ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ನಿಲ್ದಾಣದೊಳಗೆ ಪಾರ್ಕಿಂಗ್‌ ಮಾಡುತ್ತಿದ್ದಾರೆ ; ಬಸ್‌ ನಿಲ್ದಾಣಕ್ಕೆ ಬಸ್‌ ಬರುವುದೇ ಇಲ್ಲ

Team Udayavani, Aug 21, 2021, 6:34 AM IST

ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ಕಟಪಾಡಿ ಪೇಟೆಯಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್‌ ಮಾಡಲು ಸ್ಥಳವಿಲ್ಲದೆ ಬಸ್‌ಸ್ಟಾಂಡ್‌ ಒಳಗಡೆಯೇ ಪಾರ್ಕಿಂಗ್‌ ಮಾಡುವುದರಿಂದ ಬಸ್‌ಗಳು ನಿಲ್ದಾಣಕ್ಕೆ ಬರುವುದೇ ಇಲ್ಲ .

ಕಟಪಾಡಿ: ಕಟಪಾಡಿ ಪೇಟೆಯಾದ್ಯಂತ ಎಲ್ಲೆಡೆ ಪಾರ್ಕಿಂಗ್‌ ಸಮಸ್ಯೆಯು ತಲೆದೋರಿದ್ದು, ಕಟಪಾಡಿ ಬಸ್‌ ನಿಲ್ದಾಣಕ್ಕೆ ಬಸ್‌ಬರು ತ್ತಿ ಲ್ಲ. ನಿತ್ಯ ಪ್ರಯಾಣಿಕರು ರಾಷ್ಟ್ರೀಯ ಹೆದ್ದಾರಿ ದಾಟುವ ಮತ್ತು ಗ್ರಾಹಕರು ಪಾರ್ಕಿಂಗ್‌ ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಹೋಗಿ ಖರೀದಿಸುವ ಸಮಸ್ಯೆಯನ್ನು ಅನುಭವಿಸುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಪ್ರದೇಶವಾಗಿ ಗುರುತಿಸಿಕೊಂಡಿರುವ ಕಟಪಾಡಿ ಪೇಟೆಯು ಸಾಕಷ್ಟು ವ್ಯಾಪಾರ ಮಳಿಗೆಗಳು, ವಾಣಿಜ್ಯ ಮಳಿಗೆಗಳು, ವಸತಿ ಸಮುತ್ಛಯಗಳು, ಹಲವು ದೇಗುಲಗಳು, ಆರಾಧನ ಕೇಂದ್ರಗಳು, ಹೊಟೇಲ್‌ಗ‌ಳು, ಹೆಸರುವಾಸಿ ವೈದ್ಯರು, ಕ್ಲಿನಿಕಲ್‌ ಲ್ಯಾಬೋರೇಟರಿಗಳನ್ನು ಹೊಂದಿದೆ. ಅಲ್ಲದೆ ಮಟ್ಟು, ಕೋಟೆ, ಶಿರ್ವ, ಶಂಕರಪುರ, ಮಣಿಪುರ ಸಹಿತ ಇತರ ಗ್ರಾಮಗಳಿಗೂ ಕೇಂದ್ರ ಸ್ಥಳವಾಗಿ ಬೆಳೆದು ನಿಂತಿದೆ. ಆ ನಿಟ್ಟಿನಲ್ಲಿ ಸದಾ ಜನಜಂಗುಳಿ, ಗ್ರಾಹಕರಿಂದ ಕಟಪಾಡಿ ಪೇಟೆಯು ಗಿಜಿಗುಡುತ್ತಿರುತ್ತದೆ.

ಈಗಾಗಲೇ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಪ್ರತಿಫಲ ಶೂನ್ಯವಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭ ಸ್ವಾಧೀನಪಡಿಸಿಕೊಳ್ಳಲಾದ ಪ್ರದೇಶ ಮತ್ತು ಅಳಿದುಳಿದ ಕಟ್ಟಡಗಳನ್ನು ತೆರವುಗೊಳಿಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕಟಪಾಡಿ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪ್ರೇಮ್‌ ಕುಮಾರ್‌ ಹೇಳುತ್ತಾರೆ.

ಇದನ್ನೂ ಓದಿ:“ಅವರು ಬದಲಾಗಿಲ್ಲ, ನಮಗೆ ಸಾವೇ ಗತಿ’ : ತಾಲಿಬಾನ್‌ ಆಡಳಿತದ ಕುರಿತು ಹೆಂಗಳೆಯರ ನೋವಿನ ಮಾತು

ಕಟಪಾಡಿ ಪೇಟೆಯೊಳಗಿನ ಬಸ್‌ ತಂಗುದಾಣಕ್ಕೆ ಬಸ್‌ ಬರಬೇಕು. ಕಾರು ಪಾರ್ಕಿಂಗ್‌ಗೂ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕಿದೆ. ಇಲಾಖಾ ಧಿಕಾರಿಗಳು ತಕ್ಕ ಕ್ರಮ ಕೈಗೊಳ್ಳಬೇಕಿದ್ದು, ಕಟಪಾಡಿಯಲ್ಲಿ ಘೋಷಣೆಯಾಗಿರುವ ಮೇಲ್ಸೇತುವೆ ಶೀಘ್ರವಾಗಿ ನಿರ್ಮಾಣಗೊಂಡಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬುದು ಕಟಪಾಡಿ ಕಾರು ಚಾಲಕ- ಮಾಲಕರ ಸಂಘದ ಅಧ್ಯಕ್ಷ ರಮೇಶ್‌ ಕೋಟ್ಯಾನ್‌ ಅವರ ಅಭಿ ಪ್ರಾಯವಾಗಿದೆ.

