Kateel: ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ: ಕಲಾವಿದರು ಅಭಿನಂದನೀಯರು: ಪೇಜಾವರ ಶ್ರೀ
Team Udayavani, Nov 19, 2023, 11:03 PM IST
ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ ನ. 18ರಂದು ಜರಗಿದ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷಶಾಲ್ಮಲಾ ಸಂಸ್ಥೆಗೆ ಮತ್ತು 22 ಮಂದಿ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಸ್ಕಾರ ನೀಡುವ, ಸಂಸ್ಕೃತಿ ಉಳಿಸುವ, ಯಕ್ಷಗಾನದ ಕಲಾವಿದರ ತ್ಯಾಗ, ಶ್ರಮ ಸದಾ ಅಭಿನಂದನೀಯ. ಅಂತಹ ಕಲಾವಿದರನ್ನು ಗೌರವಿ ಸುವುದು ಸ್ತುತ್ಯರ್ಹ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.
21 ಕಲಾವಿದರಿಗೆ ಸಮ್ಮಾನ
ಕಲಾವಿದರಾದ ಚಿದಂಬರ ಬಾಬು ,ಕೋಟ ಗೋವಿಂದ ಉರಾಳ, ಮುಂಡ್ಕೂರು ವಸಂತ ಶೆಟ್ಟಿ, ತೀರ್ಥಹಳ್ಳಿ ಶಿವಶಂಕರ ಭಟ್, ಸಿದ್ದಾಪುರ ಸಂಜೀವ ಕೊಠಾರಿ, ಸೀತೂರು ಅನಂತಪದ್ಮನಾಭ ರಾವ್, ಕವ್ವಾಳೆ ಗಣಪತಿ ರಾಮಚಂದ್ರ ಭಾಗÌತ, ಮಂದಾರ್ತಿ ರಘುರಾಮ ಮಡಿವಾಳ, ಕೋಡಿ ವಿಶ್ವನಾಥ ಗಾಣಿಗ, ಸಿದ್ದಾಪುರ ಅಶೋಕ್ ಭಟ್, ಗುಣವಂತೆ ಸುಬ್ರಾಯ ನಾರಾಯಣ ಭಂಡಾರಿ, ಚೋರಾಡಿ ವಿಠಲ ಕುಲಾಲ್, ಎರ್ಮಾಳು ವಾಸುದೇವ ರಾವ್, ಈಚಲಕೊಪ್ಪ ಪ್ರಭಾಕರ ಹೆಗಡೆ, ಮಧೂರು ರಾಧಾಕೃಷ್ಣ ನಾವಡ, ಪಡುಬಿದ್ರೆ ರತ್ನಾಕರ ಆಚಾರ್ಯ, ಗುಂಡಿಮಜಲು ಗೋಪಾಲ ಭಟ್, ಇಡುವಾಣಿ ರ್ತ್ಯಂಬಕ ಹೆಗಡೆ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್, ಕಾಯರ್ತಡ್ಕ ವಸಂತ ಗೌಡ, ಶ್ರೀಧರ ಪಂಜಾಜೆ ಅವರನ್ನು ತಲಾ 20 ಸಾವಿರ ರೂ. ನಗದು ನೀಡಿ ಸಂಮಾನಿಸಲಾಯಿತು.
ಶ್ರೀ ಸ್ವರ್ಣವಲ್ಲೀ ಮಠದ ಕೃಪಾ ಶ್ರಯದ ಯಕ್ಷಶಾಲ್ಮಲಾ ಸಂಸ್ಥೆಗೆ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ 50 ಸಾವಿರ ರೂ. ನೀಡಿ ಗೌರವಿಸಲಾಯಿತು. ಮುದ್ರಾಡಿ ವಿಜಯಕುಮಾರ್ ಅವರಿಗೆ
“ಯಕ್ಷ ಚೇತನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇತ್ತೀಚೆಗೆ ನಿಧನರಾದ ಸಿಗಂಧೂರು ಮೇಳದ ಭಾಗವತ ರಾಮಚಂದ್ರ ಜಿ. ನಾಯ್ಕ… ಅವರ ಪತ್ನಿ ಗೀತಾ ಆರ್. ನಾಯ್ಕ… ಅವರಿಗೆ 50 ಸಾವಿರ ರೂ. ಸಾಂತ್ವನ ನಿಧಿ ನೀಡಲಾಯಿತು.ಕಟೀಲು ದೇಗುಲದ ಅನುವಂಶಿಕ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ. ಕಮಲಾದೇವಿ ಪ್ರಸಾದ ಆಸ್ರಣ್ಣ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಹಾಗೂ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ಅವ ರನ್ನು ಗೌರವಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್, ಪ್ರಭಾಕರ ಸುವರ್ಣ, ಲೀಲಾಕ್ಷ ಬಿ. ಕರ್ಕೇರ, ಎಂ. ಕೆ. ಭಟ್ ಕಡತೋಕ, ಕೆ. ಸದಾಶಿವ ಭಟ್, ಉಪಾಧ್ಯಕ್ಷ ಪಿ.ಕಿಶನ್ ಹೆಗ್ಡೆ, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು.
ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