Kashmir: ಜಲಕುಂಭಕ್ಕೆ ಶೃಂಗೇರಿ ಶ್ರೀ ಪೂಜೆ


Team Udayavani, Dec 26, 2023, 11:58 PM IST

shringeri shree

ಶೃಂಗೇರಿ: ಕಾಶ್ಮೀರದ ತಿತ್ವಾಲ್‌ನ ಶ್ರೀ ಶಾರದಾ ಪೀಠದ ದಕ್ಷಿಣಾ ಸಮಿತಿ ಸದಸ್ಯರು ಸಂಗ್ರಹಿಸಿದ ಅಯೋಧ್ಯೆಯಲ್ಲಿ ಸಮರ್ಪಿಸಲಿರುವ ಕಾಶ್ಮೀರದ ತ್ರಿವೇಣಿ ಸಂಗಮ ತಿತ್ವಾಪಾಣಿಯ ಗಂಗಾ, ಸರಸ್ವತಿ ಹಾಗೂ ಮಧುಮತಿ ನದಿಗಳ ಪವಿತ್ರ ಜಲಕುಂಭಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಪೂಜೆ ಸಲ್ಲಿಸಿದರು.

ಸಮಿತಿ ಸದಸ್ಯರು ಮಂಗಳವಾರ ಬೆಳಗ್ಗೆ ಶ್ರೀ ಶಾರದಾ ಪೀಠದ ಗುರುಭವನದಲ್ಲಿ ಉಭಯ ಜಗದ್ಗುರುಗಳಾದ ಶ್ರೀಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿಗಳ ಆಶೀರ್ವಾದ ಪಡೆದು ಕಾಶ್ಮೀರದ ತ್ರಿವಳಿ ನದಿಯಿಂದ ತಂದ ಜಲದ ಬಗ್ಗೆ ವಿವರಿಸಿದರು.

ಕಾಶ್ಮೀರ ಶ್ರೀಶಾರದಾ ಪೀಠದ ರಕ್ಷಣಾ ಸಮಿತಿಯ ಸದಸ್ಯರಾದ ರವೀಂದರ್‌ ಪಂಡಿತ್‌, ಮಣಿಶ್ರೀ ಗಣೇಶ್‌, ಪಿ.ಟಿ.ವೆಂಕಟರಮಣನ್‌ ಮತ್ತು ಮಂಜುನಾಥ್‌ ಶರ್ಮ ಇದ್ದರು.

ಶ್ರೀ ಶಾರದಾ ಸರ್ವಜ್ಞ ಪೀಠ ಪಾಕ್‌ಸೇನೆಯಿಂದ ಅತಿಕ್ರಮಣ
ಈ ಸಂದರ್ಭ ಮಾತನಾಡಿದ ರವೀಂದರ್‌ ಪಂಡಿತ್‌, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿತ ಶ್ರೀ ಶಾರದಾ ಸರ್ವಜ್ಞ ಪೀಠವನ್ನು ಪಾಕ್‌ ಸೇನೆ ಅತಿಕ್ರಮಿಸಿದೆ. ಪೀಠದ ಒಂದು ಪಾರ್ಶ್ವ ಧ್ವಂಸ ಮಾಡಿದ್ದು, ಅಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸುವುದರ ಮೂಲಕ ಶ್ರದ್ಧಾಕೇಂದ್ರವನ್ನು ಪ್ರವಾಸಿ ತಾಣ ಮಾಡುವ ಹುನ್ನಾರ ಮಾಡಿದೆ. ಈ ವಿಚಾರವಾಗಿ ಉಭಯ ರಾಷ್ಟ್ರಮಟ್ಟದಲ್ಲಿ ಇದಕ್ಕೆ ತಡೆ ಹಿಡಿಯುವಂತೆ ಶೃಂಗೇರಿ ಜಗದ್ಗುರುಗಳಲ್ಲಿ ವಿನಂತಿ ಮಾಡಲಾಗಿದೆ ಎಂದರು.

ತಿತ್ವಾಲ್‌ನಿಂದ 70 ಕಿ.ಮೀ. ದೂರದಲ್ಲಿರುವ ಪಾಕ್‌ ವಶದಲ್ಲಿರುವ ಸರ್ವಜ್ಞ ಪೀಠದ ಪಾರ್ಶ್ವವನ್ನು ಧ್ವಂಸ ಮಾಡಿದ್ದು, ಪಾಕ್‌ ಸೇನಾ ಧಿಕಾರಿ ಬ್ರಿಗೇಡಿಯರ್‌ ತನ್ವೀರ್‌ ಅಹಮದ್‌ ಹೊಸ ಕಟ್ಟಡವನ್ನು ನಿರ್ಮಿಸಿ ಉದ್ಘಾಟಿಸಿದ್ದಾರೆ. ಅಜಾದ್‌ ಕಾಶ್ಮೀರದ ಸುಪ್ರೀಂಕೋರ್ಟ್‌ ನಮ್ಮ ಸರ್ವಜ್ಞ ಪೀಠದ ಜಾಗವನ್ನು ಆಧ್ಯಾತ್ಮಿಕ ಮತ್ತು ಶ್ರದ್ಧಾಕೇಂದ್ರ ಎಂದು ಗುರುತಿಸಿದೆ. ಧಾರ್ಮಿಕ ವಿಧಿ- ವಿಧಾನ ಬಿಟ್ಟು ಬೇರೆ ಉದ್ದೇಶಕ್ಕೆ ಮಾರ್ಪಾಡು ಮಾಡಬಾರದು ಎಂದು 2018ರ ಜನವರಿಯಲ್ಲಿ ಆದೇಶ ಮಾಡಿದೆ. ನಿಯಂತ್ರಣ ರೇಖೆಯಿಂದ ಆಚೆಗೆ ಭೇಟಿ ನೀಡಲು ರಕ್ತ ಸಂಬಂಧಿ  ಭಾರತೀಯರಿಗೆ ಮಾತ್ರ ಅವಕಾಶವಿದೆ. ಹಿಂದೂ ನಿವಾಸಿಗಳು ಇಲ್ಲಿ ಯಾರೂ ಇಲ್ಲದಿರುವುದರಿಂದ ಈ ಕಾನೂನನ್ನು ಮಾರ್ಪಾಡು ಮಾಡಬೇಕು. ಕರ್ತಾರ್‌ಪುರ ಕಾರಿಡಾರ್‌ನಂತೆ ಭಕ್ತರು ಇಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ನಾವು ಉಭಯ ದೇಶಗಳ ನಾಗರಿಕ ಸಮಿತಿ ಮೂಲಕ ಮಾತುಕತೆ ಮಾಡಿಕೊಂಡು ಮುಂದುವರಿಯುತ್ತಿದ್ದೇವೆ. ಈ ಬಗ್ಗೆ ಭಾರತ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ಟಾಪ್ ನ್ಯೂಸ್

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.