ಕೆ.ಜಿ.ಹಳ್ಳಿ ಗಲಭೆ: ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪತ್ರಕರ್ತರಿಂದ ಪತ್ರ ಚಳುವಳಿ
Team Udayavani, Aug 12, 2020, 12:14 PM IST
ಕೊಪ್ಪಳ: ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಕೊಪ್ಪಳ ಮೀಡಿಯಾ ಕ್ಲಬ್ ಬುಧವಾರ ಪತ್ರ ಚಳುವಳಿ ನಡೆಸಿತು.
ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ, ಸಮಾಜದ ಏಳಿಗೆಗಾಗಿ ಪತ್ರಕರ್ತರು ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಎಲ್ಲೆಡೆ ಹಲ್ಲೆ, ದೌರ್ಜನ್ಯ ನಡೆಯುತ್ತಿವೆ. ಬೆಂಗಳೂರಿನಲ್ಲಿ ನಡೆದ ಹಲ್ಲೆಯೂ ತೀವ್ರ ನೋವಿನ ಸಂಗತಿ. ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಸರ್ಕಾರ ಈ ಪ್ರಕರಣ ತನಿಖೆ ನಡೆಸಬೇಕು ಎಂದು ಮನವಿ ಮಾಡಿದೆ.
ಇಂದು ಪತ್ರಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೂಡಲೇ ಪತ್ರಕರ್ತರಿಗೆ ವೈದ್ಯರ ರಕ್ಷಣೆಗೆ ಇರುವ ಕಾಯ್ದೆ ವ್ಯಾಪ್ತಿಗೆ ಪತ್ರಕರ್ತರನ್ನು ತರಬೇಕು ಹಾಗೂ ಪತ್ರಕರ್ತರಿಗೆ ಸರ್ಕರವೇ ವಿಮಾ ಸೌಲಭ್ಯ ಕಲ್ಪಿಸಬೇಕು. ಸರ್ಕಾರ ಕೂಡಲೇ ಈ ಎರಡು ಬೇಡಿಕೆ ಈಡೇರಿಸಬೇಕೆಂದು ಕೊಪ್ಪಳ ಮೀಡಿಯಾ ಕ್ಲಬ್ ಒತ್ತಾಯಿಸಿ ಪತ್ರ ಚಳುವಳಿ ಆರಂಭಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