ಕೊಡಗು ಪ್ರಾಕೃತಿಕ ವಿಕೋಪ ಪುನರ್ವಸತಿ: 463 ಮನೆಗಳು ಮಾಸಾಂತ್ಯದಲ್ಲಿ ಹಸ್ತಾಂತರ


Team Udayavani, May 16, 2020, 6:40 AM IST

463 ಮನೆಗಳು ಮಾಸಾಂತ್ಯದಲ್ಲಿ ಹಸ್ತಾಂತರ

ಸುಳ್ಯ: ಎರಡು ವರ್ಷಗಳ ಹಿಂದೆ ಪ್ರಾಕೃತಿಕ ವಿಕೋಪದಿಂದ ನೆಲೆ ಕಳೆದುಕೊಂಡಿದ್ದ ಕೊಡಗಿನ 463 ಕುಟುಂಬಗಳಿಗೆ ಸೂರು ಸಿದ್ಧವಾಗಿದೆ. ದ.ಕ. ಜಿಲ್ಲೆಯ ಗಡಿಭಾಗದ ಸನಿಹ ದಲ್ಲಿರುವ ಮದೆಯಲ್ಲಿ 80 ಮತ್ತು ಜಂಬೂರು ಗ್ರಾಮದಲ್ಲಿ 383 ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮಾಸಾಂತ್ಯಕ್ಕೆ ಫ‌ಲಾನುಭವಿಗಳಿಗೆ ಹಸ್ತಾಂತರ ನಡೆಯಲಿದೆ.

2018ರಲ್ಲಿ ಭೀಕರ ಪಾಕೃತಿಕ ವಿಕೋಪದ ಪರಿಣಾಮ ಕೊಡಗಿನ 48 ಗ್ರಾಮ ಗಳಲ್ಲಿ ಅಪಾರ ಹಾನಿ ಸಂಭವಿಸಿತ್ತು. 850ಕ್ಕೂ ಅಧಿಕ ಕುಟುಂಬಗಳು ಮನೆ ಕಳೆದುಕೊಂಡಿದ್ದವು. 20 ಜನರು ಬಲಿಯಾಗಿ 3,500ಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದರು. 10 ಸಾವಿರ ಕೋ.ರೂ. ಆಸ್ತಿಪಾಸ್ತಿ ನಷ್ಟ ಉಂಟಾಗಿತ್ತು.ತನ್ನ ಅನುದಾನ ಮತ್ತು ದಾನಿಗಳ ಸಹಕಾರದೊಂದಿಗೆ ಮನೆಗಳ ನಿರ್ಮಾಣಕ್ಕೆ ಮುಂದಾದ ಸರಕಾರವು ಫಲಾನುಭವಿ ಬಯಸುವಲ್ಲಿ ಆತನಿಗೆ ಒಪ್ಪಿಗೆ ಆಗುವ ಮಾದರಿಯ ಮನೆಯ ನಿರ್ಮಾಣ ಮಾಡುವುದಾಗಿ ತಿಳಿಸಿತು. ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಂಬೂರು ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕೊಡಗಿನ ಕರ್ಣಂಗೇರಿ, ಮದೆ, ಗಾಳಿಬೀಡು, ಜಂಬೂರು, ನಿಡುಗಣಿ ಗ್ರಾಮಗಳಲ್ಲಿ ಸ್ಥಳ ಗುರುತಿಸಲಾಗಿತ್ತು. ಕರ್ಣಂಗೇರಿ ಗ್ರಾಮದ 35 ಮಂದಿ ಸಂತ್ರಸ್ತರಿಗಷ್ಟೇ ಜಿಲ್ಲಾಡಳಿತವು ಕಳೆದ ವರ್ಷ ಮನೆ ಹಸ್ತಾಂತರಿಸಿತ್ತು.

9.85ಲಕ್ಷ ರೂ. ವೆಚ್ಚ
ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ 9.85 ಲಕ್ಷ ರೂ. ವೆಚ್ಚದಲ್ಲಿ ಮನೆಯನ್ನು ನಿರ್ಮಿಸಲಾಗುತ್ತದೆ. ಎರಡು ಮಲಗುವ ಕೊಠಡಿ, ಅಡುಗೆ ಕೋಣೆ, ಶೌಚಾಲಯ, ಸ್ನಾನಗೃಹ, ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೂ ಅವಕಾಶ ಇದೆ.

ಆಯ್ಕೆಗೆ ಸರ್ವೇ
ಮದೆನಾಡು ಗ್ರಾಮಕರಣಿಕ ಕಚೇರಿ ವ್ಯಾಪ್ತಿಯ 140 ಮಂದಿ ಅರ್ಜಿ ಸಲ್ಲಿಸಿ ದ್ದಾರೆ. ನೋಡಲ್‌ ಅಧಿಕಾರಿಗಳ ತಂಡ ಅರ್ಹರನ್ನು ಗುರುತಿಸಿ ಅಂತಿಮ ಪಟ್ಟಿ ಸಲ್ಲಿಸಲಿದೆ. ಅಂತಿಮ ಪಟ್ಟಿಯಲ್ಲಿ ಇರುವವರಿಗೆ ಮನೆ ದೊರಕಲಿದೆ.

ಸಂಪಾಜೆಯ ಸ್ಥಳ ರದ್ದು
ಕೊಡಗು ಸಂಪಾಜೆಯ ಸಂತ್ರಸ್ತರಿಗೆ ಸಂಪಾಜೆ ಶಾಲೆ ಬಳಿ 1.50 ಎಕರೆ ಸ್ಥಳ ಗುರುತಿಸಲಾಗಿತ್ತು. ಆದರೆ ಸ್ಥಳ ಸರ್ಮಪಕವಾಗಿಲ್ಲ ಎಂಬ ಕಾರಣ ದಿಂದ ಜಿಲ್ಲಾಡಳಿತ ಅಲ್ಲಿ ಮನೆ ನಿರ್ಮಾಣ ಪ್ರಸ್ತಾವನೆ ಕೈ ಬಿಟ್ಟಿದೆ. ಅರೆಕಲ್ಲು ಪ್ರದೇಶದ ಮೂವರು ಫಲಾನುಭವಿಗಳಿಗೆ ಅವರು ಬೇಡಿಕೆ ಇರಿಸಿದ ಪುನರ್ವಸತಿ ಸ್ಥಳದಲ್ಲಿ ಮನೆ ಮಂಜೂರಾತಿ ನೀಡಲಾಗಿದೆ.

ನಾಲ್ಕು ಜೀವ ಹಾನಿ ಸಂಭವಿಸಿದ್ದ ಮದೆ ವ್ಯಾಪ್ತಿಯ ಜೋಡುಪಾಲ, ಮೊಣ್ಣಂಗೇರಿ ಹಾಗೂ ಇತರ ಭಾಗದ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಪೂರ್ಣಗೊಂಡಿದ್ದು, ಅರ್ಹರನ್ನು ಗುರುತಿಸಿ ಈ ಮಾಸಾಂತ್ಯದಲ್ಲಿ ಹಸ್ತಾಂತರ ಮಾಡಲಾಗುವುದು.
– ರಶೀದಾ,
ಗ್ರಾಮಕರಣಿಕರು, ಮದೆನಾಡು

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.