![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Rain: ಕೇರಳ, ತಮಿಳುನಾಡಿನಲ್ಲಿ ಬಿರುಸಿನ ಮಳೆ- ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ
Team Udayavani, Nov 22, 2023, 8:34 PM IST
![rain 1](https://www.udayavani.com/wp-content/uploads/2023/11/rain-1-3-620x452.jpg)
ಚೆನ್ನೈ/ತಿರುವನಂತಪುರ: ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಬುಧವಾರ ಮತ್ತು ಗುರುವಾರ ಧಾರಾಕಾರ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಎರಡು ರಾಜ್ಯಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ.
ಕೇರಳ ಮತ್ತು ಮಾಹೆಯ ವಿವಿಧ ಭಾಗಗಳಲ್ಲಿ ಗುರುವಾರದ ವರೆಗೆ ಬಿರುಸಿನ ಮಳೆಯಾಗಲಿದೆ. ಹೀಗಾಗಿ, ಕಟ್ಟೆಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಪಿಣರಾಯಿ ವಿಜಯನ್ ನೇತೃತ್ವದ ಸರಕಾರ ತೀರ್ಮಾನಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಚೆನ್ನೈ ಸಹಿತ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಚೆನ್ನೈಯ ಮೂಲಂಬಾಕಂ ಎಂಬಲ್ಲಿ ಸಬ್ವೇಗೆ ಪ್ರವಾಹದ ನೀರು ನುಗ್ಗಿ ಬಸ್ ಆಂಶಿಕವಾಗಿ ಮುಳುಗಿತ್ತು. ಕೂಡಲೇ ಚೆನ್ನೈ ಮಹಾನಗರಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸನ್ನು ನೀರಿನಿಂದ ಹೊರಕ್ಕೆಳೆದಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಕಾರೈಕಲ್ ಮತಿತ್ತರ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಅಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲು ಸರಕಾರ ತೀರ್ಮಾನಿಸಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಕೆಲವು ದಿನಗಳಿಂದ ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಉದ್ಯಾನನಗರ ವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಏಕಾಏಕಿ ಮಳೆಯಾದ್ದರಿಂದ ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರಿಗೆ ತೊಂದರೆಯಾಯಿತು. ಕರಾವಳಿಯಲ್ಲಿ ಬುಧವಾರ ಮೋಡ ಕವಿದ ವಾತಾವರಣ ಕಂಡುಬಂದಿತ್ತು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.