“ಹಿಂಸೆಗೆ ಪ್ರಚೋದನೆ ನೀಡಿದ್ದೇ ಖಾದರ್‌’


Team Udayavani, Dec 21, 2019, 3:09 AM IST

himsege

ಬೆಂಗಳೂರು: ದಕ್ಷಿಣ ಕನ್ನಡ ಶಾಂತವಾಗಿತ್ತು. ಆದರೆ, ಮಾಜಿ ಸಚಿವ ಯು.ಟಿ.ಖಾದರ್‌ ಅವರು ನೇರವಾಗಿ ಉತ್ತರ, ಈಶಾನ್ಯ ರಾಜ್ಯಗಳಲ್ಲಾದಂತೆ ಇಲ್ಲಿಯೂ ರಾಜ್ಯಕ್ಕೆ ಬೆಂಕಿ ಹಾಕುತ್ತಾರೆ ಎಂದು ಹೇಳಿದ್ದು, ಪರೋಕ್ಷವಾಗಿ ಸಮಾಜದ್ರೋಹಿಗಳು, ಕಟ್ಟಾ ಮತೀಯವಾದಿಗಳು ಈ ಕೃತ್ಯಕ್ಕೆ ಕುಮ್ಮಕ್ಕು ಕೊಟ್ಟಂತಾಗಿದೆ. ಖಾದರ್‌ ಅವರು ಮಾತನಾಡದಿದ್ದರೆ ಈ ರೀತಿ ಆಗುತ್ತಿರಲಿಲ್ಲ. ತಮ್ಮ ಅಸ್ತಿತ್ವಕ್ಕಾಗಿ ಅವರು ಈ ರೀತಿ ಮಾಡಿದ್ದಾರೆ ಎನಿಸುತ್ತದೆ. ಈ ಬಗ್ಗೆ ತನಿಖೆಯಾಗಿ ಅವರ ಕಾರ್ಯಾಚರಣೆ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಕ್ಷಿಣ ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಮತೀಯ ಘರ್ಷಣೆ ನಡೆದಿರಲಿಲ್ಲ. ಮಂಗಳೂರಿನಿಂದ ಕೊಡಗು, ಮೈಸೂರುವರೆಗೆ ಈ ರೀತಿಯ ಸಣ್ಣಪುಟ್ಟ ಮತೀಯ ಘರ್ಷಣೆಯಾದ ಕೂಡಲೇ ಕೇರಳದ ಮೂಲಭೂತ ಮತೀಯವಾದಿಗಳ ಪ್ರವೇಶವಾಗುವುದು, ಜೀವ ಹಾನಿ ಮಾಡಿ ಕೇರಳಕ್ಕೆ ಹೋಗುವುದು ನಡೆದಿದೆ. ಅಂತಹ ವಿದ್ರೋಹಿಗಳೊಂದಿಗೆ ಕಾಂಗ್ರೆಸ್‌ನವರಿಗೆ ನಿಕಟ ಸಂಪರ್ಕವಿದೆ. ಕಾಂಗ್ರೆಸ್‌ನವರು ಆಗಾಗ ಅವರ ಉಪಯೋಗ ಪಡೆಯುತ್ತಾರೆ ಎಂದು ದೂರಿದರು.

