ಕಾಪು: ಮಿನಿ ವಿಧಾನಸೌಧ ಉದ್ಘಾಟನೆ


Team Udayavani, Mar 17, 2023, 3:34 PM IST

5–kaup

ಕಾಪು: ಶಾಸಕ ಲಾಲಾಜಿ ಆರ್. ಮೆಂಡನ್ ಅವರ ವಿಶೇಷ ಮುತುವರ್ಜಿಯಡಿಯಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ಬಂಗ್ಲೆ ಮೈದಾನದ 3.42 ಎಕರೆ ಜಮೀನಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಪು ತಾಲೂಕು ಆಡಳಿತ ಸಂಕೀರ್ಣ ಕಟ್ಟಡ – ಮಿನಿ ವಿಧಾನ ಸೌಧವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸರಕಾರದ ಎಲ್ಲಾ ಸೇವೆಗಳನ್ನೂ ಒಂದೇ ಸೂರಿನಡಿ ದೊರಕಿಸಿ ಕೊಡುವ ಉದ್ದೇಶದೊಂದಿಗೆ ನೂತನ ತಾಲೂಕುಗಳಾದ ಹೆಬ್ರಿ, ಬಂದೂರು, ಕಾಪು, ಬ್ರಹ್ಮಾವರ ತಾಲೂಕುಗಳಲ್ಲಿಯೂ ಮಿನಿ ವಿಧಾನ ಸೌಧ ನಿರ್ಮಾಣವಾಗಿರುವುದು ಪ್ರಶಂಸನೀಯವಾಗಿದೆ. ಕಾಪು ಮಿನಿ ವಿಧಾನ ಸೌಧ ನಿರ್ಮಾಣದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಶ್ರಮ ಶ್ಲಾಘನೀಯವಾಗಿದ್ದು ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಸಾರ್ವಜನಿಕರಿಗೂ ಉತ್ತಮ ಸೇವೆ ಒದಗಿಸುವುದು ಅಧಿಕಾರಿಗಳು ಮತ್ತು ಸಿಬಂದಿಗಳ ಕರ್ತವ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, 2018ರಲ್ಲಿ ತಾಲೂಕು ರಚನೆಯಾಗುವಾಗ ತಹಶೀಲ್ದಾರ್ ಮತ್ತು ಅವರ ಅಗತ್ಯದ ಸಿಬಂದಿಗಳ ಸೇವೆಗೆ ಮಾತ್ರಾ ಸೀಮಿತವಾಗಿದ್ದ ಕಾಪು ತಾಲೂಕಿನಲ್ಲಿ ಐದು ವರ್ಷದೊಳಗೆ ಸುಸಜ್ಜಿತವಾದ ಮಿನಿ ವಿಧಾನಸೌಧ ಸಹಿತವಾಗಿ ತಾಲೂಕಿಗೆ ಅವಶ್ಯವಾಗಿರಬೇಕಾದ ಬಹುತೇಕ ಇಲಾಖೆಗಳು ಮತ್ತು ಕಚೇರಿಗಳು ಕಾರ್ಯ ನಿರ್ವಹಿಸುವಂತಾಗಿದೆ. ಇಲ್ಲಿ ಜನರಿಗೆ ಒಂದೇ ಸೂರಿನಲ್ಲಿ ಎಲ್ಲಾ ಸೇವೆಗಳನ್ನೂ ಒದಗಿಸುವುದೇ ಇದರ ಹಿಂದಿನ ಮುಖ್ಯ ಉದ್ದೇಶವಾಗಿದೆ ಎಂದರು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ, ಕರ್ನಾಟಕ ಗೃಹಮಂಡಳಿ ಕಾರ್ಯಪಾಲಕ ಅಭಿಯಂತರೆ ಸಿ.ಕೆ. ಮಂಜುಳಾ, ತಾ.ಪಂ. ಕಾರ್ಯ ನಿರ್ವಹಣಾಽಕಾರಿ ನವೀನ್ ಕುಮಾರ್, ಶಿಕ್ಷಣ ಇಲಾಖೆ ಅಽಕಾರಿ ಚಂದ್ರೇಗೌಡ, ಉಪ ಖಜಾನಾಧಿಕಾರಿ ಪುಟ್ಟರಾಜು, ನೋಂದಣಾಽಕಾರಿ ಶ್ರೀಧರ್, ಎಡಿಎಲ್‌ಆರ್ ತಿಪ್ಪೇರಾಯ, ಗುತ್ತಿಗೆದಾರ ವಾಸುದೇವ ಶೆಟ್ಟಿ ಕಾಪು ಉಪಸ್ಥಿತರಿದ್ದರು.

ಸಮ್ಮಾನ, ಗೌರವಾರ್ಪಣೆ: ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಮಿನಿ ವಿಧಾನಸೌಧ ನಿರ್ಮಾಣದ ಗುತ್ತಿಗೆದಾರ ಕಾಪು ಶ್ರೀ ದೇವಿಪ್ರಸಾದ್ ಕನ್‌ಸ್ಟ್ರಕ್ಷನ್ ಪ್ರೈ. ಲಿ.ನ ಆಡಳಿತ ನಿರ್ದೇಶಕ ಕೆ. ವಾಸುದೇವ ಶೆಟ್ಟಿ, ವಿನ್ಯಾಸಗಾರ ಯೋಗೀಶ್, ಕರ್ನಾಟಕ ಗೃಹ ಮಂಡಳಿಯ ಅಽಕಾರಿಗಳಾದ ಸಿ.ಕೆ. ಮಂಜುಳ, ಸಹನಾ ಅವರನ್ನು ಸಮ್ಮಾನಿಸಲಾಯಿತು.

ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಸ್ವಾಗತಿಸಿದರು. ಪುರಸಭೆ ಮುಖ್ಯಾಧಿಕಾರಿ ಬಿ. ವೆಂಕಟೇಶ ನಾವುಡ ವಂದಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಮತ್ತು ಲೆಸ್ಟರ್ನ್ ಕ್ಲಾರೆನ್ಸ್ ಕರ್ನೇಲಿಯೋ ಕಾರ್ಯಜಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.