ನನೆಗುದಿಗೆ ಬಿದ್ದಿರುವ ಕೆಂಪೇಗೌಡ ಅಧ್ಯಯನ ಕೇಂದ್ರ : ಶಂಕುಸ್ಥಾಪನೆಗೆ ಮಾತ್ರ ಸೀಮಿತವಾದ ಯೋಜನೆ
2016ರಲ್ಲಿ ಘೋಷಿಸಿದ ಯೋಜನೆ 6 ವರ್ಷವಾದ್ರೂ ಇನ್ನೂ ಆರಂಭವಾಗಿಲ್ಲ
Team Udayavani, Dec 9, 2021, 12:58 PM IST
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಇತಿಹಾಸ, ಆಡಳಿತ, ಸಾಧನೆ ಅವರು ನೀಡಿದ ಕೊಡುಗೆಗಳನ್ನು ನಾಡಿನ ಜನರಿಗೆ ತಿಳಿಸಿಕೊಡುವ ಉದ್ದೇಶದಿಂದ ನಿರ್ಮಿಸಲು ಉದ್ದೇಶಿಸಿರುವ ಕೆಂಪೇಗೌಡ ಅಧ್ಯಯನ ಕೇಂದ್ರವು ಶಂಕುಸ್ಥಾಪನೆಗಷ್ಟೇ ಸೀಮಿತವಾದಂತಾಗಿದ್ದು, ಯೋಜನೆ ನನೆಗುದಿಗೆ ಬಿದ್ದಿದೆ. ಜ್ಞಾನಭಾರತಿ ಆವರಣದಲ್ಲಿ ಮೂರು ಎಕರೆ ಪ್ರದೇಶ ದಲ್ಲಿ ಅಂದಾಜು 50 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಅಧ್ಯಯನ ಕೇಂದ್ರ ನಿರ್ಮಿಸಲು ಉದ್ದೇಶಿಸಲಾಗಿತ್ತು.
2016ರಲ್ಲಿ ಯೋಜನೆ ಘೋಷಿಸಿದ್ದು, ಇಲ್ಲಿಯವರೆಗೂ ಯಾವುದೊಂದು ಅಭಿವೃದ್ಧಿ ಕಾರ್ಯಗಳು ಕೂಡ ನಡೆದಿಲ್ಲ. ಜ್ಞಾನಭಾರತಿ ಆವರಣದಲ್ಲಿ 3 ಎಕರೆ ಜಾಗ ಕೂಡ ನಿಗದಿ ಮಾಡಲಾಗಿದೆ. ಹೀಗಿದ್ದರೂ ಸರ್ಕಾರ ಅನಗತ್ಯವಾಗಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಅಧ್ಯಯನ ಕೇಂದ್ರ ಶಂಕುಸ್ಥಾಪನೆ ವೇಳೆ ಜ್ಞಾನಭಾರತಿ ಆವರಣದಲ್ಲಿ ಆರಂಭವಾದ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೋಜನೆ ಪೂರ್ಣಗೊಂಡಿದೆ. ಆದರೆ, ಕೆಂಪೇಗೌಡ ಅಧ್ಯಯನ ಕೇಂದ್ರ ಮಾತ್ರ ಇನ್ನೂ ಆರಂಭವಾಗಿಲ್ಲ. ಈ ಕುರಿತು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿ
ಸಿದರೂ ಕೆಲಸಗಳು ಮಾತ್ರ ಆರಂಭಗೊಂಡಿಲ್ಲ. ಬಿಬಿಎಂಪಿ ಆಯುಕ್ತರಿಗೆ ಸಾಕಷ್ಟು ಬಾರಿ ಗಮನಕ್ಕೆ ತಂದಿದ್ದರೂ ಟೆಂಡರ್ ಕಾರ್ಯ ಪೂರ್ಣಗೊಳಿಸಿ ಅಧ್ಯಯನ ಕೇಂದ್ರ ನಿರ್ಮಿಸುವ ಯಾವುದೇ ಮನಸ್ಸು ಮಾಡಿಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಕೇಂದ್ರದ ಸಮಿತಿ ಸದಸ್ಯ ಮಾಗಡಿ ರಂಗಪ್ಪ ಅಸಮಾಧಾನ ವ್ಯಕ್ತಪಡಿಸುತ್ತಾರೆ.
