ಪೋಸ್ಟ್ ಪ್ರೊಡಕ್ಷನ್ನಲ್ಲಿ ಕೆಜಿಎಫ್-2
Team Udayavani, May 19, 2020, 4:27 AM IST
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರದ ಕೆಲಸಗಳು ಮತ್ತೆ ಶುರುವಾಗಿದ್ದು, ಈ ಕುರಿತು ಚಿತ್ರತಂಡ ಅಪ್ಡೇಟ್ ನೀಡಿದೆ. ಈ ಮೂಲಕ ಅಭಿಮಾನಿಗಳಿಗೆ ಲಾಕ್ ಡೌನ್ ನಡುವೆಯೇ ಚಿತ್ರತಂಡ ಮತ್ತೂಂದು ಗುಡ್ ನ್ಯೂಸ್ ಕೊಟ್ಟಿದೆ. ಅಭಿಮಾನಿಗಳ ಕಾತುರದ ನಡುವೆಯೇ ಈ ಹಿಂದೆ ಚಿತ್ರತಂಡ ಚಿತ್ರಕ್ಕೆ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು, ಅಕ್ಟೊಬರ್ 23ರಂದು ಚಿತ್ರ ಬಿಡುಗಡೆಯಾಗುವುದಾಗಿ ತಿಳಿಸಿತ್ತು.
ಇದೀಗ ಕೆಜಿಎಫ್ ಚಿತ್ರದ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಹೊಸ ಮಾಹಿತಿ ಹಂಚಿಕೊಂಡಿದ್ದು, ಈ ಕುರಿತು ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಮ್ಯೂಸಿಕ್ ಸ್ಟುಡಿಯೋದಲ್ಲಿನ ಚಿತ್ರವನ್ನು ಹಂಚಿಕೊಂಡಿದ್ದು, ಇದರಲ್ಲಿ ಪ್ರಶಾಂತ್ ನೀಲ್, ರವಿ ಬಸ್ರೂರ್ ಹಾಗೂ ಕಾರ್ತಿಕ್ ಗೌಡ ಇದ್ದಾರೆ. ಹ್ಯಾಶ್ ಟ್ಯಾಗ್ನೊಂದಿಗೆ ಕೆಜಿಎಫ್ ಚಾಪ್ಟರ್-2 ಮ್ಯೂಸಿಕ್ ಸೆಶನ್ಸ್ ಎಂಬ ಸಾಲುಗಳನ್ನು ಬರೆದಿದ್ದಾರೆ.
ಅಲ್ಲದೆ ಪ್ರಶಾಂತ್ ನೀಲ್, ಹೊಂಬಾಳೆ ಫೀಲಮ್ಸ್, ಯಶ್ ಶ್ರೀ ನಿಧಿ ಶೆಟ್ಟಿ, ಭುವನ್ ಗೌಡ, ವಿಜಯ್ ಕಿರಗಂದೂರ್, ಸಂಜಯ್ ದತ್ ಹಾಗೂರವೀನಾ ಟಂಡನ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಈ ಫೋಟೋ ಚಿತ್ರದ ಸಂಗೀತಕ್ಕೆ ಸಂಬಂಧಿಸಿದ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಸುಳಿವನ್ನು ನೀಡಿದ್ದು, ಕೆಜಿಎಫ್ 2 ಸಿನಿಮಾದ ಕೆಲಸ ಪ್ರಾರಂಭವಾಯಿತು ಎಂದು ಅಭಿಮಾನಿಗಳು ಖುಷ್ ಆಗಿದ್ದಾರೆ.
ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಸಹ ಅಷ್ಟೇ ವೇಗವಾಗಿ ಚಿತ್ರೀಕರಣ ನಡೆಸಿತ್ತು. ಈಗಾಗಲೇ ಶೂಟಿಂಗ್ ಕೊನೇಹಂತ ತಲುಪಿದೆ. ಹೀಗಿರುವಾಗಲೇ ಕೊರೊನಾ ವೈರಸ್ನಿಂದಾಗಿ ಲಾಕ್ಡೌನ್ ಘೋಷಣೆಯಾಯಿತು. ಅಂದಿನಿಂದ ಚಿತ್ರೀಕರಣ ಸ್ಥಗಿತಗೊಂಡಿತ್ತು. ಕೆಜಿಎಫ್ ಚಾಪ್ಟರ್ 1ಗಿಂತಲೂ ಚಾಪ್ಟರ್ 2ಎಫೆಕ್ಟಿವ್ ಆಗಿ ಮೂಡಿ ಬಂದಿದ್ದು, ಪ್ರೇಕ್ಷಕರ ನಿರೀಕ್ಷೆಗೂ ಮೀರಿ ಸಿನಿಮಾ ತಯಾರಿಸಲಾಗಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