Crime News: ಕಾಸರಗೋಡು ಅಪರಾಧ ಸುದ್ದಿಗಳು


Team Udayavani, May 21, 2024, 9:48 PM IST

Crime News: ಕಾಸರಗೋಡು ಅಪರಾಧ ಸುದ್ದಿಗಳು

ಮನೆಯಿಂದ ಕಳವು : ಬಿಗ್‌ ಟ್ವಿಸ್ಟ್‌
ಕಳವಾದ ಚಿನ್ನ ಮನೆಯಲ್ಲೇ ಪತ್ತೆ
ಕಾಸರಗೋಡು: ಮೊಗ್ರಾಲ್‌ಪುತ್ತೂರು ಪೇಟೆಯ ಮಸೀದಿ ಪರಿಸರದ ಫೈಝಲ್‌ ಮಂಜಿಲ್‌ನ ಇಬ್ರಾಹಿಂ ಅವರ ಮನೆಯಿಂದ ನಡೆದ ಕಳವು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಲಭಿಸಿದೆ.

ಕಳವುಗೈಯ್ಯಲಾಗಿದೆ ಎಂದು ಹೇಳಲಾದ 18.63 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳು ಮನೆಯೊಳಗೇ ಭದ್ರವಾಗಿ ಪತ್ತೆಯಾಗಿದೆ.

ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ಎಲ್ಲಾ ಕಪಾಟುಗಳನ್ನು ಒಡೆದು ಅದರೊಳಗಿದ್ದ ಸಾಮಗ್ರಿಗಳನ್ನೆಲ್ಲವನ್ನೂ ಹೊರಕ್ಕೆ ಎಸೆದು ಚೆಲ್ಲಾಪಿಲ್ಲಿಗೊಳಿಸಿದ್ದರು. ಆ ಬಗ್ಗೆ ನೀಡಲಾದ ದೂರಿನಂತೆ ಕಾಸರಗೋಡು ಪೊಲೀಸರು ಹಾಗು ಬೆರಳ ಗುರುತು ತಜ್ಞರು ಚೆಲ್ಲಾಪಿಲ್ಲಿಗೊಳಿಸಿದ ಸಾಮಗ್ರಿಗಳನ್ನು ಪರಿಶೀಲಿಸಿದಾಗ ಕಪಾಟುಗಳಿಂದ ಹೊರಕ್ಕೆ ಎಸೆಯಲ್ಪಟ್ಟ ಸಾಮಗ್ರಿಗಳ ಅಡಿ ಭಾಗದಲ್ಲಿ ಕಳವಾಗಿದೆ ಎನ್ನಲಾದ ಚಿನ್ನದ ಒಡವೆ ಪತ್ತೆಯಾಯಿತು. ಚಿನ್ನದ ಒಡವೆಗಳು ಪೆಟ್ಟಿಗೆಯಲ್ಲಿರಿಸಲಾಗಿತ್ತು. ಚಿನ್ನದ ಒಡವೆ ಲಭಿಸಿದರೂ, ಮನೆ ಬಾಗಿಲು ಮುರಿದು ಅಕ್ರಮವಾಗಿ ಒಳಪ್ರವೇಶಿಸಿ ಕಳವಿಗೆ ಯತ್ನಿಸಿದ ಪ್ರಕರಣ ತನಿಖೆ ನಡೆಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

ಜ್ವರದಿಂದ ಕೊಲ್ಲಿ ಉದ್ಯೋಗಿ ಸಾವು
ಕಾಸರಗೋಡು: ಜ್ವರದಿಂದ ಬಳಲುತ್ತಿದ್ದ ಕೊಲ್ಲಿ ಉದ್ಯೋಗಿ, ನಾಲ್ಕನೇ ಮೈಲು ನಿವಾಸಿ, ಪಚ್ಚಕ್ಕಾಡಿನಲ್ಲಿ ವಾಸಿಸುವ ಮೊಹಮ್ಮದ್‌ ಶರೀಫ್‌ ಕೆ(57) ಸಾವಿಗೀಡಾದರು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು.

ವಿದೇಶಕ್ಕೆ ಮಾನವ ಕಳ್ಳ ಸಾಗಾಟ : ಎನ್‌ಐಎ ತನಿಖೆ
ಕಾಸರಗೋಡು: ಅವಯವ ದಾನಕ್ಕಾಗಿ ವಿದೇಶಕ್ಕೆ ಮಾನವ ಕಳ್ಳ ಸಾಗಾಟ ನಡೆಯುತ್ತಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಳ್ಳಲಿದೆ. ಸದ್ಯ ನೆಡುಂಬಾಶೆರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇರಳ, ಬೆಂಗಳೂರು, ಹೈದರಾಬಾದ್‌ ಮೊದಲಾದೆಡೆಗಳಿಂದಾಗಿ 20 ರಷ್ಟು ಮಂದಿಯನ್ನು ಅವಯವ ದಾನಕ್ಕಾಗಿ ಮಾನವ ಕಳ್ಳ ಸಾಗಾಟದವರು ಇರಾನ್‌ಗೆ ಸಾಗಿಸಿದ್ದಾಗಿ ಪೊಲೀಸ್‌ ತನಿಖೆಯಲ್ಲಿ ತಿಳಿದು ಬಂದಿದೆ.