16ನೇ ಶತಮಾನದ ಕೆಂಪೇಗೌಡರ ಸಾಮ್ರಾಜ್ಯ:
ಅಧ್ಯಯನ ಕೇಂದ್ರದ ಆಕರ್ಷಣೆಯಾಗಿ ಕೆಂಪೇಗೌಡರ ಕಾಲದ ಶಾಸನಗಳು, ಶಿಲ್ಪಕಲೆ, ಗೋಪುರಗಳು, ದೇವಸ್ಥಾನ, ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ 16ನೇ ಶತಮಾನದ ನಗರವನ್ನು ಮರುಸೃಷ್ಟಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಸುಮಾರು 15 ಕೋಟಿ ವೆಚ್ಚದಲ್ಲಿ ಹಳೆ ಬೆಂಗಳೂರಿನ ಮರು ಸೃಷ್ಟಿ ಮಾಡುವ ಯೋಜನೆ ನಿರ್ಮಿಸಲಾಗಿದೆ. ಕೆಂಪೇಗೌಡರ ಕಾಲದಲ್ಲಿ ನಗರದಲ್ಲಿ ನಿರ್ಮಿಸಲಾಗಿದ್ದ ಅರಳೇಪೇಟೆ, ಬಳೇಪೇಟೆ, ಕುಂಬಾರಪೇಟೆ, ಗಾಣಿಗರಪೇಟೆ, ಕಬ್ಬನ್ ಪೇಟೆ, ತಿಗಳರ ಪೇಟೆ ಸೇರಿದಂತೆ 22 ಪೇಟೆಗಳ ಮಾದರಿಗಳು ಈ ಬಯಲು ವಸ್ತುಸಂಗ್ರಹಾಲಯದಲ್ಲಿ ನಿರ್ಮಿಸುವ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ : ನೈಟ್ ಕರ್ಫ್ಯೂ ಬಗ್ಗೆ ಸದ್ಯದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ
ಕೆಂಪೇಗೌಡರು ಆಳ್ವಿಕ ನಡೆಸಿದ ಬೆಂಗಳೂರು, ತುಮಕೂರು, ಕೋಲಾರ, ಮಾಗಡಿ, ನೆಲಮಂಗಲ, ಕನಕಪುರ ಹಲವು ಪ್ರದೇಶಗಳ ಮಾದರಿ ನಿರ್ಮಿಸಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಆಲೋಚನೆ ಕೂಡ ಇದೆ.
ಸಂಶೋಧನಾ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಇತಿಹಾಸ, ಆಡಳಿತ ಮತ್ತು ಕೊಡುಗೆಗಳ ಸಂಪೂರ್ಣ ಮಾಹಿತಿ ಸಿಗಬೇಕು ಎಂಬುದು ಅಧ್ಯಯನ ಕೇಂದ್ರದ ಉದ್ದೇಶಗಳಲ್ಲಿ ಒಂದಾಗಿದೆ. ಆದರೆ, ಟೆಂಡರ್ ಪ್ರಕ್ರಿಯೆ ನಿಂತಲ್ಲೇ ನಿಂತಿರುವುದರಿಂದ ಯೋಜನೆ ಜಾರಿಯಾಗದಂತಾಗಿದೆ.
2016ರಲ್ಲಿ ಶಂಕು ಸ್ಥಾಪನೆ
ಜ್ಞಾನಭಾರತಿ ಆವರಣದಲ್ಲಿ ಮೂರು ಎಕರೆ ಪ್ರದೇಶದಲ್ಲಿ ಅಂದಾಜು 50 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಅಧ್ಯಯನ ಕೇಂದ್ರ ನಿರ್ಮಿಸಲು ಉದ್ದೇಶಿಸಲಾಗಿತ್ತು. ಅದರಂತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ 2016ರಲ್ಲಿ ಯೋಜನೆಯನ್ನು ಘೋಷಿಸಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ನಂತರ ಮತ್ತೂಮ್ಮೆ 2018ರಲ್ಲಿ ಅಧ್ಯಯನ ಕೇಂದ್ರದ ಉಪಾಧ್ಯಕ್ಷರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಶಂಕುಸ್ಥಾಪನೆ ನೆರವೇರಿಸಿ ಟೆಂಡರ್ ಕರೆಯಲಾಗಿತ್ತು. ತಾಂತ್ರಿಕ ಕಾರಣಗಳಿಂದ ಟೆಂಡರ್ ರದ್ದುಗೊಂಡಿದೆ. ಪರಿಣಾಮ, ಸಂಶೋಧನಾ ಕೇಂದ್ರ ನಿರ್ಮಿಸುವ ಸರ್ಕಾರದ ಯೋಜನೆ ಕೂಡ ಅಲ್ಲಿಗೇ ಸ್ಥಗಿತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