ಖಂಡ್ರೆ, ಖರ್ಗೆ, ಧರಂ 50 ವರ್ಷ ಆಳಿದ್ದಾರೆ, ಅಭಿವೃದ್ಧಿ ಮಾಡಿಲ್ಲ: ಯತ್ನಾಳ್‌

ಕಲ್ಯಾಣ ಕರ್ನಾಟಕ ಯೋಜನೆಗಳನ್ನು ಜಾರಿಗೊಳಿಸಲು ಖಾಸಗಿ ಸಂಸ್ಥೆಗೆ ನೀಡಿದ್ದಾರೆ.

Team Udayavani, Sep 24, 2021, 3:40 PM IST

ಖಂಡ್ರೆ, ಖರ್ಗೆ, ಧರಂ 50 ವರ್ಷ ಆಳಿದ್ದಾರೆ, ಅಭಿವೃದ್ಧಿ ಮಾಡಿಲ್ಲ: ಯತ್ನಾಳ್‌

ವಿಧಾನಸಭೆ: ಕಲ್ಯಾಣ ಕರ್ನಾಟಕ ಭಾಗವನ್ನು ಕಳೆದ 50 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್‌ ಹಾಗೂ ಭೀಮಣ್ಣ ಖಂಡ್ರೆ ಆಳ್ವಿಕೆ ಮಾಡಿದ್ದಾರೆ. ಇಷ್ಟು ವರ್ಷ ಆಳ್ವಿಕೆ ಮಾಡಿದರೂ, ಆ ಭಾಗದ ಅಭಿವೃದ್ಧಿ ಮಾಡಿಲ್ಲ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದರು. ಅಲ್ಲದೇ, ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಹೆಚ್ಚಿನ ಅನುದಾನ ನೀಡಿ ಆ ಭಾಗದಲ್ಲಿ ಅಭಿವೃದ್ಧಿಯಾಗುವಂತೆ ನೋಡಿಕೊಂಡಿದ್ದಾರೆ
ಎಂದು ಹೇಳಿದರು.

ಅವರ ಹೇಳಿಕೆಗೆ ಕಾಂಗ್ರೆಸ್‌ ಸದಸ್ಯರಾದ ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್‌ ಅವರು ಆಳ್ವಿಕೆ ಮಾಡಿಲ್ಲ. ಜನರ ಸೇವೆ ಮಾಡಿದ್ದಾರೆ. ಅವರು ಅಭಿವೃದ್ಧಿ ಕಾರ್ಯ ಮಾಡಿದ್ದರಿಂದಲೇ ಜನರು ಅವರನ್ನು ನಿರಂತರ ಆಯ್ಕೆ ಮಾಡಿದ್ದಾರೆ. ಯತ್ನಾಳ ಅವರಿಗೆ ಯಡಿಯೂರಪ್ಪ ಅವರ ಮೇಲೆ ಈಗಿರುವ ಪ್ರೀತಿ ಒಂದು ತಿಂಗಳ ಹಿಂದೆ ಇದ್ದಿದ್ದರೆ ಒಳ್ಳೆಯದಿತ್ತು ಎಂದರು.

ಈಶ್ವರ ಖಂಡ್ರೆ ಆಕ್ಷೇಪಕ್ಕೆ ಬಸನಗೌಡ ಯತ್ನಾಳ್‌, ನಾನು ಯಾವುದೇ ಮಠಾಧೀಶರ ಕಾಲು ಹಿಡಿದು ಮಂತ್ರಿಯಾಗಿಲ್ಲ. ವೀರಶೈವ ಮಹಾಸಭೆಯನ್ನು ನಿಮ್ಮ ಮನೆಯಂತೆ ಮಾಡಿಕೊಂಡು ಹಾಳು ಮಾಡಿದ್ದೀರಿ ಎಂದು ತಿರುಗೇಟು ನೀಡಿದರು.

ಕಲ್ಯಾಣ ಕರ್ನಾಟಕದ ಅವ್ಯವಹಾರ ತನಿಖೆಗೆ ಆಗ್ರಹ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೊರೊನಾ ನಿಯಂತ್ರಣ ಸಲಕರಣೆ ಖರೀದಿಯಲ್ಲಿ ಟೆಂಡರ್‌ ಕರೆಯುವಲ್ಲಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್‌ ಸದಸ್ಯ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ನಿಯಮ 69 ರಡಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಮಂಡಳಿಯ ಹಣದಿಂದ ಕೋವಿಡ್‌ ಉಪಕರಣ ಖರೀದಿಸಲಾಗಿದೆ.

ಕಲ್ಯಾಣ ಕರ್ನಾಟಕ ಯೋಜನೆಗಳನ್ನು ಜಾರಿಗೊಳಿಸಲು ಖಾಸಗಿ ಸಂಸ್ಥೆಗೆ ನೀಡಿದ್ದಾರೆ. ಆ ಸಂಸ್ಥೆಯನ್ನು ಯಾವ ಮಾನದಂಡದ ಅಡಿ ಆಯ್ಕೆ ಮಾಡಲಾಗಿದೆ ಎನ್ನುವುದು ಯಾರಿಗೂ ಮಾಹಿತಿಯಿಲ್ಲ. ಸರ್ಕಾರದ ಪರವಾಗಿ ಖಾಸಗಿ ಸಂಸ್ಥೆಯೇ ಅರ್ಜಿಗಳನ್ನು ಕರೆಯುತ್ತದೆ. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಮೂಲಕ ಜನರನ್ನು ತೀರ್ಥ ಯಾತ್ರೆಗೆ ಕಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇದರಿಂದ ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿಯಾಗುತ್ತಾ ಎಂದು ಪ್ರಶ್ನಿಸಿದರು.

ಈ ಸಂಸ್ಥೆಗೆ ಕಾನೂನು ಬಾಹಿರವಾಗಿ 100 ಕೋಟಿ ರೂ. ನೀಡಿರುವುದನ್ನು ವಾಪಸ್‌ ಪಡೆಯಬೇಕು. ಈ ಸಂಸ್ಥೆಗೆ ಹಣ ನೀಡಿರುವ ಬಗ್ಗೆ ತನಿಖೆ ನಡೆಸಬೇಕು. ಕೆಕೆಆರ್‌ಡಿ ಅಭಿವೃದ್ಧಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.