ಕಡಲ ಕಾವಲಿನಲ್ಲಿ ಕೆಎನ್‌ಡಿ ಸಕ್ರಿಯ

ಸಿಎಸ್‌ಪಿಗೆ ಸ್ಥಳೀಯರ ನೇಮಕ: ಇನ್ನೂ ಈಡೇರದ ಬೇಡಿಕೆ

Team Udayavani, Sep 18, 2020, 6:22 AM IST

ಕಡಲ ಕಾವಲಿನಲ್ಲಿ ಕೆಎನ್‌ಡಿ ಸಕ್ರಿಯ

ಸಾಂದರ್ಭಿಕ ಚಿತ್ರ

ಮಂಗಳೂರು: ಕಡಲು/ ತೀರದಲ್ಲಿ ಭದ್ರತೆ ನೀಡುವ ಕರಾವಳಿ ಕಾವಲು ಪೊಲೀಸ್‌ಗೆ (ಸಿಎಸ್‌ಪಿ) ಸ್ಥಳೀಯರನ್ನೇ ನೇಮಿಸಿಕೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಇನ್ನೂ ಮನ್ನಣೆ ಸಿಕ್ಕಿಲ್ಲ. ಆದರೆ ಸ್ಥಳೀಯರನ್ನೊಳಗೊಂಡ ಕೆಎನ್‌ಡಿ(ಕರಾವಳಿ ನಿಯಂತ್ರಣ ದಳ) ಕರಾವಳಿ ಕಾವಲು ಪೊಲೀಸರಿಗೆ ಸಾಥ್‌ ನೀಡಿ ಕರಾವಳಿಯ ಕಾವಲು ಕಾಯುತ್ತಿದೆ.

ಸಮುದ್ರದ ಬಗ್ಗೆ ಸರಿಯಾದ ಮಾಹಿತಿ ಇರುವವರು, ಬೋಟ್‌ಗಳ ಬಗ್ಗೆ ತಿಳಿದಿರುವವರು, ಉತ್ತಮ ಈಜುಪಟುಗಳು, ಸಮುದ್ರ ಭಾಗದ ವಾತಾವರಣಕ್ಕೆ ಹೊಂದಿಕೊಳ್ಳುವ ವರನ್ನು ಅರ್ಥಾತ್‌ ಸಮುದ್ರ ಪಕ್ಕದಲ್ಲೇ ವಾಸವಿರುವ ಮೀನುಗಾರ ಸಮುದಾಯ ಅಥವಾ ಮೀನು ಗಾರಿಕಾ ವೃತ್ತಿ ನಡೆಸುವ ಕುಟುಂಬ ಗಳ ಯುವಕರನ್ನೇ ಕರಾವಳಿ ಕಾವಲು ಪೊಲೀಸ್‌ಗೆ ನೇಮಕ ಮಾಡಿಕೊಳ್ಳಬೇಕು ಎಂಬುದು ಹಲವು ವರ್ಷಗಳಿಂದ ಇರುವ ಬೇಡಿಕೆ. ಸಮುದ್ರ/ತೀರದಲ್ಲಿ ಅವಘಡಗಳಾ ದಾಗ, ಅನಪೇಕ್ಷಿತ ಘಟನೆಗಳಾದಾಗ ಈ ವಿಚಾರ ಚರ್ಚೆಗೆ ಬರುತ್ತಿದೆ. ಆದರೆ ಈ ಕುರಿತಾಗಿ ಸರಕಾರದ ಮಟ್ಟದಲ್ಲಿ ಇನ್ನೂ ನಿರ್ಧಾರಗಳು ಹೊರಬಿದ್ದಿಲ್ಲ.

ಪ್ರತ್ಯೇಕ ನೇಮಕಾತಿ ಬೇಕು
ಸದ್ಯ ಕರಾವಳಿ ಕಾವಲು ಪೊಲೀಸ್‌ಗೆ ಜಿಲ್ಲಾ ಪೊಲೀಸ್‌ನಿಂದ ಕೆಲವು ಸಿಬಂದಿಯನ್ನು ಡೆಪ್ಯುಟೇಶನ್‌ನಲ್ಲಿ ನೀಡಲಾಗುತ್ತದೆ. ಒಂದುವೇಳೆ ಕರಾವಳಿ ಕಾವಲು ಪೊಲೀಸ್‌ಗೆ ಪ್ರತ್ಯೇಕ ನೇಮಕಾತಿ ನಡೆದರೆ, ಅದಕ್ಕೆ ಪೂರಕವಾಗಿ ಸರಕಾರ ನಿರ್ಧಾರಗಳನ್ನು ತೆಗೆದುಕೊಂಡು ಸ್ಥಳೀಯರ ಆಯ್ಕೆಗೆ ಅವಕಾಶ ನೀಡಿದರೆ ಮಾತ್ರ ಇದು ಕಾರ್ಯಸಾಧ್ಯವಾಗಬಹುದು.

ತರಬೇತಿ ಪಡೆದರೂ ನಿರಾಸಕ್ತಿ
ಕರಾವಳಿಯ ಯುವಜನತೆ ಇಲಾಖೆಗೆ ಸೇರಬೇಕೆಂಬ ಉದ್ದೇಶ ದಿಂದ ಪೊಲೀಸ್‌ ಇಲಾಖೆ ಕಳೆದ ಬಾರಿ 240 ಮಂದಿಗೆ ಇಲಾಖೆಯ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಲು ಶಿಬಿರ ನಡೆಸಿತ್ತು. ಅರ್ಜಿ ಸಲ್ಲಿಸಿದವರು 40 ಮಂದಿ ಮಾತ್ರ. ಅದರಲ್ಲಿಯೂ ಆಯ್ಕೆ ಹಂತದವರೆಗೆ ಹೋದವರು ಸುಮಾರು ಐವರಷ್ಟೇ. ಅವರಲ್ಲಿ ಮೂವರು ಮಹಿಳೆಯರು. ನೇಮಕಾತಿ ಆದೇಶ ಇನ್ನಷ್ಟೇ ಆಗಬೇಕಿದೆ.

ಕರಾವಳಿ ಕಾವಲು ಪೊಲೀಸ್‌(ಸಿಎಸ್‌ಪಿ) ಜತೆಗೆ 200 ಮಂದಿಯನ್ನೊಳಗೊಂಡ ಕೆಎನ್‌ಡಿ (ಕರಾವಳಿ ನಿಯಂತ್ರಣ ದಳ) ಕೆಲಸ ಮಾಡುತ್ತಿದೆ. ಕೆಎನ್‌ಡಿ ಸಂಪೂರ್ಣವಾಗಿ ಸ್ಥಳೀಯರನ್ನೊಳಗೊಂಡಿರುವ ದಳ. ಗೃಹರಕ್ಷಕರ ನೆಲೆಯಲ್ಲಿ ಇವರ ಸೇವೆ ಪಡೆದುಕೊಳ್ಳಲಾಗುತ್ತಿದೆ. ಕರಾವಳಿ ಕಾವಲು ಪೊಲೀಸ್‌ಗೆ ಸ್ಥಳೀಯರ ನೇಮಕ ಮಾಡಿಕೊಳ್ಳಬೇಕಾದರೆ ಸರಕಾರದ ಮಟ್ಟದಲ್ಲಿಯೇ ತೀರ್ಮಾನವಾಗಬೇಕಾಗುತ್ತದೆ.
-ಚೇತನ್‌ ಕುಮಾರ್‌, ಎಸ್‌ಪಿ, ಕರಾವಳಿ ಕಾವಲು ಪೊಲೀಸ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.