ಖಂಡ್ರೆ, ಖರ್ಗೆ, ಧರಂ 50 ವರ್ಷ ಆಳಿದ್ದಾರೆ, ಅಭಿವೃದ್ಧಿ ಮಾಡಿಲ್ಲ: ಯತ್ನಾಳ್‌

ಕಲ್ಯಾಣ ಕರ್ನಾಟಕ ಯೋಜನೆಗಳನ್ನು ಜಾರಿಗೊಳಿಸಲು ಖಾಸಗಿ ಸಂಸ್ಥೆಗೆ ನೀಡಿದ್ದಾರೆ.

Team Udayavani, Sep 24, 2021, 3:40 PM IST

ಖಂಡ್ರೆ, ಖರ್ಗೆ, ಧರಂ 50 ವರ್ಷ ಆಳಿದ್ದಾರೆ, ಅಭಿವೃದ್ಧಿ ಮಾಡಿಲ್ಲ: ಯತ್ನಾಳ್‌

ವಿಧಾನಸಭೆ: ಕಲ್ಯಾಣ ಕರ್ನಾಟಕ ಭಾಗವನ್ನು ಕಳೆದ 50 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್‌ ಹಾಗೂ ಭೀಮಣ್ಣ ಖಂಡ್ರೆ ಆಳ್ವಿಕೆ ಮಾಡಿದ್ದಾರೆ. ಇಷ್ಟು ವರ್ಷ ಆಳ್ವಿಕೆ ಮಾಡಿದರೂ, ಆ ಭಾಗದ ಅಭಿವೃದ್ಧಿ ಮಾಡಿಲ್ಲ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದರು. ಅಲ್ಲದೇ, ಕಲ್ಯಾಣ ಕರ್ನಾಟಕ ಭಾಗಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಹೆಚ್ಚಿನ ಅನುದಾನ ನೀಡಿ ಆ ಭಾಗದಲ್ಲಿ ಅಭಿವೃದ್ಧಿಯಾಗುವಂತೆ ನೋಡಿಕೊಂಡಿದ್ದಾರೆ
ಎಂದು ಹೇಳಿದರು.

ಅವರ ಹೇಳಿಕೆಗೆ ಕಾಂಗ್ರೆಸ್‌ ಸದಸ್ಯರಾದ ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್‌ ಅವರು ಆಳ್ವಿಕೆ ಮಾಡಿಲ್ಲ. ಜನರ ಸೇವೆ ಮಾಡಿದ್ದಾರೆ. ಅವರು ಅಭಿವೃದ್ಧಿ ಕಾರ್ಯ ಮಾಡಿದ್ದರಿಂದಲೇ ಜನರು ಅವರನ್ನು ನಿರಂತರ ಆಯ್ಕೆ ಮಾಡಿದ್ದಾರೆ. ಯತ್ನಾಳ ಅವರಿಗೆ ಯಡಿಯೂರಪ್ಪ ಅವರ ಮೇಲೆ ಈಗಿರುವ ಪ್ರೀತಿ ಒಂದು ತಿಂಗಳ ಹಿಂದೆ ಇದ್ದಿದ್ದರೆ ಒಳ್ಳೆಯದಿತ್ತು ಎಂದರು.

ಈಶ್ವರ ಖಂಡ್ರೆ ಆಕ್ಷೇಪಕ್ಕೆ ಬಸನಗೌಡ ಯತ್ನಾಳ್‌, ನಾನು ಯಾವುದೇ ಮಠಾಧೀಶರ ಕಾಲು ಹಿಡಿದು ಮಂತ್ರಿಯಾಗಿಲ್ಲ. ವೀರಶೈವ ಮಹಾಸಭೆಯನ್ನು ನಿಮ್ಮ ಮನೆಯಂತೆ ಮಾಡಿಕೊಂಡು ಹಾಳು ಮಾಡಿದ್ದೀರಿ ಎಂದು ತಿರುಗೇಟು ನೀಡಿದರು.

ಕಲ್ಯಾಣ ಕರ್ನಾಟಕದ ಅವ್ಯವಹಾರ ತನಿಖೆಗೆ ಆಗ್ರಹ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೊರೊನಾ ನಿಯಂತ್ರಣ ಸಲಕರಣೆ ಖರೀದಿಯಲ್ಲಿ ಟೆಂಡರ್‌ ಕರೆಯುವಲ್ಲಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್‌ ಸದಸ್ಯ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ನಿಯಮ 69 ರಡಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಮಂಡಳಿಯ ಹಣದಿಂದ ಕೋವಿಡ್‌ ಉಪಕರಣ ಖರೀದಿಸಲಾಗಿದೆ.

ಕಲ್ಯಾಣ ಕರ್ನಾಟಕ ಯೋಜನೆಗಳನ್ನು ಜಾರಿಗೊಳಿಸಲು ಖಾಸಗಿ ಸಂಸ್ಥೆಗೆ ನೀಡಿದ್ದಾರೆ. ಆ ಸಂಸ್ಥೆಯನ್ನು ಯಾವ ಮಾನದಂಡದ ಅಡಿ ಆಯ್ಕೆ ಮಾಡಲಾಗಿದೆ ಎನ್ನುವುದು ಯಾರಿಗೂ ಮಾಹಿತಿಯಿಲ್ಲ. ಸರ್ಕಾರದ ಪರವಾಗಿ ಖಾಸಗಿ ಸಂಸ್ಥೆಯೇ ಅರ್ಜಿಗಳನ್ನು ಕರೆಯುತ್ತದೆ. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಮೂಲಕ ಜನರನ್ನು ತೀರ್ಥ ಯಾತ್ರೆಗೆ ಕಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇದರಿಂದ ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿಯಾಗುತ್ತಾ ಎಂದು ಪ್ರಶ್ನಿಸಿದರು.

ಈ ಸಂಸ್ಥೆಗೆ ಕಾನೂನು ಬಾಹಿರವಾಗಿ 100 ಕೋಟಿ ರೂ. ನೀಡಿರುವುದನ್ನು ವಾಪಸ್‌ ಪಡೆಯಬೇಕು. ಈ ಸಂಸ್ಥೆಗೆ ಹಣ ನೀಡಿರುವ ಬಗ್ಗೆ ತನಿಖೆ ನಡೆಸಬೇಕು. ಕೆಕೆಆರ್‌ಡಿ ಅಭಿವೃದ್ಧಿಗೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.