ಹೊರಗಿನಿಂದ ಜನರನ್ನು ಕರೆ ತರಲಾಗಿದೆ: ಗುರುವಾರದ ಘಟನೆ ದಕ್ಷಿಣ ಕನ್ನಡ ಭಾಗದವರಿಂದ ಆದ ಕೃತ್ಯವಲ್ಲ. ಬೇರೆಯವರು ಬಂದದ್ದು ಈ ರೀತಿಯ ದೊಡ್ಡ ಗಲಾಟೆಗೆ ಕಾರಣವಾಗಿದೆ. ಕೇರಳದಿಂದ ಬಂದವರಿಂದ ಈ ರೀತಿ ಆಗುವ ಸಾಧ್ಯತೆಗಳಿವೆ. ದೇಶದ ವಿವಿಧೆಡೆ ಹಿಂಸಾಚಾರ ನಡೆದಾಗಲೂ ಎರಡು- ಮೂರು ದಿನ ಮಂಗಳೂರು ಶಾಂತವಾಗಿತ್ತು. ಆದರೆ 2-3 ದಿನದ ನಂತರ ಜನರನ್ನು ಕರೆ ತಂದು ಗಲಾಟೆ ಮಾಡಿದಂತಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಮುಖಂಡರು ಮಂಗಳೂರಿಗೆ ಭೇಟಿ ನೀಡುವ ಪ್ರಯತ್ನದ ಬಗ್ಗೆ ಪ್ರತಿಕ್ರಿಯಿಸಿದ ಸದಾನಂದ ಗೌಡ, ಭೇಟಿ ನೀಡಲು ಇದು ಸಕಾಲವಲ್ಲ. ಮೊದಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕಾಂಗ್ರೆಸ್‌ ನಾಯಕರಿಗೆ ಶಾಂತಿ ಕಾಪಾಡಲು ಹೇಳಲಿ. ಮೊದಲೇ ಹೊತ್ತಿ ಉರಿಯುತ್ತಿರುವ ದಕ್ಷಿಣ ಕನ್ನಡಕ್ಕೆ ಇನ್ನಷ್ಟು ಪೆಟ್ರೋಲ್‌ ಸುರಿಯಲು ಹೋಗುವುದನ್ನು ಮಾಡಬಾರದು. ಇವರು ಹೋಗುವುದರಿಂದ ಸಮಾಜ ದ್ರೋಹಿಗಳಿಗೆ ಇನ್ನಷ್ಟು ಬೆಂಬಲ ಸಿಕ್ಕಂತಾಗಲಿದೆ. ಪರೋಕ್ಷವಾಗಿ ಗಲಾಟೆಗೆ ಪ್ರೇರಣೆ ನೀಡಿದಂತಾಗುತ್ತದೆ ಎಂದರು.

ಕಾಂಗ್ರೆಸ್‌ ನಾಯಕರು ಮಂಗಳೂರಿಗೆ ಹೋಗುವುದಾಗಿ ಹೇಳುತ್ತಿದ್ದಂತೆ ಶಾಂತವಾಗಿದ್ದ ಉಪ್ಪಿನಂಗಡಿಯಲ್ಲಿ ಕಲ್ಲು ತೂರಾಟವಾಗಿದೆ. ಕೊನೆಗೆ ಸರ್ಕಾರ, ಪೊಲೀಸರ ಮೇಲೆ ದೋಷಾರೋಪ ಮಾಡುತ್ತಾರೆ. ಪರಿಸ್ಥಿತಿ ಶಾಂತವಾದ ಬಳಿಕ ಕೆಲ ದಿನಗಳ ನಂತರ ಭೇಟಿ ನೀಡಲಿ ಎಂದು ಸಲಹೆ ನೀಡಿದರು. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲೇ ಹಿಂಸಾಚಾರ ನಡೆಯುತ್ತಿದೆಯಲ್ಲ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ಅನ್ಯ ಪಕ್ಷಗಳಿಗೆ ಹೊಟ್ಟೆ ಉರಿ ಇದೆ. ಹಾಗಾಗಿ ಗಲಭೆ, ಹಾರಿಕೆ ಸುದ್ದಿಗಳನ್ನು ಹರಡುವ ಪ್ರಯತ್ನ ನಡೆದಿದೆ ಎಂದರು.

