯದ ಚಿನ್ನ ಸಹಿತ ಐವರ ಬಂಧನ
ಕಾಸರಗೋಡು: ಅಕ್ರಮವಾಗಿ ಸಾಗಿಸುತ್ತಿದ್ದ 2.50 ಕೋಟಿ ರೂ. ಮೌಲ್ಯದ 4.15 ಕಿಲೋ ಚಿನ್ನ ಸಹಿತ ಐವರನ್ನು ಕರಿಪೂರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ದಳ ಬಂಧಿಸಿದೆ.

ಕಾಸರಗೋಡು ನಿವಾಸಿಗಳಾದ ರಂಶಾದ್‌(32), ಮುಹಮ್ಮದ್‌ ಅಜ್ಮಲ್‌ ನಿಯಾಸ್‌(23), ಮುಹಮ್ಮದ್‌ ನಿಶಾದ್‌(24), ಮಲಪ್ಪುರಂ ನಿವಾಸಿ ಸಾಹಿರ್‌(42), ನಿಸಾರ್‌(23)ನನ್ನು ಬಂಧಿಸಲಾಗಿದೆ.

ಕಳವಿಗೆ ಯತ್ನ
ಕಾಸರಗೋಡು: ಎಡನೀರು ಚಾತಪ್ಪಾಡಿ ಸಿಂಧ್ಯಾ ತರವಾಡು ಮನೆಯ ಕ್ಷೇತ್ರದಿಂದ ಕಳವಿಗೆ ಯತ್ನಿಸಿದ ಘಟನೆ ನಡೆದಿದೆ.

ಕ್ಷೇತ್ರದ ಹೊರಗಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಗರ್ಭಗುಡಿಯ ಬಾಗಿಲ ಬೀಗ ಮುರಿದಿದ್ದಾರೆ. ಕ್ಷೇತ್ರದಿಂದ ಕಳವಾದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.