Kasturirangan; ಮಲೆನಾಡು ತಪ್ಪಲಿನ ಜನತೆ ಮತ್ತೆ ಹೋರಾಟಕ್ಕೆ ಸಜ್ಜು

ಕಸ್ತೂರಿ ವರದಿ ಅನುಷ್ಠಾನದ ಗುಮ್ಮ

Team Udayavani, Nov 18, 2023, 12:43 AM IST

Kasturirangan; ಮಲೆನಾಡು ತಪ್ಪಲಿನ ಜನತೆ ಮತ್ತೆ ಹೋರಾಟಕ್ಕೆ ಸಜ್ಜು

ಕಡಬ: ಕಸ್ತೂರಿರಂಗನ್‌ ವರದಿ ಅನುಷ್ಠಾನಕ್ಕೆ ಯಾವುದೇ ಕ್ಷಣದಲ್ಲಿ ಅನುಮೋದನೆ ಸಿಗಬಹುದು ಎನ್ನುವ ಆತಂಕದಲ್ಲಿರುವ ರಾಜ್ಯದ ಪಶ್ಚಿಮ ಘಟ್ಟದ ಗ್ರಾಮಗಳ ಜನರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

ಇತ್ತೀಚೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ವರದಿ ಅನುಷ್ಠಾನದ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ಸುಬ್ರಹ್ಮಣ್ಯದಿಂದ ಹೋರಾಟ ಪ್ರಾರಂಭಿಸಿದೆ.

ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು, ಪ್ರಸ್ತಾವಿತ ಸ್ಥಳದ ರೈತರನ್ನು ಒಕ್ಕಲೆಬ್ಬಿಸದೆ ಹಕ್ಕುಪತ್ರ ನೀಡಬೇಕು, ಜಂಟಿ ಸರ್ವೇ ನಡೆಸಬೇಕು, ಜನವಸತಿಯಿಲ್ಲದ ಪ್ರದೇಶಗಳಿಗೆ ಆನೆಗಳ ಸ್ಥಳಾಂತರ, ಅಡಿಕೆ ಹಳದಿ ರೋಗ ಹಾಗೂ ಎಲೆಚುಕ್ಕಿ ರೋಗದಿಂದ ಸಂತ್ರಸ್ತರಾದ ಬೆಳೆಗಾರರು ಅಸೌಖ್ಯಕ್ಕೀಡಾದಾಗ ಅವರು ಬಯಸಿದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ. ವಿವಿಧ ಸಹಕಾರಿ ಸಂಘ, ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಕೋವಿ ಪರವಾನಿಗೆ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ.

ಕಾರವಾರದಿಂದ ಚಾಮರಾಜನಗರ ತನಕ ರಾಜ್ಯದ 7 ಜಿಲ್ಲೆಗಳ ಪಶ್ಚಿಮ ಘಟ್ಟ ಭಾಗದ ಸಾವಿರಾರು ಗ್ರಾಮಗಳ ಲಕ್ಷಾಂತರ ಕುಟುಂಬದವರಿಗೆ ಈ ವರದಿ ಕಂಟಕಪ್ರಾಯವಾಗಿದೆ. ಇದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ 17 ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಹಸುರು ಪೀಠವು ಹಿಂದಿನ ಆದೇಶವನ್ನೇ ಜಾರಿಗೊಳಿಸುವಂತೆ ಆದೇಶಿಸಿದ್ದು, ಸಂಬಂಧಪಟ್ಟ ಗ್ರಾಮಸ್ಥರು ಮತ್ತೆ ಭಯಕ್ಕೀಡಾಗುವಂತಾಗಿದೆ.

ವರದಿ ಅನುಷ್ಠಾನಗೊಂಡರೆ?
ವರದಿ ಅನುಷ್ಠಾನಗೊಂಡರೆ ಜನರ ಸಂಪೂರ್ಣ ಕೃಷಿ ಭೂಮಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳುತ್ತದೆ. ಅಂತಹ ಭೂಮಿಗೆ ಯಾವುದೇ ಪರಿಹಾರ ಅಥವಾ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿಯ ಉಲ್ಲೇಖವಾಗಲಿ ವರದಿಯಲ್ಲಿ ಇಲ್ಲ. ವಸತಿ ಇತರ ಕಟ್ಟಡಗಳಿಗೂ ಪರಿಹಾರ ಘೋಷಿಸಿಲ್ಲ. ಈಗಾಗಲೇ ಅರಣ್ಯ ಹಾಗೂ ಸರಕಾರಿ ಜಮೀನಿನಲ್ಲಿ ಮನೆಕಟ್ಟಿ ವಾಸಿಸುತ್ತಿರುವವರನ್ನೂ ಒಕ್ಕಲೆಬ್ಬಿಸಲಾಗುತ್ತದೆ. ಈಗಾಗಲೇ ಪಡೆದ ಭೂಮಿಯ ಹಕ್ಕುಪತ್ರಗಳು, ರೈತರ ಕೋವಿ ಪರವಾನಿಗೆ ರದ್ದುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 48, ರಾಜ್ಯ ಹೆದ್ದಾರಿಗಳಾದ ಬಿಸಿಲೆ ಹಾಗೂ ಚಾರ್ಮಾಡಿ ಘಾಟಿ ರಸ್ತೆಗಳು ಹಾಗೂ ಮಂಗಳೂರು- ಬೆಂಗಳೂರು ರೈಲು ಮಾರ್ಗಗಳು ಯೋಜನೆಯ ನೀಲ ನಕಾಶೆಯಲ್ಲಿ ಒಳಪಡುವುದರಿಂದ ಭವಿಷ್ಯದಲ್ಲಿ ಇವೆಲ್ಲ ಮಾರ್ಗಗಳು ಮುಚ್ಚಲಿವೆ. ಲಕ್ಷಾಂತರ ಮಂದಿ ನಿರ್ಗತಿಕರಾಗಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದಿನ ಬಿಜೆಪಿ ಸರಕಾರವು ಸಮಿತಿ ರಚಿಸಿ ಕೇಂದ್ರ ಸರಕಾರಕ್ಕೆ ಕಸ್ತೂರಿ ವರದಿಯನ್ನು ಅನುಷ್ಠಾನ ಮಾಡಬಾರದು; ಮಾಡಿದರೂ ಜನಪರವಾದ ಹಲವು ಮಾರ್ಪಾಟುಗಳನ್ನು ಮಾಡಬೇಕು ಎಂದು ತಿಳಿಸಿತ್ತು. ಈಗ ನಾವು ಅದರ ಪ್ರತಿಯನ್ನು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ಕೊಡುತ್ತಿಲ್ಲ.ಯಾವುದೇ ಕ್ಷಣದಲ್ಲಿ ರಾಜ್ಯ ಸರಕಾರ ಕಸ್ತೂ¤ರಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬಹುದು ಎನ್ನುವ ಭೀತಿಯಿದ್ದು, ವರದಿಯನ್ನು ಕೈಬಿಡುವ ತನಕ ಹೋರಾಟ ನಿಲ್ಲದು.
– ಕಿಶೋರ್‌ ಶಿರಾಡಿ,
ಸಂಚಾಲಕರು, ಮಲೆನಾಡು ಜನಹಿತ ರಕ್ಷಣ ವೇದಿಕೆ,
ದ.ಕ. ಜಿಲ್ಲೆ.

 

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.