ಇರಾನ್‌ನಲ್ಲಿರುವ ಫರಿದಿಖಾನ್‌ನಲ್ಲಿರುವ ಆಸ್ಪತ್ರೆಯೊಂದಕ್ಕೆ ಮಾನವ ಅವಯವಗಳನ್ನು ಸಾಗಿಸುತ್ತಿದ್ದಾರೆ. ಮಾನವ ಕಳ್ಳಸಾಗಾಟ ಜಾಲದ ಪ್ರಧಾನ ಸೂತ್ರಧಾರನೆಂದು ಹೇಳಲಾಗುತ್ತಿರುವ ತೃಶ್ಶೂರು ವಲಪಾಗತ್‌ ನಿವಾಸಿ ಸಾಬೀತ್‌ ನಾಸರ್‌(30)ನನ್ನು ನೆಡುಂಬಾಶೆರಿ ವಿಮಾನ ನಿಲ್ದಾಣದಿಂದ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು, ಮಂಗಳೂರು, ಕೊಚ್ಚಿ, ರಾಂಚಿ, ಬೆಂಗಳೂರು, ಕೊಲ್ಕತ್ತಾ ಮತ್ತು ಜಮ್ಮು ನಿವಾಸಿಗಳಾದ ಹಲವರು ಈ ಜಾಲದ ಕೊಂಡಿಗಳಾಗಿದ್ದಾರೆ.

ಗೃಹ ಸಂದರ್ಶನಕ್ಕಾಗಿ ತಲುಪಿದ ಸಿಪಿಎಂ ನೇತಾರರ ಮೇಲೆ ಬಾಂಬೆಸೆತ : ಮಹಿಳೆಗೆ ಗಾಯ
ಕಾಸರಗೋಡು: ಗೃಹ ಸಂದರ್ಶನಕ್ಕಾಗಿ ತಲುಪಿದ ಸಿಪಿಎಂ ನೇತಾರರ ಮೇಲೆ ಸಿಪಿಎಂ ಕಾರ್ಯಕರ್ತ ಬಾಂಬೆಸೆದ ಘಟನೆ ನಡೆದಿದೆ. ಬಾಂಬೆಸೆತದಿಂದ ನೆರೆಮನೆ ನಿವಾಸಿ ಆಮಿನ ಗಾಯಗೊಂಡಿದ್ದು, ಅವರನ್ನು ಕಾಂಞಂಗಾಡ್‌ನ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಬಲತ್ತರ ಲಾಲೂರು ನಿವಾಸಿ ರತೀಶ್‌ ಯಾನೆ ಮಾಂದಿ ರತೀಶ್‌ ಬಾಂಬೆಸೆದಿರುವುದಾಗಿ ಆರೋಪಿಸಲಾಗಿದೆ. ಮೇ 20 ರಂದು ರಾತ್ರಿ 9 ಗಂಟೆಗೆ ಪಾರಪ್ಪಳ್ಳಿ ಕಣ್ಣೋತ್‌ತಟ್ಟ್ನ ಸಮೀಪದ ಮನೆಗೆ ತಲುಪಿದಾಗ ಈ ಘಟನೆ ನಡೆದಿದೆ. ಅಂಬಲತ್ತರ ಲೋಕಲ್‌ ಕಾರ್ಯದರ್ಶಿ ಅನೂಪ್‌ ಕುಂಬಳ, ಏಳನೇ ಮೈಲು ಲೋಕಲ್‌ ಕಾರ್ಯದರ್ಶಿ ಬಾಬುರಾಜ್‌, ಡಿವೈಎಫ್‌ಐ ವಲಯ ಕಾರ್ಯದರ್ಶಿ ಅರುಣ್‌, ಬಾಲಕೃಷ್ಣನ್‌ ಅವರ ಮೇಲೆ ಬಾಂಬೆಸೆಯಲಾಗಿದೆ. ಬಾಂಬೆಸೆದ ಬಳಿಕ ಆರೋಪಿ ರತೀಶ್‌ ಪರಾರಿಯಾಗಿದ್ದಾನೆ. ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.