ಅಪಹರಣ ಪ್ರಕರಣ; ಬನ್ನಂಜೆ ರಾಜನ ಸಹಚರನ ಜಾಮೀನು ಅರ್ಜಿ ವಜಾ
ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ
Team Udayavani, Nov 17, 2022, 10:10 AM IST
ಬೆಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 2019ರಲ್ಲಿ ನಡೆದಿದ್ದ ಉದ್ಯಮಿಯೊಬ್ಬರ ಪುತ್ರನ ಅಪಹರಣ ಹಾಗೂ ಕೊಲೆ ಬೆದರಿಕೆ ಪ್ರಕರಣ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿಕುಮಾರ್ ಅಲಿಯಾಸ್ ಶಶಿ ಪೂಜಾರಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ:ಇರುವುದು ಬರೀ 7.5 ಕೋ.ರೂ.: ಬೇಕಿದೆ ಹಲವು ಆಟಗಾರರು; ಕೋಲ್ಕತ ನೈಟ್ ರೈಡರ್ಸ್ ಗೆ ಸಂಕಷ್ಟ
ಶಶಿ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪ ಪಟ್ಟಿಯಲ್ಲಿನ ಹಲವು ಅಂಶಗಳನ್ನು ಉಲ್ಲೇಖಿಸಿ, ಆರೋಪಿ (ಅರ್ಜಿದಾರ) ಹಲವು ಬಾರಿ ಬನ್ನಂಜೆ ರಾಜನನ್ನು ಭೇಟಿಯಾಗಿದ್ದಾನೆ ಎನ್ನುವುದು ತನಿಖೆ ವೇಳೆ ದೃಢಪಟ್ಟಿದೆ. ಹಾಗಾಗಿ, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.
ಆರೋಪಿಯನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ ಎಂದು ಜಾಮೀನು ತಿರಸ್ಕರಿಸಿರುವುದಕ್ಕೆ ಕಾರಣ ನೀಡಿರುವ ನ್ಯಾಯಪೀಠ, ಆರೋಪಿ ತನಗೂ ಕೃತ್ಯಕ್ಕೂ ಸಂಬಂಧವಿಲ್ಲವೆಂದು ಹೇಳುತ್ತಿದ್ದಾನೆ.
ಆದರೆ ಅರ್ಜಿದಾರರ ಸಹೋದರ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಜೈಲಿನಲ್ಲಿದ್ದುಕೊಂಡೇ ಅರ್ಜಿದಾರರ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದಿದ್ದಾನೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಅರ್ಜಿದಾರ ಎರಡನೇ ಆರೋಪಿ ಮತ್ತು ಬನ್ನಂಜೆ ರಾಜ ಮೊದಲನೇ ಆರೋಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್