ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಕೇರಳ - ಕರ್ನಾಟಕ ಗಡಿ ಬಂದ್‌ ಸಮಸ್ಯೆ

Team Udayavani, May 12, 2020, 10:35 AM IST

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಮಂಗಳೂರು: ಕೋವಿಡ್ ಹರಡಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ-ಕೇರಳ ಗಡಿ ಬಂದ್‌ ಮಾಡಿರುವುದು ಇದೀಗ ಉಭಯ ರಾಜ್ಯಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಗಡಿ ದಾಟಿ ಬರಲಾರದೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ, ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಬರುವ ಸುಮಾರು 10 ಗಡಿಗಳನ್ನು ಬಂದ್‌ ಮಾಡಲಾಗಿತ್ತು. ದ.ಕ.ದಲ್ಲಿ ಪ್ರಕರಣ ವೃದ್ಧಿಸಿ ಕಾಸರಗೋಡಿನಲ್ಲಿ ಇಳಿಕೆಯಾಗುತ್ತಿದ್ದಂತೆ ಕೇರಳ ಸರಕಾರವೂ ಇದೇ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ನಿರ್ಧಾರ ಇದೀಗ ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಮತ್ತು ಕೇರಳದಲ್ಲಿ ಕೆಲಸ ಮಾಡುವ ದಕ್ಷಿಣ ಕನ್ನಡದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಗೈರುಹಾಜರಿಯಿಂದ ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಲಾಕ್‌ಡೌನ್‌ ಪರಿಣಾಮ ಒಂದೂವರೆ ತಿಂಗಳಿನಿಂದ ಬಾಗಿಲು ಹಾಕಿದ್ದ ಕೆಲವು ಕಂಪೆನಿಗಳು ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಬಾಗಿಲು ತೆರೆದು ಕನಿಷ್ಠ ಸಿಬಂದಿ ಮೂಲಕ ಕಾರ್ಯಾರಂಭಿಸಿವೆ. ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಕಾಸರಗೋಡಿನವರನ್ನು ಆಯಾ ಕಂಪೆನಿಗಳು ಕೆಲಸಕ್ಕೆ ಹಾಜರಾಗಬೇಕೆಂದು ತಿಳಿಸಿವೆ. ಅತ್ತ ಕೇರಳದ ಕಂಪೆನಿಗಳೂ ಕೆಲಸಕ್ಕೆ ಬರುವಂತೆ ಸೂಚಿಸಿವೆ. ಆದರೆ ಇನ್ನೂ ಕೂಡ ಗಡಿ ಸಂಚಾರಕ್ಕೆ ಮುಕ್ತವಾಗದ ಕಾರಣ ಉದ್ಯೋಗಿಗಳು ದಾರಿ ಕಾಣದಾಗಿದ್ದಾರೆ.

ಸರಕಾರಕ್ಕೆ ಮನವಿ
ಸಮಸ್ಯೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸಂದೇಶ ಕಳುಹಿಸಿ ಉಭಯ ರಾಜ್ಯಗಳ ಸರಕಾರ, ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.ಜೀವನೋಪಾಯಕ್ಕಾಗಿ ನಿತ್ಯ ಓಡಾಟ ನಡೆಸುವ ಅನಿವಾರ್ಯ ಇರುವವರಿಗೆ ಸ್ವಂತ ವಾಹನದಲ್ಲಿ ದಿನಕ್ಕೆರಡು ಬಾರಿ ಸಂಚರಿಸಲು ಪಾಸ್‌ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ ಗೊಂದಲ
ನೆರೆಯ ಕೇರಳ ಮಾತ್ರವಲ್ಲದೆ, ಇತರ ಹೊರ ರಾಜ್ಯಗಳಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮಂದಿಯೂ ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗುವಂತೆ ಕಂಪೆನಿಗಳಿಂದ ಕರೆ ಬಂದಿದ್ದು, ಕೋವಿಡ್ ತಪಾಸಣೆ ನಡೆಸಬೇಕೊ, ಕೋವಿಡ್ ಇಲ್ಲವೆಂಬ ಪ್ರಮಾಣಪತ್ರ ಕೊಂಡೊಯ್ಯಬೇಕೊ, ಹಾಗೆ ಪ್ರಮಾಣಪತ್ರ ಕೊಂಡೊಯ್ದರೆ ಹೋಂ ಕ್ವಾರಂಟೈನ್‌ನಲ್ಲಿರಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಉದ್ಯೋಗಿಗಳೂ ಲಾಕ್‌ಡೌನ್‌ ಮುಗಿಯುವವರೆಗೆ ಕಾದರೆ ಉದ್ಯೋಗ ಕಳೆದುಕೊಳ್ಳುವ ಭೀತಿಯೂ ಇದೆ.

ಲಾಕ್‌ಡೌನ್‌ ಸಂಪೂರ್ಣ ತೆರವಾಗುವವರೆಗೆ ರಾಜ್ಯದ ಹೊರಗಿನವರು ಬರುವುದಕ್ಕೆ ಅವಕಾಶ ಇರುವುದಿಲ್ಲ. ಉದ್ಯೋಗದಾತ ಸಂಸ್ಥೆಗಳೂ ಕೂಡ ಈ ಸಂಬಂಧ ಗಡಿಬಿಡಿ ಮಾಡಬಾರದು. ಕೋವಿಡ್ ಭೀತಿ ಇರುವಾಗ ನಿಯಮ, ಸಮಯಾವಕಾಶದ ಹೆಸರಿನಲ್ಲಿ ಅಮಾನತು, ಕೆಲಸದಿಂದ ತೆಗೆಯುವ ಸೂಚನೆ ನೀಡಬಾರದು.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.