ಪ್ರಚೋದನೆಯೇ ಕಾರಣ: ಡಿಸಿಎಂ
ಬೆಂಗಳೂರು: ರಾಷ್ಟ್ರದಲ್ಲಿ ಭದ್ರತೆ ಹಾಗೂ ಏಕತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗಿದ್ದು, ಕಾಯ್ದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್‌ನ ಯು.ಟಿ.ಖಾದರ್‌ ಅವರು ಪ್ರಚೋದನೆ ನೀಡಿ ಹಿಂಸಾಚಾರ ತೀವ್ರ ರೂಪ ಪಡೆಯಲು ಕಾರಣರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಕಾರ್ಯಕರ್ತರ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಕಾಯ್ದೆಯಿಂದ ದೇಶದ ಯಾವುದೇ ಸಮುದಾಯ, ಜನಾಂಗದವರಿಗೆ ಅನ್ಯಾಯವಾಗದು. ಬೇರೆ ದೇಶದಿಂದ ವಲಸೆ ಬಂದು ರಾಷ್ಟ್ರದಲ್ಲಿ ಅನೇಕ ವರ್ಷದಿಂದ ನೆಲೆಸಿದವರಿಗೂ ಪೌರತ್ವ ನೀಡಲು ನಿರ್ಧರಿಸಲಾಗಿದೆ. ಆದರೂ, ಪ್ರತಿಪಕ್ಷಗಳು ತಪ್ಪು ಮಾಹಿತಿ ನೀಡುತ್ತಿರುವುದರಿಂದ ಕಲಬುರಗಿ, ಮಂಗಳೂರು ಸೇರಿದಂತೆ ಹಲವೆಡೆ ಹಿಂಸಾಚಾರ ನಡೆದಿದೆ. ಮಂಗಳೂರಿನಲ್ಲಿ ಯು.ಟಿ.ಖಾದರ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದೇ ಹಿಂಸಾಚಾರಕ್ಕೆ ಕಾರಣವಾಯಿತು ಎಂಬ ಮಾತು ಎಲ್ಲೆಡೆಯಿಂದ ಕೇಳಿ ಬರುತ್ತಿದೆ ಎಂದು ಹೇಳಿದರು.

ಸ್‌ಗೆ ಹಾನಿ ಮಾಡುವುದು ಬೇಡ: ಪ್ರತಿಭಟಿಸುವುದು ಅವರ ಹಕ್ಕು. ಆದರೆ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಬೇಕು. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸುವುದು, ಹಾನಿ ಮಾಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿ ಎಲ್ಲರಿಗೂ ಹೊರೆಯಾಗಲಿದೆ. ಹಾಗಾಗಿ, ಸರ್ಕಾರಿ ಬಸ್‌ಗಳಿಗೆ ಕಲ್ಲು ಎಸೆದು ಹಾನಿ ಮಾಡಬಾರದು ಎಂದು ಸಾರಿಗೆ ಸಚಿವನಾಗಿ ಮನವಿ ಮಾಡುತ್ತೇನೆ ಎಂದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರು ರೈಲುಗಳಿಗೆ ಬೆಂಕಿ ಹಚ್ಚಿದರೆ, ಹಾನಿ ಮಾಡಿದರೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಮಾತಿನ ಭರದಲ್ಲಿ “ಕಂಡಲ್ಲಿ ಗುಂಡಿಕ್ಕಿ’ ಎಂದು ಹೇಳಿರಬಹುದೇ ಹೊರತು ಪ್ರಚೋದನಕಾರಿ ಹೇಳಿಕೆ ನೀಡಿಲ್ಲ ಎಂದು ಸಮರ್ಥಿಸಿಕೊಂಡರು.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮಾನವೀಯತೆಯ ನೆಲೆಯಲ್ಲಿ ತರಲಾದ ತಿದ್ದುಪಡಿ ಇದಾಗಿದ್ದು, ಹಿಂದೆಯೇ ಆಗಬೇಕಿತ್ತು. ಈ ಹಿಂದೆ ಮತೀಯ ಆಧಾರದ ಮೇಲೆ ಪಾಕಿಸ್ತಾನ ವಿಭಜನೆಗೊಂಡಿದ್ದರ ಫ‌ಲವಾಗಿ ಈ ತಿದ್ದುಪಡಿ ಕಾಯ್ದೆ ಬಂದಿದೆ.
-ಸದಾನಂದ ಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.