ಕೋಡಿಬೆಂಗ್ರೆ-ಹಂಗಾರಕಟ್ಟೆ ಮಿನಿ ಬಾರ್ಜ್‌ ಸ್ಥಗಿತ


Team Udayavani, May 23, 2020, 5:55 AM IST

ಕೋಡಿಬೆಂಗ್ರೆ-ಹಂಗಾರಕಟ್ಟೆ ಮಿನಿ ಬಾರ್ಜ್‌ ಸ್ಥಗಿತ

ಕೋಟ: ಕೋಡಿಬೆಂಗ್ರೆ ಯಿಂದ ಹಂಗಾರಕಟ್ಟೆಯನ್ನು ಸಂಪರ್ಕಿ ಸುವ ಮಿನಿ ಬಾರ್ಜ್‌ ಸೇವೆ ಲಾಕ್‌ಡೌನ್‌ನ ಕಾರಣಕ್ಕೆ ಸ್ಥಗಿತಗೊಂಡಿದ್ದು ಇದೀಗ ಲಾಕ್‌ಡೌನ್‌ ಸಡಿಲಗೊಂಡು ಬಸ್ಸು ಮುಂತಾದ ಸಾಮೂಹಿಕ ಸೇವೆಗಳು ಪುನರಾರಂಭಗೊಂಡರೂ ಪುನರಾರಂಭಗೊಂಡಿಲ್ಲ. ಇದರಿಂದಾಗಿ ಎರಡು ಪ್ರದೇಶಗಳ ನೂರಾರು ಮಂದಿ ಕಾರ್ಮಿಕರು, ಸ್ಥಳೀಯರಿಗೆ ಪ್ರತಿ ದಿನ ಸಮಸ್ಯೆಯಾಗುತ್ತಿದೆ.

ಸ್ಥಳೀಯರಿಗೆ ಸಮಸ್ಯೆ
ಅರಬ್ಬಿ ಸಮುದ್ರವನ್ನು ಸೇರುವ ಸೀತಾನದಿಯ ಅಳಿವೆ ಹಾಗೂ ಸುತ್ತಲೂ ಸಮುದ್ರದಿಂದ ಆವೃತ್ತವಾದ ದ್ವೀಪ ಪ್ರದೇಶ ಕೋಡಿ ಬೆಂಗ್ರೆ. ಇಲ್ಲಿ ನೂರಾರು ಮನೆಗಳಿದ್ದು ಇಲ್ಲಿನ ನಿವಾಸಿಗಳು ಮೀನುಗಾರಿಕೆ, ಗ್ರಾ.ಪಂ. ಕಚೇರಿ, ಬ್ಯಾಂಕ್‌ಗಳಿಗೆ ಭೇಟಿ ಮುಂತಾದ ನಿತ್ಯ ಕೆಲಸಗಳಿಗೆ ಮಿನಿ ಬಾರ್ಜ್‌ ಮೂಲಕ ಹಂಗಾರಕಟ್ಟೆ, ಮಾಬುಕಳ, ಸಾಸ್ತಾನಕ್ಕೆ ಭೇಟಿ ನೀಡುತ್ತಾರೆ. ಇವರು ಬಾರ್ಜ್‌ ಹೊರತುಪಡಿಸಿ ಹಂಗಾರಕಟ್ಟೆ-ಕೋಡಿ ಕನ್ಯಾಣವನ್ನು ಸಂಪರ್ಕಿಸ ಬೇಕಾದರೆ ಕೆಮ್ಮಣ್ಣು, ನೇಜಾರು,ಸಂತೆಕಟ್ಟೆ ಬ್ರಹ್ಮಾವರ ಮೂಲಕ ಸುಮಾರು25 ಕಿ.ಮೀ ಸುತ್ತುವರಿದು ಪ್ರಯಾಣಿಸಬೇಕು ಮತ್ತು ರಿಕ್ಷಾದವರಿಗೆ 300-400ರೂ ನೀಡಬೇಕು. ಆದರೆ ಬಾರ್ಜ್‌ ಮೂಲಕ 4-5 ಕಿ.ಮೀ ಪ್ರಯಾಣದಲ್ಲೆ ತಲುಪಬಹುದು. ಇದೀಗ ಸೇವೆ ಸ್ಥಗಿತಗೊಂಡಿರುವುದರಿಂದ ಕೆಲವರು ಸ್ವಂತ ದೋಣಿಯ ಮೂಲಕ ಸಂಚರಿಸುತ್ತಿದ್ದಾರೆ ಹಾಗೂ ಮತ್ತೆ ಕೆಲವರಿಗೆ ಸಂಪರ್ಕ ಸಾಧ್ಯವಾಗದೆ ಸಾಕಷ್ಟು ಸಮಸ್ಯೆಯಾಗುತ್ತಿದೆ.

ಬಸ್ಸು ಸೇವೆ
ರೀತಿಯಲ್ಲೇ ಆರಂಭಿಸಿ
ಮಿನಿ ಬಾರ್ಜ್‌ ಪುನರಾರಂಭದ ಕುರಿತು ಸ್ಥಳೀಯರು ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಇದೇ ಕಾರಣಕ್ಕೆ ಸೇವೆ ಪುನರಾರಂಭಗೊಂಡಿಲ್ಲ ಎನ್ನುತ್ತಿದ್ದಾರೆ. ಆದರೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್‌ ಬಳಕೆಯನ್ನು ಕಡ್ಡಾಯಗೊಳಿಸುವ ಮೂಲಕ ಬಸ್ಸು ಸೇವೆ ಅವಕಾಶ ನೀಡಿದಂತೆ ಬಾರ್ಜ್‌ ಸೇವೆಯನ್ನು ಆರಂಭಿಸಬೇಕು ಎನ್ನುವುದು ಸ್ಥಳೀಯರ ಮನವಿಯಾಗಿದೆ.

ಶೀಘ್ರ ಕ್ರಮಕೈಗೊಳ್ಳಲಿ
ಮಿನಿ ಬಾರ್ಜ್‌ ಸೇವೆ ಸ್ಥಗಿತಗೊಂಡಿರುವುದರಿಂದ ಸ್ಥಳೀಯ ನೂರಾರು ಮಂದಿಗೆ ಪ್ರತಿದಿನ ಸಮಸ್ಯೆಯಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದರೂ ಪೂರಕ ಪ್ರತಿಕ್ರಿಯೆ ಇಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು.
-ನವೀನ್‌ ಕುಂದರ್‌, ಸ್ಥಳೀಯ ಗ್ರಾ.ಪಂ. ಸದಸ್ಯ

ಸೂಚನೆ ನೀಡಿದರೆ ಸಿದ್ಧ
ಕೋವಿಡ್-19 ವೈರಸ್‌ ಸಮಸ್ಯೆಯ ಕಾರಣಕ್ಕೆ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಎಲ್ಲ ಬಾರ್ಜ್‌ಗಳ ಸೇವೆಯನ್ನು ಮೇ 31ರ ತನಕ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆದರೆ ಹಂಗಾರಕಟ್ಟೆಯಲ್ಲಿ ಪುನರಾರಂಭಕ್ಕೆ ಸ್ಥಳೀಯರಿಂದ ಬೇಡಿಕೆ ಇದೆ. ಜಿಲ್ಲಾಡಳಿತ ಸೂಚನೆ ನೀಡಿದರೆ ಕ್ರಮಕೈಗೊಳ್ಳಲಾಗುವುದು.
-ಥೋಮಸ್‌, ಫೆರ್ರಿ ತಪಾಸಕ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.