ಕೇರಳಕ್ಕಿಂತ ಕರ್ನಾಟಕ ಹೇಗೆ ಸುರಕ್ಷಿತ: ಅಮಿತ್ ಶಾಗೆ ಕೇರಳ ಸಿಎಂ ಪಿಣರಾಯಿ ಪ್ರಶ್ನೆ
Team Udayavani, Feb 13, 2023, 7:10 AM IST
ತಿರುವನಂತಪುರ: ಮಂಗಳೂರು ಭೇಟಿ ಸಂದರ್ಭದಲ್ಲಿ ಕೇರಳದಲ್ಲಿನ ಸುರಕ್ಷತೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇರಳಕ್ಕಿಂತ ಕರ್ನಾಟಕ ಹೇಗೆ ಸುರಕ್ಷಿತ ಎಂಬುದನ್ನು ಶಾ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಶನಿವಾರವಷ್ಟೇ ಮಂಗಳೂರಿಗೆ ಭೇಟಿ ನೀಡಿದ್ದ ಶಾ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, “ನಿಮ್ಮ ನೆರೆಯ ರಾಜ್ಯದ ಪರಿಸ್ಥಿತಿಯನ್ನೇ ಒಮ್ಮೆ ಗಮನಿಸಿ, ಅವಲೋಕಿಸಿ. ನಾನು ಹೆಚ್ಚಿಗೆ ಏನೂ ಹೇಳಬೇಕಾದ ಆವಶ್ಯಕತೆ ಇಲ್ಲ…’ ಎಂದಿದ್ದರು.
ಈ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇರಳ ಸಿಎಂ ಪಿಣರಾಯಿ, ಕೇರಳದಲ್ಲಿ ಅಭದ್ರತೆ ತೋರುವಂಥ ಯಾವ ಪರಿಸ್ಥಿತಿ ಎದುರಾಗಿದೆ? ಇಲ್ಲಿನ ಜನರು ಸಂವಿಧಾನದ ಮೇಲೆ ನಂಬಿಕೆ ಹೊಂದಿದ್ದಾರೆ. ನೆಮ್ಮದಿಯಾಗಿ ಜೀವಿಸುತ್ತಿದ್ದಾರೆ, ಅದೇ ಕರ್ನಾಟಕದಲ್ಲಿ ಈ ಪರಿಸ್ಥಿತಿ ಇದೆಯೇ? ಕರ್ನಾಟಕದಲ್ಲಿ ಕ್ರಿಶ್ಚಿಯನ್ನರು, ಅಲ್ಪಸಂಖ್ಯಾಕ ಸಮುದಾ ಯದವರು ಅನೇಕ ದಾಳಿಗಳನ್ನು ಎದುರಿಸುತ್ತಿದ್ದಾರೆ. ಆದರೆ ಕೇರಳದಲ್ಲಿ ಅಂತಹ ಕೋಮುದ್ವೇಷವೇ ಇಲ್ಲ. ಕೇರಳವನ್ನು ನೋಡಿ ಕಲಿಯಿರಿ ಎಂದರೆ ಅದನ್ನು ಸ್ವಾಗತಿಸ ಬಹುದಿತ್ತು. ಆದರೆ ಶಾ ಅವರ ಹೇಳಿಕೆ ಅದಾಗಿರಲಿಲ್ಲ. ಅವರು ತಮ್ಮ ವಾಕ್ಯವನ್ನು ಪೂರ್ಣಗೊಳಿಸಬೇಕು. ಇಲ್ಲವೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!