ಕೊಡಗಿನಲ್ಲಿ ಕೋವಿಡ್ಗೆ ಮೊದಲ ಬಲಿ
Team Udayavani, Jul 6, 2020, 8:09 PM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ -19 ಮುಂದುವರಿದಿದ್ದು, ಮೊದಲ ಸಾವು ಸಂಭವಿಸಿದೆ.
ಕುಶಾಲನಗರದ ದಂಡಿನ ಪೇಟೆಯ 58 ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಭಾನುವಾರ ಮೃತಪಟ್ಟಿದ್ದು, ಸೋಮವಾರ ಬಂದ ಕೋವಿಡ್ -19ರ ಪರೀಕ್ಷಾ ವರದಿಯಲ್ಲಿ ಅವರಿಗೆ ಸೋಂಕು ದೃಢವಾಗಿದೆ.
ಬೆಂಗಳೂರು ಜ್ಯೋತಿನಗರದ ನಿವಾಸಿಯಾಗಿದ್ದ ಅವರು ಕುಶಾಲನಗರದ ದಂಡಿನಪೇಟೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.
ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ಅರ್ಧ ಗಂಟೆಯಲ್ಲೇ ಮೃತಪಟ್ಟರು.
ಅವರು ಸುಮಾರು 10 ವರ್ಷಗಳಿಂದ ಸಕ್ಕರೆ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆನ್ನಲಾಗಿದೆ.
ಅವರ ಅಂತ್ಯಸಂಸ್ಕಾರವನ್ನು ಸರಕಾರದ ಮಾರ್ಗಸೂಚಿಯಂತೆ ಮಡಿಕೇರಿಯ ರಾಣಿ ಪೇಟೆಯ ಕಬರ್ ಸ್ಥಾನದಲ್ಲಿ ನೆರವೇರಿಸಲಾಗಿದೆ.
ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.