ಸ್ಥಳೀಯ ಕಟಪಾಡಿ ಗ್ರಾ.ಪಂ. ಮತ್ತು ಕಾಪು ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಸಮಸ್ಯೆಗಳನ್ನು ಸೌಹಾರ್ದ ಯುತವಾಗಿ ಬಗೆಹರಿಸಬೇಕಾದ ಅಗತ್ಯವಿದೆ.

ವಾಹನಗಳ ಪಾರ್ಕಿಂಗ್‌ ಸಮಸ್ಯೆ
ಕಟಪಾಡಿ ಪೇಟೆಯಲ್ಲಿನ ಬಸ್‌ ನಿಲ್ದಾಣದ ಸ್ಥಳದಲ್ಲಿ ವಾಹನ ಪಾರ್ಕಿಂಗ್‌ ಮಾಡಿ ತೆರಳುವುದರಿಂದ ಪಾರ್ಕಿಂಗ್‌ ಸಮಸ್ಯೆ ಮತ್ತು ಬಸ್‌ ನಿಲ್ದಾಣಕ್ಕೆ ಬಸ್ಸೇ ಬಾರದಂತಹ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣಗೊಂಡಂತಾಗಿದೆ. ವ್ಯಾಪಾರ ಸಂಕೀರ್ಣದ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಎರ್ರಾಬಿರ್ರಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಗ್ರಾಹಕರು ಸಮಸ್ಯೆಯನ್ನು ಎದುರಿಸುವಂತಾಗಿದೆ. ಮುಂಬರುವ ದಿನಗಳಲ್ಲಿ ಹಬ್ಬಗಳು, ಶುಭ ಸಮಾರಂಭಗಳು ನಡೆಯಲಿರುವ ಕಾರಣ ಸಮಸ್ಯೆಯು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ.

ಇತರ ಸಮಸ್ಯೆಗಳೇನು?
– ವಯೋವೃದ್ಧರು, ಮಕ್ಕಳು, ಮಹಿಳೆಯರು, ಅಂಗವಿಕಲರು, ಬಸ್‌ಗಾಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಹೆದ್ದಾರಿಯನ್ನು ದಾಟುವಂತಹ ಅನಿವಾರ್ಯ ಪರಿಸ್ಥಿತಿ ಇದ್ದು ಅಪ ಘಾತ ಸಂಭವಿಸುವ ಸಾಧ್ಯತೆ ಇರುತ್ತದೆ.
– ಬಸ್‌ ಪೇಟೆಯೊಳಕ್ಕೆ ಬಾರದೇ ಕೆಲವು ವ್ಯಾಪಾರಸ್ಥರು ಗ್ರಾಹಕರನ್ನು ಕಳೆದುಕೊಂಡಂತಾಗಿದೆ.

ಬಸ್‌ಸ್ಟ್ಯಾಂಡ್ ಉಳಿಯಲಿ
ಉದ್ಯೋಗಕ್ಕಾಗಿ ಮತ್ತು ಬೇರೆ ಊರುಗಳಿಗೆ ತೆರಳುವ ಮಂದಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಲಾಕ್‌ ಹಾಕಿ ತೆರಳುತ್ತಾರೆ. ಕಟಪಾಡಿ ಬಸ್‌ಸ್ಟ್ಯಾಂಡ್ ಹಾಗೆಯೇ ಉಳಿಯಲಿ. ಖಾಸಗಿ ವಾಹನಗಳ ಪಾರ್ಕಿಂಗ್‌ ಸ್ಥಳವಾಗದಿರಲಿ .
-ವೈ. ರಂಜನ್‌ ಹೆಗ್ಡೆ, ಅಧ್ಯಕ್ಷರು, ವರ್ತಕರ ಸಂಘ ಕಟಪಾಡಿ

ಸೂಕ್ತ ಕಾನೂನು ಕ್ರಮ
ಕಟಪಾಡಿ ಪೇಟೆಯೊಳಗೆ ಬಸ್‌ಬರುವಲ್ಲಿ ಅನುಕೂಲತೆ ಕಲ್ಪಿಸಲು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲಾಗುತ್ತದೆ. ಪಾರ್ಕಿಂಗ್‌ ಸಮಸ್ಯೆ ಮತ್ತೂ ಮುಂದುವರಿದಲ್ಲಿ ಪೊಲೀಸ್‌ ಇಲಾಖೆಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
-ರಾಘವೇಂದ್ರ, ಪಿ.ಎಸ್‌.ಐ. ಕಾಪು ಪೊಲೀಸ್‌ ಠಾಣೆ

ಸಮಾಲೋಚನ ಸಭೆ
ಸಮಸ್ಯೆಯ ಪರಿಹಾರಕ್ಕೆ ಕೂಡಲೇ ಮತ್ತೊಮ್ಮೆ ಸಾರ್ವಜನಿಕರು, ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಲಾಗುತ್ತದೆ. ಲಾಕ್‌ಡೌನ್‌ ಮುಂಚಿತವಾಗಿ ಕೈಗೊಂಡಂತೆ ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಬಸ್‌ಕಟಪಾಡಿ ಬಸ್‌ನಿಲ್ದಾಣಕ್ಕೆ ಬರುವಲ್ಲಿ ಮತ್ತು ಪಾರ್ಕಿಂಗ್‌ ಸಮಸ್ಯೆ ನೀಗಿಸುವಲ್ಲಿ ಪ್ರಯತ್ನಿಸಲಾಗುತ್ತದೆ .
– ಮಮತಾ ವೈ. ಶೆಟ್ಟಿ, ಪಿ.ಡಿ.ಒ., ಕಟಪಾಡಿ ಗ್ರಾ.ಪಂ.

-ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.